ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಮಾರುಕಟ್ಟೆಯ ಚೊಚ್ಚಲ ಪ್ರವೇಶಕ್ಕಾಗಿ ಹೂಡಿಕೆದಾರರು ಕಾಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಂಗಳವಾರ ಷೇರು ಮಾರುಕಟ್ಟೆಯ ಬೆಳವಣಿಗೆಯು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಭಾರತೀಯ ಷೇರುಗಳ ಮಾನದಂಡಗಳು ಮಂಗಳವಾರ ಆರಂಭಿಕ ವ್ಯವಹಾರಗಳಲ್ಲಿ ಹೆಚ್ಚಿನ ವಹಿವಾಟು ನಡೆಸಿವೆ.
ಆರಂಭಿಕ ವಹಿವಾಟಿನಲ್ಲಿ 30-ಷೇರು ಬಿಎಸ್ಇ ಸೆನ್ಸೆಕ್ಸ್ 254 ಪಾಯಿಂಟ್ಗಳು ಅಥವಾ ಶೇಕಡಾ 0.48 ರಷ್ಟು ಜಿಗಿದು 53,228 ಕ್ಕೆ ತಲುಪಿದೆ. ಎನ್ಎಸ್ಇ ನಿಫ್ಟಿ 76 ಪಾಯಿಂಟ್ ಅಥವಾ 0.48 ರಷ್ಟು ಏರಿಕೆಯಾಗಿ 15,917 ಕ್ಕೆ ವಹಿವಾಟು ನಡೆಸಿದೆ.
ನಿಫ್ಟಿ ಮಿಡ್ಕ್ಯಾಪ್ 100, ಶೇಕಡಾ 0.63 ಮತ್ತು ಸ್ಮಾಲ್ ಕ್ಯಾಪ್ ಶೇಕಡಾ 0.75 ರಷ್ಟು ಏರಿದ್ದರಿಂದ ಮಿಡ್ ಮತ್ತು ಸ್ಮಾಲ್ ಕ್ಯಾಪ್ ಷೇರುಗಳು ಬಲಗೊಂಡಿದೆ. ನಿಫ್ಟಿ ಮೆಟಲ್, ನಿಫ್ಟಿ ಪ್ರೈವೇಟ್ ಬ್ಯಾಂಕ್ ಮತ್ತು ನಿಫ್ಟಿ ಆಯಿಲ್ ಮತ್ತು ಗ್ಯಾಸ್ ಕ್ರಮವಾಗಿ ಶೇ.2.55, ಶೇ.0.94 ಮತ್ತು ಶೇ.1.23ರಷ್ಟು ಏರಿಕೆಯಾಗುವ ಮೂಲಕ ಸೂಚ್ಯಂಕವನ್ನು ಮೀರಿಸಿದೆ.

ಯಾವುದಕ್ಕೆ ಲಾಭ, ಯಾವ ಷೇರಿಗೆ ನಷ್ಟ?
ಹಿಂಡಾಲ್ಕೊ ಟಾಪ್ ಗೇನರ್ ಆಗಿದ್ದು, ಷೇರುಗಳು ಶೇಕಡಾ 4.12 ರಷ್ಟು ಏರಿಕೆಯಾಗಿ ರೂಪಾಯಿ 407.05 ಕ್ಕೆ ತಲುಪಿದೆ. ಒಎನ್ಜಿಸಿ, ಟಾಟಾ ಸ್ಟೀಲ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಜೆಎಸ್ಡಬ್ಲ್ಯೂ ಸ್ಟೀಲ್ ಕೂಡ ಲಾಭ ಗಳಿಸಿದವು. ಬಿಎಸ್ಇಯಲ್ಲಿ 517 ಷೇರುಗಳು ಕುಸಿತ ಕಂಡರೆ 1,831 ಷೇರುಗಳು ಲಾಭವನ್ನು ಗಳಿಸಿದೆ. 30 ಷೇರುಗಳ ಬಿಎಸ್ಇ ಸೂಚ್ಯಂಕದಲ್ಲಿ, ಟಾಟಾ ಸ್ಟೀಲ್, ಆರ್ಐಎಲ್, ಎಂ & ಎಂ, ಇಂಡಸ್ಇಂಡ್ ಬ್ಯಾಂಕ್, ಮಾರುತಿ, ಬಜಾಜ್ ಫೈನಾನ್ಸ್, ಹಿಂದೂಸ್ತಾನ್ ಯೂನಿಲಿವರ್, ಕೊಟಕ್ ಮಹೀಂದ್ರಾ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಸ್ಬಿಐ ಮತ್ತು ಎಚ್ಸಿಎಲ್ ಟೆಕ್ ಲಾಭವನ್ನು ಗಳಿಸಿದೆ.
ಆದರೆ ಸನ್ ಫಾರ್ಮಾ, ಇನ್ಫೋಸಿಸ್, ಏಷ್ಯನ್ ಪೇಂಟ್ಸ್, ನೆಸ್ಲೆ ಇಂಡಿಯಾ ಮತ್ತು ಟಿಸಿಎಸ್ ಷೇರುಗಳು ನಷ್ಟದೊಂದಿಗೆ ವಹಿವಾಟು ನಡೆಸುತ್ತಿವೆ. ಸೋಮವಾರ ಸೆನ್ಸೆಕ್ಸ್ 180 ಪಾಯಿಂಟ್ಗಳು ಅಥವಾ ಶೇಕಡಾ 0.34 ರಷ್ಟು ಏರಿಕೆಯಾಗಿ 52,974 ಕ್ಕೆ ತಲುಪಿದ್ದರೆ, ನಿಫ್ಟಿ 60 ಪಾಯಿಂಟ್ ಅಥವಾ 0.38 ರಷ್ಟು ಏರಿಕೆಯಾಗಿ 15,842 ಕ್ಕೆ ವಹಿವಾಟು ಅಂತ್ಯ ಮಾಡಿದೆ.
More From GoodReturns

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications