ಸೆಕ್ಯೂರಿಟೀಸ್ ಅಂಡ್ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI)ಯಿಂದ ಶುಕ್ರವಾರದಂದು ರಿಲಯನ್ಸ್ ಇಂಡಸ್ಟ್ರೀಸ್, ಅದರ ಮುಖ್ಯಸ್ಥ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಮುಕೇಶ್ ಅಂಬಾನಿ ಹಾಗೂ ಇತರ ಎರಡು ಸಂಸ್ಥೆಗಳಿಗೆ ದಂಡ ವಿಧಿಸಲಾಗಿದೆ. 2007ರ ನವೆಂಬರ್ ನಲ್ಲಿ ಆಗಿನ ರಿಲಯನ್ಸ್ ಪೆಟ್ರೋಲಿಯಂ (RPL) ಷೇರುಗಳಲ್ಲಿ ದುರುದ್ದೇಶಪೂರ್ವಕ ವ್ಯವಹಾರ ನಡೆಸಿದ ಆರೋಪದಲ್ಲಿ ಈ ದಂಡ ಹಾಕಲಾಗಿದೆ.
ರಿಲಯನ್ಸ್ ಗೆ 25 ಕೋಟಿ ರುಪಾಯಿ ಮತ್ತು ಮುಕೇಶ್ ಅಂಬಾನಿಗೆ 15 ಕೋಟಿ ರುಪಾಯಿ ದಂಡ ವಿಧಿಸಲಾಗಿದೆ. ಇದರ ಹೊರತಾಗಿ ನವೀ ಮುಂಬೈ SEZನಿಂದ 20 ಕೋಟಿ ರುಪಾಯಿ ಮತ್ತು ಮುಂಬೈ SEZನಿಂದ 10 ಕೋಟಿ ರುಪಾಯಿ ಪಾವತಿಸುವಂತೆ ನಿರ್ದೇಶಿಸಲಾಗಿದೆ.
ಆರ್ ಪಿಎಲ್ ಷೇರುಗಳನ್ನು ಕ್ಯಾಶ್ ಮತ್ತು ಫ್ಯೂಚರ್ ಸೆಗ್ಮೆಂಟ್ ನಲ್ಲಿ ನವೆಂಬರ್ 2007ರಲ್ಲಿ ಖರೀದಿ ಮತ್ತು ಮಾರಾಟಕ್ಕೆ ಸಂಬಂಧಿಸಿದಂಥ ಪ್ರಕರಣ ಇದು. ಮಾರ್ಚ್ 2007ರಲ್ಲಿ ರಿಲಯನ್ಸ್ ನಿಂದ ಆರ್ ಪಿಎಲ್ ನ 4.1% ಷೇರಿನ ಪಾಲು ಮಾರಾಟ ಮಾಡಲು ಮುಂದಾಗಿತ್ತು. ಆರ್ ಪಿಎಲ್ ಎಂಬುದು ಲಿಸ್ಟೆಡ್ ಅಂಗಸಂಸ್ಥೆಯಾಗಿತ್ತು. 2009ರಲ್ಲಿ ರಿಲಯನ್ಸ್ ನಲ್ಲಿ ವಿಲೀನ ಆಗಿತ್ತು.

ಮಾರ್ಚ್ 24, 2017ರಂದು ಸೆಬಿ ಆದೇಶ ನೀಡಿ, ಆರ್ ಪಿಎಲ್ ಪ್ರಕರಣದಲ್ಲಿ ರಿಲಯನ್ಸ್ ಮತ್ತು ಇತರ ಕೆಲವು ಸಂಸ್ಥೆಗಳು 447 ಕೋಟಿ ರುಪಾಯಿಗೂ ಹೆಚ್ಚು ಮೊತ್ತವನ್ನು ನೀಡುವಂತೆ ತಿಳಿಸಿತ್ತು. ಈ ಆದೇಶದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು 2020ರ ನವೆಂಬರ್ ನಲ್ಲಿ ಸೆಕ್ಯೂರಿಟೀಸ್ ಅಪಿಲೇಟ್ ಟ್ರಿಬ್ಯುನಲ್ (SAT) ವಜಾ ಮಾಡಿತ್ತು.
ಆ ಸಮಯದಲ್ಲಿ, ಟ್ರಿಬ್ಯುನಲ್ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವುದಾಗಿ ರಿಲಯನ್ಸ್ ಹೇಳಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications