ಸೋಮವಾರ ವಹಿವಾಟಿನಲ್ಲಿ ಭಾರೀ ನಷ್ಟ ಕಂಡಿದ್ದ ಲೋಹದ ಷೇರುಗಳು ಇಂದು ಚೇತರಿಕೆ ಕಂಡಿದೆ. ಲೋಹದ ಷೇರುಗಳಲ್ಲಿನ ಚೇತರಿಕೆಯ ಕಾರಣದಿಂದ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಭಾರತೀಯ ಷೇರುಗಳ ಲಾಭದೊಂದಿಗೆ ವಹಿವಾಟು ಆರಂಭ ಮಾಡಿದೆ.
ಕಬ್ಬಿಣದ ಅದಿರು ಮತ್ತು ಗೋಲಿಗಳಂತಹ ಉಕ್ಕಿನ ತಯಾರಿಕೆಯ ಕಚ್ಚಾ ವಸ್ತುಗಳ ಮೇಲೆ ಸರ್ಕಾರವು ಭಾರಿ ರಫ್ತು ಸುಂಕವನ್ನು ವಿಧಿಸಿದೆ. ಕಬ್ಬಿಣದ ಅದಿರುಗಳ ರಫ್ತಿನ ಮೇಲಿನ ತೆರಿಗೆಯನ್ನು ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಲಾಗಿದೆ. ಕಬ್ಬಿಣದ ಉಂಡೆಗಳ ಮೇಲೆ ಶೇ.45ರಷ್ಟು ಸುಂಕ ವಿಧಿಸಲಾಗಿದೆ.
ಉಕ್ಕಿನ ತಯಾರಿಕೆಯ ಕಚ್ಚಾ ವಸ್ತುಗಳ ಮೇಲೆ ಕೇಂದ್ರವು ರಫ್ತು ಸುಂಕವನ್ನು ವಿಧಿಸಿದ ನಂತರ ಹಿಂದಿನ ವಹಿವಾಟಿನ ಅವಧಿ ಲೋಹದ ಷೇರುಗಳು ತೀವ್ರವಾಗಿ ಕುಸಿತ ಕಂಡಿದ್ದವು. ಆದರೆ ಇಂದು ಆರಂಭಿಕ ವಹಿವಾಟಿನಲ್ಲಿ ಕೊಂಚ ಚೇತರಿಸಿದೆ.

ಆರಂಭಿಕ ವಹಿವಾಟಿನಲ್ಲಿ 30-ಷೇರು ಬಿಎಸ್ಇ ಸೆನ್ಸೆಕ್ಸ್ 121 ಪಾಯಿಂಟ್ಗಳು ಅಥವಾ ಶೇಕಡಾ 0.22 ರಷ್ಟು ಏರಿಕೆಯಾಗಿ 54,410 ಕ್ಕೆ ತಲುಪಿದೆ. ಎನ್ಎಸ್ಇ ನಿಫ್ಟಿ 20 ಪಾಯಿಂಟ್ ಅಥವಾ 0.12 ರಷ್ಟು ಏರಿಕೆಯಾಗಿ 16,235 ಕ್ಕೆ ವಹಿವಾಟು ಆರಂಭ ಮಾಡಿದೆ.
ನಿಫ್ಟಿ ಮಿಡ್ಕ್ಯಾಪ್ 100 ಶೇಕಡಾ 0.36 ಮತ್ತು ಸ್ಮಾಲ್ ಕ್ಯಾಪ್ ಶೇಕಡಾ 0.52 ರಷ್ಟು ಏರಿದ್ದರಿಂದ ಮಿಡ್ ಮತ್ತು ಸ್ಮಾಲ್ ಕ್ಯಾಪ್ ಷೇರುಗಳು ಲಾಭದೊಂದಿಗೆ ವಹಿವಾಟು ಆರಂಭ ಮಾಡಿದೆ. ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ನಲ್ಲಿ 15 ಸೆಕ್ಟರ್ನಲ್ಲಿ 11 ಉತ್ತಮ ವಹಿವಾಟು ನಡೆಸಿದೆ.
ಯಾವ ಷೇರು ನಷ್ಟ, ಯಾವ ಷೇರು ಲಾಭ?
ಎಂ&ಎಂ ಸ್ಟಾಕ್ ಶೇಕಡ 1.56 ರಷ್ಟು ಏರಿಕೆಯಾಗಿ 956.55 ರೂಪಾಯಿಗೆ ತಲುಪಿದೆ. ಎಸ್ಡಬ್ಲ್ಯು ಸ್ಟೀಲ್, ಇಂಡಸ್ಇಂಡ್ ಬ್ಯಾಂಕ್, ಬಜಾಜ್ ಆಟೋ ಮತ್ತು ಕೋಲ್ ಇಂಡಿಯಾ ಸಹ ಲಾಭ ಗಳಿಸಿದವು. 30-ಷೇರುಗಳ ಬಿಎಸ್ಇ ಸೂಚ್ಯಂಕದಲ್ಲಿ, ಎಂ & ಎಂ, ಇಂಡಸ್ಇಂಡ್ ಬ್ಯಾಂಕ್, ಟಾಟಾ ಸ್ಟೀಲ್, ಪವರ್ಗ್ರಿಡ್, ಆಕ್ಸಿಸ್ ಬ್ಯಾಂಕ್, ಎಸ್ಬಿಐ, ಕೊಟಕ್ ಮಹೀಂದ್ರಾ ಬ್ಯಾಂಕ್, ಎನ್ಟಿಪಿಸಿ ಮತ್ತು ಎಚ್ಡಿಎಫ್ಸಿ ಲಾಭ ಗಳಿಸಿದೆ.
ಅಲ್ಲದೆ, ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಷೇರುಗಳು ಕೊಂಚ ಏರಿಕೆ ಕಂಡಿದೆ. ಈ ಹಿಂದಿನ ವಹಿವಾಟಿನ ಅಂತ್ಯದಲ್ಲಿ 816.85 ರೂಪಾಯಿಗೆ ವಹಿವಾಟು ಅಂತ್ಯವಾಗಿದ್ದು, ಆದರೆ ಇಂದು ಆರಂಭಿಕ ವಹಿವಾಟಿನಲ್ಲಿ 1.26 ಶೇಕಡ ಏರಿಕೆಯಾಗಿ ರೂಪಾಯಿ 827.15 ಕ್ಕೆ ತಲುಪಿದೆ.
ಇದಕ್ಕೆ ವ್ಯತಿರಿಕ್ತವಾಗಿ ಹಿಂದೂಸ್ತಾನ್ ಯೂನಿಲಿವರ್, ಭಾರ್ತಿ ಏರ್ಟೆಲ್, ಟೈಟಾನ್, ಟಿಸಿಎಸ್, ಎಲ್ ಆಂಡ್ ಟಿ, ಇನ್ಫೋಸಿಸ್ ಮತ್ತು ಎಚ್ಸಿಎಲ್ ಟೆಕ್ ಶೇರುಗಳು ನಷ್ಟದೊಂದಿಗೆ ವಹಿವಾಟು ಆರಂಭ ಮಾಡಿದೆ. ಸೋಮವಾರ ಸೆನ್ಸೆಕ್ಸ್ 38 ಪಾಯಿಂಟ್ ಅಥವಾ ಶೇಕಡಾ 0.07 ರಷ್ಟು ಕುಸಿದು 54,289 ಕ್ಕೆ ತಲುಪಿದ್ದರೆ, ನಿಫ್ಟಿ 51 ಪಾಯಿಂಟ್ ಅಥವಾ 0.32 ಶೇಕಡಾ ಕುಸಿದು 16,215 ಕ್ಕೆ ಸ್ಥಿರವಾಗಿದೆ.
More From GoodReturns

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications