ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 2019ರ ಸ್ಟಾರ್ಟ್ಅಪ್ ರ್ಯಾಂಕಿಗ್ನಲ್ಲಿ ಕರ್ನಾಟಕವು ಗುಜರಾತ್ ನಂತರದ ಸ್ಥಾನ ಪಡೆದಿದ್ದು ಎರಡನೇ ಸ್ಥಾನವನ್ನು ಹೊಂದಿದೆ.
ಶುಕ್ರವಾರ ಬಿಡುಗಡೆಗೊಂಡ ರ್ಯಾಂಕಿಂಗ್ನಲ್ಲಿ ಸ್ಟಾರ್ಟ್ಅಪ್ ಹಬ್ ಎಂದೇ ಖ್ಯಾತಿಯ ಕರ್ನಾಟಕವು ದ್ವಿತೀಯ ಸ್ಥಾನದಲ್ಲಿದ್ದು, ಕೇರಳವು ಉನ್ನತ ಪ್ರದರ್ಶನ ನೀಡಿದ ರಾಜ್ಯವಾಗಿದೆ.
ರಾಜ್ಯಗಳನ್ನು ಉದ್ಯಮಸ್ನೇಹಿಗಳನ್ನಾಗಿ ಉತ್ತೇಜಿಸುವ ಉದ್ದೇಶದಿಂದ ಈ ಸ್ಟಾರ್ಟಪ್ ರ್ಯಾಂಕಿಂಗ್ ಅನ್ನು ಬಿಡುಗಡೆ ಮಾಡುವ ಪರಿಪಾಠವನ್ನು ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಆರಂಭಿಸಿತ್ತು. ಹೊಸ ಹೊಸ ಅನ್ವೇಷಣೆಗಳು, ಉದ್ಯಮದ ಭಿನ್ನ ಆಲೋಚನೆಗಳಿಗೆ ರಾಜ್ಯಮಟ್ಟದಲ್ಲಿಯೇ ಸೂಕ್ತ ಬೆಂಬಲ ಸಿಗುವಂತೆ ಮಾಡುವುದು ಇದರ ಒಟ್ಟು ಉದ್ದೇಶ.

ಈ ಸ್ಪರ್ಧೆಯಲ್ಲಿ ಒಟ್ಟು 22 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಪಾಲ್ಗೊಂಡಿದ್ದವು. ರ್ಯಾಂಕಿಂಗ್ನ ಜೊತೆ ಜೊತೆಗೆ ಯಾವ ವಿಭಾಗಳಲ್ಲಿ ಸುಧಾರಣೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆಯೂ ಸಲಹೆಯನ್ನು ನೀಡಲಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ರ್ಯಾಂಕಿಂಗ್ ಪಡೆದ ರಾಜ್ಯಗಳನ್ನು ಅಭಿನಂದಿಸಿದ್ದಾರೆ.
ಇನ್ನು ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ರಾಜ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನಕಾರರಾಗಿ ಆಯ್ಕೆಯಾದವು.
"ಏಕರೂಪತೆಯನ್ನು ಸ್ಥಾಪಿಸಲು ಮತ್ತು ಶ್ರೇಯಾಂಕ ಪ್ರಕ್ರಿಯೆಯಲ್ಲಿ ಪ್ರಮಾಣೀಕರಣವನ್ನು ಖಚಿತಪಡಿಸಿಕೊಳ್ಳಲು, 'ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವನ್ನು' ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ" ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
"ದೆಹಲಿಯನ್ನು ಹೊರತುಪಡಿಸಿ ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಸ್ಸಾಂ ಹೊರತುಪಡಿಸಿ ಈಶಾನ್ಯ ಭಾರತದ ಎಲ್ಲಾ ರಾಜ್ಯಗಳನ್ನು 'ವೈ' ವರ್ಗದಲ್ಲಿ ಇರಿಸಲಾಗಿದೆ. ದೆಹಲಿ ಸೇರಿ ಇತರೆ ಎಲ್ಲಾ ರಾಜ್ಯಗಳು 'ಎಕ್ಸ್' ವರ್ಗದಲ್ಲಿವೆ."
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications