ಟಾಟಾ ಗ್ರೂಪ್ನ ಕಾರ್ಯ ನಿರ್ವಾಹಕ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿಯನ್ನು ಮರುನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿ(ಎನ್ಸಿಎಲ್ಎಟಿ) ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿ ಸೈರಸ್ ಮಿಸ್ತ್ರಿಯವರನ್ನು ಟಾಟಾ ಸನ್ಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡುವಂತೆ ಆದೇಶ ನೀಡಿತ್ತು. ಮೂರು ವರ್ಷಗಳ ಹಿಂದೆ 2016ರಲ್ಲಿ ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿ ಸೈರಸ್ ಮಿಸ್ತ್ರಿಯನ್ನು ಟಾಟಾ ಗ್ರೂಪ್ನ ಆಡಳಿತ ಮಂಡಳಿಯಿಂದ ಹೊರ ಹಾಕಲಾಗಿತ್ತು. ನಂತರ ರತನ್ ಟಾಟಾ ಸಂಸ್ಥೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಆ ಬಳಿಕ ಮಿಸ್ತ್ರಿ ಕಂಪನಿಯ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿ ನ್ಯಾಯಮಂಡಳಿ ಮೊರೆ ಹೋಗಿದ್ದರು.

ಸೈರಸ್ ಮಿಸ್ತ್ರಿ ಅವರನ್ನು ಮರುನೇಮಕ ಮಾಡಬೇಕೆಂಬ ಎನ್ಸಿಎಲ್ಎಟಿ ಆದೇಶ ರದ್ದುಪಡಿಸಬೇಕೆಂದು ಟಾಟಾ ಸನ್ಸ್ ಅರ್ಜಿ ಸಲ್ಲಿಸಿತ್ತು. ಶುಕ್ರವಾರ ಇದರ ವಿಚಾರ ನಡೆಸಿದ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಈ ತೀರ್ಪು ಕನಿಷ್ಠ ಸಾಮಾನ್ಯ ದೋಷದಿಂದ ಕೂಡಿದೆ. ನಾವು ಈ ಬಗ್ಗೆ ವಿವರಗಳನ್ನು ತಿಳಿಯಬೇಕಾಗಿದೆ ಎಂದು ತಿಳಿಸಿದೆ. ಜತೆಗೆ ಮಿಸ್ತ್ರಿ ಮತ್ತಿತರರಿಗೆ ನೋಟಿಸ್ ನೀಡಿದೆ.
ಇನ್ನು ಇತ್ತೀಚೆಗಷ್ಟೇ ಪದಚ್ಯುತ ಅಧ್ಯಕ್ಷ ಸೈರಸ್ ಮಿಸ್ತ್ರಿ ತಾವು ಮತ್ತೆ ಟಾಟಾ ಗ್ರೂಪ್ನ ಅಧ್ಯಕ್ಷರಾಗಿ ಅಥವಾ ಯಾವುದೇ ಹುದ್ದೆಯ ಸ್ವರೂಪದಲ್ಲಿರಲು ತಮಗೆ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications