ಭಾರತವು ಆರ್ಥಿಕ ಕುಸಿತದ ದಾರಿಯಲ್ಲಿ ಸಾಗುತ್ತಿದೆ. ದತ್ತಾಂಶಗಳು ಅದು ಬಿಟ್ಟು ಬೇರೆ ಏನನ್ನೂ ಸೂಚಿಸುತ್ತಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಸೋಮವಾರ ಕೋಲ್ಕತ್ತಾ ಸಾಹಿತ್ಯ ಸಮಾವೇಶದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.
ನಾವು ಆರ್ಥಿಕ ಕುಸಿತದಲ್ಲಿ ಇದ್ದೇವೆ. ಆದರೆ ಯಾವ ಪ್ರಮಾಣದಲ್ಲಿ ಎಂಬುದು ನನಗೆ ಗೊತ್ತಿಲ್ಲ. ನಾವು ಆರ್ಥಿಕ ಹಿಂಜರಿತ ಅನುಭವಿಸುತ್ತಿಲ್ಲ ಎಂದು ತಿಳಿಸುವುದಕ್ಕೆ ಯಾವುದೇ ದತ್ತಾಂಶ ಇಲ್ಲ ಎಂದು ಅಭಿಜಿತ್ ಹೇಳಿದ್ದಾರೆ.
ಸಂಪತ್ತಿನ ಮೇಲೆ ತೆರಿಗೆ ಹಾಕುವ ವಿಚಾರದ ಪರವಾಗಿ ಮಾತನಾಡಿದ ಅವರು, ಸಂಪತ್ತಿನ ಮೇಲಿನ ತೆರಿಗೆ ಹಾಕುವುದು ಸರಿಯಾಗಿದೆ. ಅಂಥ ವೇಳೆಯಲ್ಲಿ ಅದರ ಪುನರ್ ವಿತರಣೆ ಮುಖ್ಯವಾಗುತ್ತದೆ. ಇದು ಈ ತಕ್ಷಣಕ್ಕೆ ಆಗಬಹುದು ಎಂದು ನನಗೆ ಅನಿಸುವುದಿಲ್ಲ ಎಂದಿದ್ದಾರೆ.

ಬ್ಯಾಂಕಿಂಗ್ ಮತ್ತು ಮೂಲಸೌಕರ್ಯ ವಲಯಗಳಿಗೆ ಸರ್ಕಾರದಿಂದ ಹಣಕಾಸಿನ ನೆರವು ಬೇಕಿದೆ. ಇನ್ನು ಅಸಂಘಟಿತ ವಲಯಗಳ ಸ್ಥಿತಿಯನ್ನು ತಿಳಿದುಕೊಳ್ಳುವುದಕ್ಕೆ ನಮ್ಮ ಬಳಿ ಅಗತ್ಯ ದತ್ತಾಂಶಗಳಿಲ್ಲ ಎಂದು ಅಭಿಜಿತ್ ಅಭಿಪ್ರಾಯ ಪಟ್ಟಿದ್ದಾರೆ.
ಏರ್ ಇಂಡಿಯಾವನ್ನು ಮಾರುವ ಸರ್ಕಾರದ ನಿರ್ಧಾರದ ಪರವಾಗಿ ಮಾತನಾಡಿದ ಅವರು, ಈಚೆಗೆ ಕಾರ್ಪೊರೇಟ್ ತೆರಿಗೆ ದರ ಕಡಿತ ಮಾಡಿದ ಮೇಲೆ ಕಾರ್ಪೊರೇಟ್ ವಲಯದಲ್ಲಿ ದೊಡ್ಡ ಮೊತ್ತದ ಹಣ ಸಂಗ್ರಹ ಆಗಿದೆ ಎಂದಿದ್ದಾರೆ.
More From GoodReturns

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications