ಸೆಕ್ಯೂರಿಟೀಸ್ ಮತ್ತು ಎಕ್ಸ್ಚೇಂಜ್ ಬ್ಯೂರೋ (ಸೆಬಿ) ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಯ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಮಾಹಿತಿ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ. ಅದಾನಿ ಗ್ರೂಪ್ 2.5 ಬಿಲಿಯನ್ ಡಾಲರ್ ಎಫ್ಪಿಒ ಅನ್ನು ವಿತ್ಡ್ರಾ ಮಾಡಿಕೊಂಡ ವಿಚಾರದಲ್ಲಿ ಸೆಬಿ ತನಿಖೆಯನ್ನು ನಡೆಸುತ್ತಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರನ್ನು ಫೆಬ್ರವರಿ 15ರಂದು ಸೆಬಿ ಬೋರ್ಡ್ ಭೇಟಿಯಾಗಲಿದೆ ಎಂದು ವರದಿ ಉಲ್ಲೇಖಿಸಿದೆ. ಅದಾನಿ ಗ್ರೂಪ್ ಸ್ಟಾಕ್ ವಿಚಾರದಲ್ಲಿನ ಕ್ರಮಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆಗೆ ಸೆಬಿ ವಿವರಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಎಲ್ಲ ಬೆಳವಣಿಗೆಯು ಹಿಂಡನ್ಬರ್ಗ್ ವರದಿಯ ಬಳಿಕ ನಡೆದಿದೆ. ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ವಂಚನೆ ನಡೆಸಿದೆ ಎಂದು ಹಿಂಡನ್ಬರ್ಗ್ ವರದಿ ಮಾಡಿದೆ. ಇದಾದ ಬಳಿಕ ಅದಾನಿ ಗ್ರೂಪ್ ಮೌಲ್ಯ ಬರೋಬ್ಬರಿ 100 ಬಿಲಿಯನ್ ಡಾಲರ್ನಷ್ಟು ಕುಸಿದಿದೆ. ಅಂದರೆ ಅದಾನಿ ಗ್ರೂಪ್ ಮೌಲ್ಯ ಅರ್ಧ ಭಾಗದಷ್ಟು ಕುಸಿದಿದೆ.

ಅದಾನಿ ಗ್ರೂಪ್ನ ಫಂಡ್ಗಳ ಬಗ್ಗೆ ತನಿಖೆಯಲ್ಲಿ ಅಪ್ಡೇಟ್ ಲಭ್ಯವಾಗಿದೆ ಎಂದು ಕೂಡಾ ವರದಿಯಾಗಿದೆ. ಅದಾನಿ ಗ್ರೂಪ್ನ ಸ್ಟಾಕ್ ಮಾರುಕಟ್ಟೆ ಬೆಳವಣಿಗೆ ಬಗ್ಗೆ ಸೆಬಿ ತನಿಖೆ ನಡೆಸುತ್ತಿದೆ ಎಂದು ಮೊದಲ ಬಾರಿಗೆ ರಾಯಿಸ್ಟರ್ ವರದಿ ಮಾಡಿದೆ. ಇನ್ನು ಈ ಆರೋಪದ ಬಗ್ಗೆ ಸೆಬಿ ಸರಿಯಾದ ರೀತಿಯಲ್ಲಿ ತನಿಖೆ ನಡೆಸಲಿದೆ ಎಂದು ವರದಿಯಾಗಿದೆ.
ಏನಿದು ಹಿಂಡನ್ಬರ್ಗ್ ವರದಿ?
ತನಿಖಾ ಸಂಸ್ಥೆ ಹಿಂಡೆನ್ಬರ್ಗ್ ಅದಾನಿ ಗ್ರೂಪ್ ವಿರುದ್ಧ ಭಾರೀ ವಂಚನೆ ಆರೋಪ ಮಾಡಿದೆ. ಲೆಕ್ಕಪತ್ರ ವಂಚನೆಯಲ್ಲಿ ಹಾಗೂ ಸ್ಟಾಕ್ ಮ್ಯಾನಿಪ್ಯುಲೇಷನ್ನಲ್ಲಿ ಅದಾನಿ ಗ್ರೂಪ್ ಭಾಗವಹಿಸಿದೆ ಎಂದು ಹಿಂಡೆನ್ಬರ್ಗ್ ತನಿಖಾ ವರದಿ ಹೇಳಿದೆ. ಅದಾನಿ ಗ್ರೂಪ್ ವಿರುದ್ಧ ಮನಿ ಲಾಂಡರಿಂಗ್, ತೆರಿಗೆ ಡಾಲರ್ ಕಳ್ಳತನ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಕೂಡ ಹಿಂಡನ್ಬರ್ಗ್ ತನಿಖಾ ವರದಿ ಮಾಡಿದೆ. ಅದಾನಿ ಕುಟುಂಬದ ಸದಸ್ಯರು ಹಾಗೂ ಕಂಪನಿಗೆ ಸಂಬಂಧಿಸಿದ ಅಧಿಕಾರಿಗಳು ಮಾರಿಷಸ್, ಯುಎಇ ಮತ್ತು ಕೆರಿಬಿಯನ್ ದ್ವೀಪಗಳಲ್ಲಿ ಕಡಲಾಚೆಯ ಶೆಲ್ ಘಟಕಗಳನ್ನು ರಚಿಸಲು ಸಹಕರಿಸಿದ್ದಾರೆ. ನಕಲಿ ಅಥವಾ ಕಾನೂನುಬಾಹಿರ ವಹಿವಾಟು ಮತ್ತು ಲಿಸ್ಟೆಡ್ ಕಂಪನಿಗಳಿಂದ ಹಣವನ್ನು ಪಡೆಯುವ ಪ್ರಯತ್ನ ಮಾಡಿದ್ದಾರೆ. ನಕಲಿ ಆಮದು/ರಫ್ತು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಹಿಂಡೆನ್ಬರ್ಗ್ ತನ್ನ ತನಿಖಾ ವರದಿಯಲ್ಲಿ ತಿಳಿಸಿದೆ. ಷೇರು ಮಾರುಕಟ್ಟೆಯಲ್ಲಿ ನಕಲಿ ಷೇರುಗಳ ಸೃಷ್ಟಿ ಮಾಡಲಾಗಿದೆ ಎಂದು ಹೇಳಲಾಗಿದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications