ಕೇರಳದ ಕೋಳಿಕ್ಕೋಡ್ ನಲ್ಲಿನ ಕುಟ್ಟಿಚಿರದಲ್ಲಿ ಇರುವ ಮಸೀದಿಯಲ್ಲಿ ಜನಜಂಗುಳಿಯನ್ನು ತಡೆಯುವ ಉದ್ದೇಶಕ್ಕೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ್ದು, ಪ್ರಾರ್ಥನೆ ಸಲ್ಲಿಸುವವರು ಇದನ್ನು ಬಳಸಬಹುದು. ಇದೇ ವೇಳೆ ಕೊರೊನಾ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಸಹ ಉತ್ತೇಜಿಸುವ ಉದ್ದೇಶ ಹೊಂದಲಾಗಿದೆ.
ಮಸೀದಿ ಸುತ್ತಮುತ್ತ ಇರುವವರಿಗೆ ಸಂಖ್ಯೆಗಳನ್ನು ಒಳಗೊಂಡ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ. ಮಸೀದಿ ಪ್ರವೇಶಿಸುವವರು ಕೈಗೆ ಸ್ಯಾನಿಟೈಸರ್ ಹಾಕಿಕೊಳ್ಳಬೇಕು. ಜತೆಗೆ ತಮ್ಮ ಗುರುತನ್ನು ಕ್ಯಾಮೆರಾ ಮುಂದೆ ಹೇಳಬೇಕು. ಆಟೋಮೆಟಿಕ್ ಸಿಸ್ಟಮ್ ವೊಂದು ಅವರ ವಿಳಾಸ ಹಾಗೂ ಫೋನ್ ನಂಬರ್ ಸೇವ್ ಮಾಡುತ್ತದೆ.
ಅಲ್ಲಿಂದ ಮುಂದಕ್ಕೆ ಸ್ಮಾರ್ಟ್ ಕಾರ್ಡ್ ನಂಬರ್ ಹೇಳಿದರೆ ಸಾಕು, ಉಳಿದ ಮಾಹಿತಿ ತಾನಾಗಿಯೇ ತುಂಬಿಕೊಳ್ಳುತ್ತದೆ ಎಂದು ಮಸೀದಿಯ ಸಮಿತಿಯಲ್ಲಿನ ಸದಸ್ಯರು ಹೇಳಿದ್ದಾರೆ. ಕಾರ್ಡ್ ಸ್ವೈಪ್ ಮಾಡಿದರೆ ಮಸೀದಿಯ ಬಾಗಿಲು ತಾನಾಗಿಯೇ ತೆರೆದುಕೊಳ್ಳುತ್ತದೆ. ಬಾಗಿಲಿಗೆ ಸೆನ್ಸರ್ ಅಳವಡಿಸಲಾಗಿದೆ. ಇನ್ನು ಮಸೀದಿಯೊಳಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪ್ರಾರ್ಥನೆಗೆ ಸ್ಥಳಗಳನ್ನು ಗುರುತು ಮಾಡಲಾಗಿದೆ.

ಜೂನ್ 9ನೇ ತಾರೀಕಿನಿಂದ ಅನ್ವಯ ಆಗುವಂತೆ ಕೇರಳ ಸರ್ಕಾರವು ಧಾರ್ಮಿಕ ಸ್ಥಳಗಳು, ಮಾಲ್ ಗಳು ಹಾಗೂ ರೆಸ್ಟೋರೆಂಟ್ ಗಳಿಗೆ ಪ್ರವೇಶ ಅವಕಾಶ ಕಲ್ಪಿಸಿದೆ ಅದಕ್ಕಾಗಿ ಕೆಲ ನಿಯಮಗಳನ್ನು ರೂಪಿಸಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications