ಬೆಂಗಳೂರು ಮತ್ತು ಮಧ್ಯ ಕರ್ನಾಟಕದ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಬೆಂಗಳೂರಿನಿಂದ ಶಿವಮೊಗ್ಗ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಾಟವನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆ ಕೂಡ ಇದೆ. ಈ ಸೇವೆಯು ಆರಂಭವಾದ್ದರೆ ಎರಡು ನಗರಗಳ ನಡುವೆ ಪ್ರಯಾಣಿಸುವ ವಿದ್ಯಾರ್ಥಿಗಳು, ವೃತ್ತಿಪರರು ಮತ್ತು ವ್ಯಾಪಾರಸ್ಥರಿಗೆ ಹೆಚ್ಚಿನ ಅನುಕೂಲವಾಗುತ್ತದೆ.

ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭದ ಬಿಡುಗಡೆ ದಿನಾಂಕ ಮತ್ತು ವೇಳಾಪಟ್ಟಿಯನ್ನು ಇನ್ನೂ ಅಂತಿಮಗೊಳಿಸಿಲ್ಲ.ಶೀಘ್ರದಲ್ಲಿ ಬೆಂಗಳೂರಿನಿಂದ ಸುಮಾರು 300 ಕಿಲೋಮೀಟರ್ ದೂರದಲ್ಲಿರುವ ಶಿವಮೊಗ್ಗದ ನಿವಾಸಿಗಳು ಈ ಹೊಸ ಯೋಜನೆಗಾಗಿ ಕಾಯುತ್ತಿದ್ದಾರೆ ಎಂದು ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು 2023 ರಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆಯನ್ನು ಮಾಡಿದ್ದಾರೆ. ಮೂಲಸೌಕರ್ಯದ ನಂತರ ಶಿವಮೊಗ್ಗದಲ್ಲಿ ಜನರಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ಸಂಪರ್ಕಕ್ಕೆ ಬೇಡಿಕೆ ಹೆಚ್ಚಾಗಿತ್ತು.ಹೊಸ ವಂದೇ ಭಾರತ್ ಸೇವೆಯು ಪ್ರಯಾಣಿಸುವವರಿಗೆ ವಿಶ್ವಾಸಾರ್ಹ ಮತ್ತು ಆರಾಮದಾಯಕ ಪ್ರಯಾಣದ ಅನುಭವನ್ನು ನೀಡಿದ್ದಾರೆ.
ಶಿವಮೊಗ್ಗ ಮಾರ್ಗದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕರ್ನಾಟಕದ 12 ನೇ ವಂದೇ ಭಾರತ್ ಎಕ್ಸ್ಪ್ರೆಸ್ ಆಗಲಿದೆ. ಇದು ರಾಜ್ಯದ ಪ್ರೀಮಿಯಂ ರೈಲು ಜಾಲವನ್ನು ಮತ್ತಷ್ಟು ವಿಸ್ತರಿಸಲಾಗಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇರ್ಪಡೆಯು ಬೆಂಗಳೂರು ನಗರ, ಮೈಸೂರು, ಚೆನ್ನೈ, ಎರ್ನಾಕುಲಂ, ಹೈದರಾಬಾದ್, ಧಾರವಾಡ, ಕೊಯಮತ್ತೂರು ಮತ್ತು ಬೆಳಗಾವಿಗೆ ವಂದೇ ಭಾರತ್ ರೈಲುಗಳ ಮೂಲಕ ನೇರ ಸಂಪರ್ಕವನ್ನು ಹೊಂದಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಆಧುನಿಕ ಸೌಕರ್ಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವನ್ನು ನೀಡುತ್ತದೆ. ಈ ವರ್ಷದ ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಬೆಂಗಳೂರು ಟು ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಪ್ರಾರಂಭಿಸಿತು. ಇದು ಬೆಳಗಾವಿಯಿಂದ ಬೆಳಿಗ್ಗೆ ಬೇಗನೆ ಹೊರಟು ಮಧ್ಯಾಹ್ನದ ವೇಳೆಗೆ ಬೆಂಗಳೂರು ತಲುಪಿ, ನಂತರ ಮಧ್ಯಾಹ್ನ ಹಿಂದಿರುಗುವ ಪ್ರಯಾಣವನ್ನು ಮಾಡಿ ರಾತ್ರಿಯ ಹೊತ್ತಿಗೆ ಬೆಳಗಾವಿ ತಲುಪುತ್ತದೆ.
ಶಿವಮೊಗ್ಗ ಮಾರ್ಗದ ವಂದೇ ಭಾರತ್ ರೈಲುಗಳು ಕರ್ನಾಟಕದಾದ್ಯಂತ ಸಾರ್ವಜನಿಕ ಸಾರಿಗೆಯನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಾರಂಭ ಈ ಶಿವಮೊಗ್ಗದ ಪ್ರಯಾಣಿಕರಿಗೆ ಅನುಕೂಲಕರವಾಗುವುದರ ಜೊತೆಗೆ ರಾಜ್ಯದ ರೈಲು ಸಾರಿಗೆ ವ್ಯವಸ್ಥೆಗೆ ಹೊಸ ಆಯಾಮವನ್ನು ನೀಡಲಿದೆ.
ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಬಂದರೆ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗೆ ಸಹ ಸಹಾಯಕವಾಗಲಿದೆ ಎಂದು ಅಂದಾಜಿಸಲಾಗಿದೆ. ಆದ್ದರಿಂದ ರೈಲಿಗಾಗಿ ಬೇಡಿಕೆ ಇಡಲಾಗಿದೆ. ರಾತ್ರಿ ವೇಳೆ ಪ್ರಯಾಣಿಕರ ಅನುಕೂಲಕ್ಕಾಗಿ ವಂದೇ ಭಾರತ್ ಸ್ಲೀಪರ್ ರೈಲುಗಳು ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಸಿಗುತ್ತದೆ.
ಬೆಂಗಳೂರು-ಧಾರವಾಡ-ಬೆಂಗಳೂರು ವಂದೇ ಭಾರತ್ ವಿಸ್ತರಣೆಯಾಗಿರುವುದಿಲ್ಲ. ಬದಲಾಗಿ, ನೈಋತ್ಯ ರೈಲ್ವೆ (SWR) ಗಾಗಿ ಮೀಸಲಾದ ರೇಕ್ ಅನ್ನು ಮಂಜೂರು ಮಾಡುವ ಮೂಲಕ ಸಂಪೂರ್ಣವಾಗಿ ಹೊಸ ಸೇವೆಯನ್ನು ಪ್ರಾರಂಭಿಸಲು ರೈಲ್ವೆ ನಿರ್ಧರಿಸಲಾಗುತ್ತದೆ.


Click it and Unblock the Notifications