ಸಿದ್ದು ಸರ್ಕಾರಕ್ಕೆ ಒಂದು ವರ್ಷ: ಇಂದಿರಾ ಕ್ಯಾಂಟೀನ್‌ನಲ್ಲಿ ಮಹತ್ವದ ಅಪಡೇಟ್‌, ಇಲ್ಲಿದೆ ವಿವರ

ಬೆಂಗಳೂರು, ಮೇ 20: ಗ್ರಾಹಕರಿಗೆ ಊಟವನ್ನು ಸುಲಭವಾಗಿ ಆರ್ಡರ್ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಸ್ವಯಂ-ಆರ್ಡರ್ ಮಾಡುವ ಕಿಯೋಸ್ಕ್‌ಗಳನ್ನು ಪ್ರಾರಂಭಿಸಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು ನಗರದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ನಿರ್ವಹಿಸುತ್ತಿರುವ ನಗರದ ನಾಗರಿಕ ಸಂಸ್ಥೆಯಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬಿಬಿಎಂಪಿ ಈಗಾಗಲೇ ಪ್ರಾಯೋಗಿಕ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಅವರು ಆರ್‌ಆರ್‌ನಗರ ಶಾಖೆಯಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಸ್ವಯಂ ಆರ್ಡರ್ ಮಾಡುವ ಕಿಯೋಸ್ಕ್ ಅನ್ನು ಸ್ಥಾಪಿಸಿದ್ದು, ಅದು ಹೆಚ್ಚು ಪರಿಣಾಮಕಾರಿಯಾಗಿದೆ. ಇಲ್ಲಿ ಅಳವಡಿಸಲಾಗಿರುವ ಕಿಯೋಸ್ಕ್ ಮುಖ ಗುರುತಿಸುವ ವ್ಯವಸ್ಥೆಯನ್ನು ಹೊಂದಿದ್ದು, ಗ್ರಾಹಕರ ದಾಖಲೆಗಳನ್ನು ನಿರ್ವಹಿಸಲು ಬಿಬಿಎಂಪಿಗೆ ಸಹಾಯ ಮಾಡುತ್ತದೆ.

ಇಂದಿರಾ ಕ್ಯಾಂಟೀನ್‌ನಲ್ಲಿ ಮಹತ್ವದ ಬದಲಾವಣೆ

ಬಿಬಿಎಂಪಿ ಅಧಿಕಾರಿಯೊಬ್ಬರು, "ಚುನಾವಣೆ ಮುಗಿದ ನಂತರ, ಬೆಂಗಳೂರಿನ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲಿ ಈ ಸ್ವಯಂ-ಆರ್ಡರ್ ಕಿಯೋಸ್ಕ್‌ಗಳನ್ನು ಸ್ಥಾಪಿಸಲಾಗುವುದು. ಅಂತಹ ಕಿಯೋಸ್ಕ್‌ಗಳು ಹೆಚ್ಚು ಉತ್ಪಾದಕವಾಗಿದ್ದು, ಆಹಾರವನ್ನು ಆರ್ಡರ್ ಮಾಡುವುದನ್ನು ಸುಲಭಗೊಳಿಸುತ್ತದೆ.

ನಗರದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಗ್ರಾಹಕರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳು ಕೈಗೆಟಕುವ ದರದಲ್ಲಿ ಆಹಾರ ನೀಡುವುದಕ್ಕೆ ಹೆಸರುವಾಸಿಯಾಗಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದ ನಂತರ ಹಲವಾರು ಕ್ಯಾಂಟೀನ್‌ಗಳನ್ನು ನವೀಕರಿಸಲಾಗಿದೆ.

ಕೈಗೆಟಕುವ ದರದಲ್ಲಿ ಆಹಾರ:

ಈ ವರ್ಷದ ಮಾರ್ಚ್‌ನಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ್ದರು. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ, ಸಿಬ್ಬಂದಿಗೆ ಮತ್ತು ಚಾಲಕರಿಗೆ ಕೈಗೆಟಕುವ ದರದಲ್ಲಿ ಆಹಾರ ಒದಗಿಸುವ ಆಹಾರ ಮಳಿಗೆ ಇಲ್ಲದ ಕಾರಣ ಕ್ಯಾಂಟೀನ್ ಆರಂಭಿಸಲಾಗಿದೆ. ರಾಜ್ಯಾದ್ಯಂತ ಹೆಚ್ಚುವರಿಯಾಗಿ 600 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ತಿಳಿಸಿದ್ದರು.

ಸುಮಾರು 2,000 ಗ್ರಾಹಕರು, ಪ್ರಾಥಮಿಕವಾಗಿ ವಿಮಾನ ನಿಲ್ದಾಣದ ಕ್ಯಾಬ್ ಚಾಲಕರು ಮತ್ತು ಬಸ್ ಚಾಲಕರು ಕ್ಯಾಂಟೀನ್ ಅನ್ನು ಬಳಸುತ್ತಾರೆ ಎಂದು ಬಿಬಿಎಂಪಿ ನಿರೀಕ್ಷಿಸುತ್ತದೆ. ಕ್ಯಾಂಟೀನ್, ಅಡುಗೆ ಕೋಣೆ ಸೇರಿ ಒಟ್ಟು 1.35 ಕೋಟಿ ರೂ. ವೆಚ್ಚವಾಗಿದೆ.

ಬಡವರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡುವುದು ವಿಮಾನ ನಿಲ್ದಾಣದಲ್ಲಿ ಕ್ಯಾಂಟೀನ್‌ನ ಉದ್ದೇಶವಾಗಿದೆ. 5 ರೂ.ಗೆ ಉಪಹಾರ ನೀಡಲಾಗುತ್ತಿದ್ದು, 10 ರೂ.ಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟ ಲಭ್ಯವಿದ್ದು, ಆಹಾರ ಮೆನು ಕೂಡ ಬದಲಾಗಿದೆ. ಊಟದ ಹಾಲ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‌ಗಳಲ್ಲಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+