ಬರಗಾಲದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಈ ರೈತರಿಗೆ ನಾವು ಶೂನ್ಯ ಬಡ್ಡಿದರದಲ್ಲಿ ಬರೋಬ್ಬರಿ 15,841.48 ಕೋಟಿ ರೂಪಾಯಿ ಸಾಲವನ್ನು ನೀಡುವ ಮೂಲಕ ಸರಕಾರ ಆಸರೆಯಾಗಿದೆ. ನಮ್ಮ ಕಾಂಗ್ರೆಸ್ ರೈತಸ್ನೇಹಿ ಸರ್ಕಾರ ಎಂದು ಶಾಸಕ, ಕೆಪಿಸಿಸಿ ಮಾಧ್ಯಮ ಘಟಕದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ತಿಳಿಸಿದರು.
ನಾವು ಸರಿಯಾದ ಸಮಯದಲ್ಲಿ ಕೃಷಿ ಸಾಲವನ್ನು ನೀಡುವ ಮೂಲಕ ರೈತರಿಗೆ ಸ್ಪಂದನೆಯನ್ನು ನೀಡಿದೆ. ಆ ಮೂಲಕ ರೈತರ ಅಭ್ಯುದಯಕ್ಕೆ ನಮ್ಮ ಕಾಂಗ್ರೆಸ್ ಸರ್ಕಾರ ಕಾರಣವಾಗಿದೆ. ಕಳೆದ ಬಾರಿಗಿಂತ 775.49 ಕೋಟಿ ಹೆಚ್ಚುವರಿ ಸಾಲ ವಿತರಣೆ ಮಾಡಲಾಗಿದೆ. ಈ ಮೂಲಕ ಅನ್ನದಾತನ ನೆರವಿಗೆ ಸರ್ಕಾರ ಧಾವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಕಾಂಗ್ರೆಸ್ ಎಂದಿಗೂ ಕೂಡಾ ನುಡಿದಂತೆ ನಡೆಯುವ ಪಕ್ಷವಾಗಿದೆ. ಬೆಲೆ ಏರಿಕೆಯ ಈ ಸಂದರ್ಭದಲ್ಲಿ ನಾವು ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಇದರಿಂದಾಗಿ ಜನರಿಗೆ ಸಹಾಯ ಮಾಡಿದ್ದೇವೆ. ಜನರ ಎಲ್ಲ ಸಮಸ್ಯೆ ಬಗೆಹರಿಸುವಲ್ಲಿ ನಮ್ಮ ಸರ್ಕಾರವು ಮುಂದಿದೆ," ಎಂದು ಸಚಿವರು ತಿಳಿಸಿದರು.
ನಾವು ರೈತರಿಗೆ ಸಹಾಯವಾಗುವ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ. ಈವರೆಗೆ ನಾವು 19,97,607 ರೈತರಿಗೆ 15841.48 ಕೋಟಿ ರೂಪಾಯಿ ಕೃಷಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಣೆ ಮಾಡಿದ್ದೇವೆ. ಅಗತ್ಯ ಸಂದರ್ಭದಲ್ಲಿ ರೈತರ ನಮ್ಮ ಸರ್ಕಾರವು ನೆರವಾಗಿದೆ," ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ಭೀಕರ ಬರಗಾಲ
"ರಾಜ್ಯದಲ್ಲಿ ನಾವು ಎಂದೂ ಕೂಡಾ ಇಂತಹ ಭೀಕರ ಬರಗಾಲ ಬಂದಿರಲಿಲ್ಲ. 48 ಸಾವಿರ ಹೆಕ್ಟೇರ್ ಪ್ರದೇಶವು ಬರಗಾಲಕ್ಕೆ ಒಳಗಾಗಿದೆ. ಎಲ್ಲ ರೈತರಿಗೂ ಬರ ಪರಿಹಾರ ಶೀಘ್ರವೇ ನೀಡಲು ನಮ್ಮ ರಾಜ್ಯ ಸರ್ಕಾರ ಮುಂದಾಗಲಿದೆ. ಕೇಂದ್ರದಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಇದ್ದಾಗ ರೈತರ 72 ಸಾವಿರ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲಾಗಿದೆ. ಕೇಂದ್ರವಾಗಲಿ, ರಾಜ್ಯವಾಗಲಿ ರೈತರ ಸಂಕಷ್ಟಕ್ಕೆ ಸದಾ ಸ್ಪಂದಿಸುವುದು ನಮ್ಮ ಕಾಂಗ್ರೆಸ್ ಸರ್ಕಾರ," ಎಂದು ದಿನೇಶ್ ಗೂಳಿಗೌಡ ತಿಳಿಸಿದರು.
24600 ಕೋಟಿ ರೂಪಾಯಿ ಬೆಳೆ ಸಾಲ
21 ಡಿಸಿಸಿ ಬ್ಯಾಂಕ್ ಹಾಗೂ 6040 ಪ್ಯಾಕ್ಸ್ (ಕೃಷಿ ಪತ್ತಿನ ಸಹಕಾರ ಸಂಘಗಳು) ರೈತರಿಗೆ 24600 ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ನಾವು ಹೊಂದಿದ್ದೇವೆ. ಇದರಲ್ಲಿ ಈಗ 19,97,607 ರೈತರಿಗೆ 15841.48 ಕೋಟಿ ರೂಪಾಯಿ ಸಾಲವನ್ನು ನೀಡಲಾಗಿದೆ. ಈ ಗುರಿಯನ್ನು ನಾವು ಶೀಘ್ರವೇ ತಲುಪುವ ನಿರೀಕ್ಷೆ ಹೊಂದಿದ್ದೇವೆ ಎಂದು ಗೂಳಿಗೌಡ ಹೇಳಿದರು.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!



Click it and Unblock the Notifications