ದಕ್ಷಿಣ ಕೊರಿಯಾದ ಕೋರ್ಟ್ ನಿಂದ ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ಉಪಾಧ್ಯಕ್ಷ ಜೇ ವೈ. ಲೀ ಅವರಿಗೆ ಎರಡೂವರೆ ವರ್ಷದ ಜೈಲು ಶಿಕ್ಷೆ ವಿಧಿಸಿ, ಸೋಮವಾರ ಆದೇಶ ನೀಡಿದೆ. ಈ ಬೆಳವಣಿಗೆಯಿಂದಾಗಿ ಟೆಕ್ ದೈತ್ಯ ಕಂಪೆನಿ ಸ್ಯಾಮ್ಸಂಗ್ ನಾಯಕತ್ವ ಹಾಗೂ ದೊಡ್ಡ ಉದ್ಯಮದ ಬಗ್ಗೆ ದಕ್ಷಿಣ ಕೊರಿಯಾಗೆ ಇರುವ ಆಲೋಚನೆ ಬಗ್ಗೆ ದೊಡ್ಡ ಮಟ್ಟದ ಚರ್ಚೆಗೆ ನಾಂದಿ ಹಾಡಿದೆ.
ಈ ಕೋರ್ಟ್ ಆದೇಶದೊಂದಿಗೆ ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ನಲ್ಲಿನ ಪ್ರಮುಖ ನಿರ್ಧಾರದಿಂದ ಲೀ ಅವರನ್ನು ಪಕ್ಕಕ್ಕೆ ಸರಿಸಲಾಗುತ್ತದೆ. ಅಂದ ಹಾಗೆ ಪ್ರತಿಸ್ಪರ್ಧಿಗಳ ವಿರುದ್ಧ ಮೇಲುಗೈ ಸಾಧಿಸಲು ಸ್ಯಾಮ್ಸಂಗ್ ತೀವ್ರವಾಗಿ ಯತ್ನಿಸುತ್ತಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಲೀ ಅವರ ತಂದೆ ಮೃತಪಟ್ಟಿದ್ದು, ಸ್ಯಾಮ್ಸಂಗ್ ಮೇಲೆ ಹಿಡಿತ ಸಾಧಿಸಲು ಯತ್ನಿಸುತ್ತಿದ್ದರು.
ಈ ಹಿಂದಿನ ಅಧ್ಯಕ್ಷ ಪಾರ್ಕ್ ಗುಯೆನ್- ಹೈ ಅವರ ಸಹವರ್ತಿಗೆ ಲಂಚ ನೀಡಿದ ಆರೋಪದಲ್ಲಿ 52 ವರ್ಷದ ಲೀ ಅವರಿಗೆ 2017ರಲ್ಲಿ ಐದು ವರ್ಷ ಶಿಕ್ಷೆ ಆಗಿತ್ತು. ಆದರೆ ತಾನೇನೂ ತಪ್ಪು ಮಾಡಿಲ್ಲ ಎಂದಿದ್ದರು. ಆ ನಂತರ ಮೇಲ್ಮನವಿ ಸಲ್ಲಿಸಿದ್ದರಿಂದ ಶಿಕ್ಷೆ ಇಳಿಕೆ ಮಾಡಿ, ಅರ್ಜಿ ಅಮಾನತು ಮಾಡಲಾಗಿತ್ತು. ಒಂದು ವರ್ಷ ಕಳೆದ ಮೇಲೆ ಲೀ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಆ ನಂತರ ಸುಪ್ರೀಮ್ ಕೋರ್ಟ್ ನಿಂದ ಮತ್ತೆ ಸಿಯೋಲ್ ಕೋರ್ಟ್ ಗೆ ವಾಪಸ್ ಕಳುಹಿಸಲಾಯಿತು. ಅದೀಗ ಸೋಮವಾರ ಆದೇಶ ನೀಡಿದೆ. ದಕ್ಷಿಣ ಕೊರಿಯಾದ ಕಾನೂನು ಪ್ರಕಾರ, ಮೂರು ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಯ ಶಿಕ್ಷೆಯನ್ನು ಮಾತ್ರ ಅಮಾನತು ಮಾಡಬಹುದು.
ದೀರ್ಘಾವಧಿ ಶಿಕ್ಷೆಗೆ ಅಧ್ಯಕ್ಷರ ಕ್ಷಮಾದಾನದ ಹೊರತು ಶಿಕ್ಷೆ ಅನುಭವಿಸಬೇಕು. ಈಗ ಲೀ ಮತ್ತೆ ಜೈಲು ಸೇರುತ್ತಾರೆ. ಈಗಾಗಲೇ ವಶದಲ್ಲಿ ಒಂದು ವರ್ಷವನ್ನು ಲೀ ಕಳೆದಿದ್ದು, ಬಾಕಿ ಅವಧಿಯನ್ನು ಜೈಲಿನಲ್ಲಿ ಕಳೆಯುವ ನಿರೀಕ್ಷೆ ಇದೆ.
ಸೋಮವಾರದಂದು ಬಂದ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬಹುದು. ಆದರೆ ಇದರಿಂದ ಕಾನೂನು ವ್ಯಾಖ್ಯಾನದಲ್ಲಿ ಬದಲಾವಣೆ ಆಗಬಹುದೇ ವಿನಾ ಅದರಲ್ಲಿ ಯಾವುದೇ ಬದಲಾವಣೆ ಆಗುವ ಸಾಧ್ಯತೆ ಇಲ್ಲ ಎಂದು ಕಾನೂನು ತಜ್ಞರು ಅಭಿಪ್ರಾಯ ಪಡುತ್ತಾರೆ.
ಇತ್ತೀಚೆಗೆ ಚೀನಾದಲ್ಲಿ ಉದ್ಯಮಿಯೊಬ್ಬರ ವಿರುದ್ಧ ಭ್ರಷ್ಟಾಚಾರ ಹಾಗೂ ಬಹುಪತ್ನಿತ್ವದ ಆರೋಪದಲ್ಲಿ ಮರಣದಂಡನೆ ವಿಧಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications