ನೋಟು ಅಪನಗದೀಕರಣ ನಡೆದು ಸುಮಾರು 6 ವರ್ಷಗಳು ಕಳೆದಿದೆ. 2016ರಲ್ಲಿ ಕೇಂದ್ರ ಸರ್ಕಾರವು ದಿಡೀರ್ ಆಗಿ 1000 ರೂಪಾಯಿ ಹಾಗೂ 500 ರೂಪಾಯಿಯ ನೋಟನ್ನು ಬ್ಯಾನ್ ಮಾಡಿದೆ. ಈ ಅಪನಗದೀಕರಣ ಸಂಬಂಧಿಸಿದ ಎರಡು ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಜನವರಿ 2, 2023ರಂದು ನೀಡಲಿದೆ.
ಕೇಂದ್ರ ಸರ್ಕಾರವು ನೋಟನ್ನು ಅಪನಗದೀಕರಣ ಮಾಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ತೀರ್ಪನ್ನು ನ್ಯಾಯಾಂಗದ ಚಳಿಗಾಲದ ರಜೆ ಅವಧಿ ಮುಗಿದ ಮೊದಲ ದಿನವೇ ಪ್ರಕಟ ಮಾಡಲಿದೆ.
ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಜೀರ್, ಬಿಆರ್ ಗವಾಯ್, ಎಎಸ್ ಬೋಪಣ್ಣ, ವಿ ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ತೀರ್ಪು ಪ್ರಕಟ ಮಾಡಲಿದ್ದಾರೆ. ಇನ್ನು ಈ ನೋಟು ಅಪನಗದೀಕರಣದ ವಿರುದ್ಧವಾಗಿ ಸುಮಾರು 58 ಅರ್ಜಿಗಳು ಸಲ್ಲಿಸಲಾಗಿದೆ. ಈ ಅರ್ಜಿಗಳಲ್ಲಿ ಹೆಚ್ಚಿನವುಗಳು ಅಪನಗದೀಕರಣದ ಸಿಂಧುತ್ವವನ್ನು ಪ್ರಶ್ನೆ ಮಾಡಿರುವ ಅರ್ಜಿಗಳಾಗಿದೆ.

ಎರಡು ಅರ್ಜಿಗಳ ತೀರ್ಪು
ಸುಪ್ರೀಂ ಕೋರ್ಟ್ ಇಂದು ಎರಡು ಪ್ರಮುಖ ವಿಚಾರಗಳ ಬಗ್ಗೆ ತೀರ್ಪನ್ನು ಇಂದು ನೀಡಲಿದೆ. ಈ ತೀರ್ಪನ್ನು ನ್ಯಾಯಮೂರ್ತಿ ಬಿಆರ್ ಗವಾಯ್ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಪ್ರಕಟಿಸಲಿದ್ದಾರೆ. ಇನ್ನು ಈ ಹಿಂದೆ ನೋಟು ರದ್ದತಿ ತೀರ್ಮಾನದ ಬಗ್ಗೆ ದಾಖಲೆಗಳನ್ನು ನೀಡಲು ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ಗೆ ಡಿ. 7ರಂದು ಸುಪ್ರೀಂಕೋರ್ಟ್ ನಿರ್ದೇಶಿಸಿತ್ತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 8, 2016ರಂದು ದೇಶದ ಜನರನ್ನು ಉದ್ದೇಶಿಸಿ ಮಾಧ್ಯಮದಲ್ಲಿ ಮಾತನಾಡುತ್ತಾ, ಕೂಡಲೇ ಜಾರಿಗೆ ಬರುವಂತೆ 500 ರೂಪಾಯಿ ಹಾಗೂ 1000 ರೂಪಾಯಿ ನೋಟಿನ ಅಪನಗದೀಕರಣ ಮಾಡಿದ್ದಾರೆ. ಈ ಅಪನಗದೀಕರಣ ನಡೆದು ಆರು ವರ್ಷಗಳು ಆಗಿದೆ.
ಪ್ರಮುಖವಾಗಿ ಕಪ್ಪು ಹಣದ ವಿರುದ್ಧ ಇದು ನಮ್ಮ ಹೋರಾಟ ಎಂದು ಕೇಂದ್ರ ಸರ್ಕಾರವು ಹೇಳಿಕೊಂಡಿದೆ. ಅಂದರೆ ಕಪ್ಪು ಹಣ ತಡೆಗಟ್ಟುವ ನಿಟ್ಟಿನಲ್ಲಿ ನೋಟ್ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಆ ಸಂದರ್ಭದಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರದ ಈ ದಿಡೀರ್ ನಿರ್ಧಾರವನ್ನು ಬಿಜೆಪಿಯು ಉತ್ತಮ ನಿರ್ಧಾರ ಎಂದು ಹಾಡಿಹೊಗಳಿದರೆ, ವಿರೋಧ ಪಕ್ಷವು ಟೀಕೆ ಮಾಡಿದೆ. ಯಾವುದೇ ತಯಾರಿ ನಡೆಸದೆಯೇ ಏಕಾಏಕಿ ಘೋಷಣೆ ಮಾಡಿ, ಬಡ ಜನರನ್ನು ಸರ್ಕಾರವೇ ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ವಿರೋಧ ಪಕ್ಷಗಳು ದೂರಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications