ಆರ್ಥಿಕ ಕುಸಿತದ ದಾರಿಯಲ್ಲಿ ಸಾಗುತ್ತಿದೆ ಭಾರತ: ನೊಬೆಲ್ ಪುರಸ್ಕೃತ ಅಭಿಜಿತ್

ಭಾರತವು ಆರ್ಥಿಕ ಕುಸಿತದ ದಾರಿಯಲ್ಲಿ ಸಾಗುತ್ತಿದೆ. ದತ್ತಾಂಶಗಳು ಅದು ಬಿಟ್ಟು ಬೇರೆ ಏನನ್ನೂ ಸೂಚಿಸುತ್ತಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಸೋಮವಾರ ಕೋಲ್ಕತ್ತಾ ಸಾಹಿತ್ಯ ಸಮಾವೇಶದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.

ನಾವು ಆರ್ಥಿಕ ಕುಸಿತದಲ್ಲಿ ಇದ್ದೇವೆ. ಆದರೆ ಯಾವ ಪ್ರಮಾಣದಲ್ಲಿ ಎಂಬುದು ನನಗೆ ಗೊತ್ತಿಲ್ಲ. ನಾವು ಆರ್ಥಿಕ ಹಿಂಜರಿತ ಅನುಭವಿಸುತ್ತಿಲ್ಲ ಎಂದು ತಿಳಿಸುವುದಕ್ಕೆ ಯಾವುದೇ ದತ್ತಾಂಶ ಇಲ್ಲ ಎಂದು ಅಭಿಜಿತ್ ಹೇಳಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆ ಹಾಕುವ ವಿಚಾರದ ಪರವಾಗಿ ಮಾತನಾಡಿದ ಅವರು, ಸಂಪತ್ತಿನ ಮೇಲಿನ ತೆರಿಗೆ ಹಾಕುವುದು ಸರಿಯಾಗಿದೆ. ಅಂಥ ವೇಳೆಯಲ್ಲಿ ಅದರ ಪುನರ್ ವಿತರಣೆ ಮುಖ್ಯವಾಗುತ್ತದೆ. ಇದು ಈ ತಕ್ಷಣಕ್ಕೆ ಆಗಬಹುದು ಎಂದು ನನಗೆ ಅನಿಸುವುದಿಲ್ಲ ಎಂದಿದ್ದಾರೆ.

ಆರ್ಥಿಕ ಕುಸಿತದ ದಾರಿಯಲ್ಲಿ ಭಾರತ: ನೊಬೆಲ್ ಪುರಸ್ಕೃತ ಅಭಿಜಿತ್

ಬ್ಯಾಂಕಿಂಗ್ ಮತ್ತು ಮೂಲಸೌಕರ್ಯ ವಲಯಗಳಿಗೆ ಸರ್ಕಾರದಿಂದ ಹಣಕಾಸಿನ ನೆರವು ಬೇಕಿದೆ. ಇನ್ನು ಅಸಂಘಟಿತ ವಲಯಗಳ ಸ್ಥಿತಿಯನ್ನು ತಿಳಿದುಕೊಳ್ಳುವುದಕ್ಕೆ ನಮ್ಮ ಬಳಿ ಅಗತ್ಯ ದತ್ತಾಂಶಗಳಿಲ್ಲ ಎಂದು ಅಭಿಜಿತ್ ಅಭಿಪ್ರಾಯ ಪಟ್ಟಿದ್ದಾರೆ.

ಏರ್ ಇಂಡಿಯಾವನ್ನು ಮಾರುವ ಸರ್ಕಾರದ ನಿರ್ಧಾರದ ಪರವಾಗಿ ಮಾತನಾಡಿದ ಅವರು, ಈಚೆಗೆ ಕಾರ್ಪೊರೇಟ್ ತೆರಿಗೆ ದರ ಕಡಿತ ಮಾಡಿದ ಮೇಲೆ ಕಾರ್ಪೊರೇಟ್ ವಲಯದಲ್ಲಿ ದೊಡ್ಡ ಮೊತ್ತದ ಹಣ ಸಂಗ್ರಹ ಆಗಿದೆ ಎಂದಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+