ಯಾವ ಮಳಿಗೆ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಹತ್ತು ಮತ್ತು ಅದಕ್ಕಿಂತ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಲ್ಲಿ ಅಂಥವು ಮುಂದಿನ ಮೂರು ವರ್ಷಗಳ ಅವಧಿಗೆ ಕೆಲ ಷರತ್ತುಗಳೊಂದಿಗೆ 24X7 ಲೆಕ್ಕಾಚಾರದಂತೆ, ಎಲ್ಲ ದಿನಗಳಲ್ಲೂ ತೆರೆದಿರಬಹುದು ಎಂದು ಕರ್ನಾಟಕ ಸರ್ಕಾರ ಶನಿವಾರ (ಜನವರಿ 2, 2021) ಘೋಷಣೆ ಮಾಡಿದೆ.
ಕೋವಿಡ್ 19 ಬಿಕ್ಕಟ್ಟಿಗೆ ಸಿಲುಕಿರುವ ಕಾಲಘಟ್ಟದಲ್ಲಿ ಉದ್ಯೋಗ ಸೃಷ್ಟಿ, ಆರ್ಥಿಕ ಪ್ರಗತಿ ಆಗಲಿ ಎಂಬ ಕಾರಣಕ್ಕೆ ಈ ನಡೆಗೆ ಮುಂದಾಗಿದೆ ರಾಜ್ಯ ಸರ್ಕಾರ. ಪ್ರತಿ ಸಿಬ್ಬಂದಿಗೂ ವಾರದಲ್ಲಿ ಒಂದು ದಿನ ಪಾಳಿ ಮೇಲೆ ರಜಾ ಸಿಗಬೇಕು ಎಂಬ ಕಾರಣಕ್ಕೆ ಉದ್ಯೋಗದಾತರು ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ.
ಮಳಿಗೆ ಅಥವಾ ವಾಣಿಜ್ಯ ಸಂಸ್ಥೆಯ ನಿರ್ದಿಷ್ಟ ಸ್ಥಳದಲ್ಲಿ ಎಲ್ಲ ಉದ್ಯೋಗಿಗಳ ಹೆಸರನ್ನು ಉದ್ಯೋಗದಾತರು ಪ್ರದರ್ಶಿಸಬೇಕು ಎಂದು ಕಾರ್ಮಿಕ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಯಾವುದೇ ಸಿಬ್ಬಂದಿಯಿಂದ ದಿನದಲ್ಲಿ ಎಂಟು ಗಂಟೆ ಮತ್ತು ವಾರದಲ್ಲಿ 48 ಗಂಟೆಗಿಂತ ಹೆಚ್ಚು ಸಮಯ ಕೆಲಸ ಮಾಡಿಸುವಂತಿಲ್ಲ. ಹೆಚ್ಚುವರಿ ಅವಧಿಯೂ ಒಳಗೊಂಡಂತೆ ಕೆಲಸದ ಅವಧಿಯು ಯಾವುದೇ ದಿನದಲ್ಲಿ 10 ಗಂಟೆ ದಾಟುವಂತಿಲ್ಲ ಮತ್ತು ನಿರಂತರ ಮೂರು ತಿಂಗಳ ಅವಧಿಯಲ್ಲಿ 50 ಗಂಟೆ ದಾಟುವಂತಿಲ್ಲ.
ಒಂದು ವೇಳೆ ಸಿಬ್ಬಂದಿಯು ಯಾವುದೇ ರಜಾ ದಿನಗಳಲ್ಲಿ ಅಥವಾ ಮಾಮೂಲಿ ಕೆಲಸದ ಅವಧಿಯ ಆಚೆಗೂ ಯಾವುದೇ ಓವರ್ ಟೈಮ್ ಪೂರ್ವಾಗತ್ಯ ಇಲ್ಲದೆ ಕೆಲಸ ಮಾಡುತ್ತಿದ್ದಲ್ಲಿ ಉದ್ಯೋಗದಾತರು ಅಥವಾ ಮ್ಯಾನೇಜರ್ ವಿರುದ್ಧ ಕ್ರಮ ಜರುಗಿಸಲಾಗಿಸಲಾಗುವುದು ಎಂದು ತಿಳಿಸಲಾಗಿದೆ.
ಪಗಾರ ಸೇರಿ ಓವರ್ ಟೈಮ್ ಸಂಬಳವನ್ನು ವೇತನ ಪಾವತಿ ಕಾಯ್ದೆ ಅಡಿಯಲ್ಲಿ ತಿಳಿಸಿರುವಂತೆಯೇ ಉದ್ಯೋಗಿಗಳ ಉಳಿತಾಯ ಖಾತೆಗೆ ಜಮಾ ಮಾಡಬೇಕು ಎನ್ನಲಾಗಿದೆ.
ಇನ್ನು ಮಹಿಳಾ ಉದ್ಯೋಗಿಗಳು ರಾತ್ರಿ 8 ಗಂಟೆ ನಂತರ ಸಾಮಾನ್ಯ ಸನ್ನಿವೇಶಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವಂತಿಲ್ಲ. ಒಂದು ವೇಳೆ ಉದ್ಯೋಗದಾತರು ಮಹಿಳಾ ಉದ್ಯೋಗಿಯ ಲಿಖಿತ ಅನುಮತಿ ಪಡೆದು, ರಾತ್ರಿ 8ರಿಂದ ಬೆಳಗ್ಗೆ 6ರ ತನಕ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬಹುದು. ಆದರೆ ಉದ್ಯೋಗಿಯ ಗೌರವ, ಮರ್ಯಾದೆ ಹಾಗೂ ಸುರಕ್ಷತೆಗೆ ಅಗತ್ಯ ಇರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಪಾಳಿಗಳಲ್ಲಿ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕಾಗುತ್ತದೆ. ಉದ್ಯೋಗ ಸ್ಥಳದಲ್ಲಿ ಆಂತರಿಕ ದೂರು ಸಮಿತಿಯನ್ನು ರಚಿಸಿ, ಮಹಿಳೆಯರ ವಿರುದ್ಧದ ಲೈಂಗಿಕ ದೌರ್ಜನ್ಯ ದೂರುಗಳನ್ನು ನಿರ್ವಹಿಸುವುದಕ್ಕಾಗಿ ಆ ಸಮಿತಿ ಇರಬೇಕು ಎನ್ನಲಾಗಿದೆ.
ಇದರ ಜತೆಗೆ ಸಿಬ್ಬಂದಿಗೆ ವಿಶ್ರಾಂತಿ ಕೋಣೆ ಸೇರಿದಂತೆ, ಲಾಕರ್ ಮತ್ತಿತರ ಮೂಲಸೌಕರ್ಯ ಮಾಡಿಕೊಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications