ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆಯು ಮುಂಬರುವ ವರ್ಷಗಳಲ್ಲಿ 1 ಲಕ್ಷ ಕೋಟಿ ಆರ್ಥಿಕ ಪರಿಸರ ವ್ಯವಸ್ಥೆಯನ್ನು ರಚಿಸಲಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಹೇಳಿದ್ದಾರೆ.
ಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿರುವ ವಿಶ್ವದ ಅತಿ ಎತ್ತರದ ಪ್ರತಿಮೆಯನ್ನು ಇತ್ತೀಚೆಗಷ್ಟೇ ಎಂಟು ರಾಷ್ಟ್ರಗಳ ಅಂತರಾಷ್ಟ್ರೀಯ ಸಹಕಾರ ಸಂಸ್ಥೆ (ಎಸ್ಸಿಒ) ವಿಶ್ವದ ಎಂಟನೇ ಅದ್ಭುತದಲ್ಲಿ ಒಂದು ಎಂದು ಸೇರಿಸಿದೆ. ದೇಶದ ಮೊದಲ ಗೃಹ ಮಂತ್ರಿ ವಲ್ಲಭಭಾಯಿ ಪಟೇಲ್ ಅವರ ಬೃಹತ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 31, 2018 ರಂದು ಉದ್ಘಾಟಿಸಿದರು.

"ಏಕತಾ ಪ್ರತಿಮೆಯು ಮುಂದಿನ ವರ್ಷಗಳಲ್ಲಿ ಕನಿಷ್ಠ ಒಂದು ಲಕ್ಷ ಕೋಟಿ ಮೌಲ್ಯದ ಆರ್ಥಿಕ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತಿದೆ" ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಕೆವಾಡಿಯಾದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕೆವಾಡಿಯಾದಿಂದ ಹೊಸ ರೈಲ್ವೇ ನಿಲ್ದಾಣ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಪಿಯೂಷ್ ಗೋಯೆಲ್ ವಡೋದರದಿಂದ ಕೇವಾಡಿಯಾಗೆ ಹೆಚ್ಚಿನ ವೇಗದಲ್ಲಿ ಚಲಿಸುವ ರೈಲುಗಳು ಮುಂದಿನ ದಿನಗಳಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದರು.

'' ಕೆಲವು ಸ್ಥಳಗಳಲ್ಲಿ ಈಗಾಗಲೇ ಹಳಿಗಳನ್ನು ಹಾಕಲು ಪ್ರಾರಂಭಿಸಲಾಗಿದೆ. ಮಾರ್ಚ್ ವೇಳೆಗೆ ಇತರೆ ವಿಸ್ತಾರಗಳಲ್ಲಿ ಕೆಲಸ ಪ್ರಾರಂಭವಾಗಲಿದೆ. ಇದನ್ನು ಮುಖ್ಯ ಮಾರ್ಗದೊಂದಿಗೆ (ವಡೋದರದೊಂದಿಗೆ) ಸಂಪರ್ಕಿಸಿದ ನಂತರ, ದೇಶಾದ್ಯಂತ ಪ್ರವಾಸಿಗರು ಕೆವಾಡಿಯಕ್ಕೆ ಬರಲು ಸಾಧ್ಯವಾಗುತ್ತದೆ'' ಎಂದು ಗೋಯೆಲ್ ಹೇಳಿದ್ದಾರೆ.
ಜೊತೆಗೆ ಕೆವಾಡಿಯಾ-ವಡೋದರ ನಡುವಿನ ರೈಲು ಮಾರ್ಗಕ್ಕೆ ಭೂಸ್ವಾಧೀನ ಪ್ರಕ್ರಿಯೆಯು ಮಾರ್ಚ್ ವೇಳೆಗೆ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications