ನೋಟು ಅಪನಗದೀಕರಣ ನಡೆದು ಸುಮಾರು 6 ವರ್ಷಗಳು ಕಳೆದಿದೆ. 2016ರಲ್ಲಿ ಕೇಂದ್ರ ಸರ್ಕಾರವು ದಿಡೀರ್ ಆಗಿ 1000 ರೂಪಾಯಿ ಹಾಗೂ 500 ರೂಪಾಯಿಯ ನೋಟನ್ನು ಬ್ಯಾನ್ ಮಾಡಿದೆ. ಈ ಅಪನಗದೀಕರಣ ಸಂಬಂಧಿಸಿದ ಎರಡು ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಜನವರಿ 2, 2023ರಂದು ನೀಡಿದ್ದು ನೋಟು ಬ್ಯಾನ್ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.
ಕೇಂದ್ರ ಸರ್ಕಾರವು ನೋಟನ್ನು ಅಪನಗದೀಕರಣ ಮಾಡಿದ್ದನ್ನು ಪ್ರಶ್ನಿಸಿ ಅರ್ಜಿಯ್ನನು ಸಲ್ಲಿಸಲಾಗಿದೆ. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ತೀರ್ಪನ್ನು ನ್ಯಾಯಾಂಗದ ಚಳಿಗಾಲದ ರಜೆ ಅವಧಿ ಮುಗಿದ ಮೊದಲ ದಿನವೇ ಪ್ರಕಟ ಮಾಡಿದೆ.
4-1 ಬಹುಮತದ ಆಧಾರದಲ್ಲಿ ಸುಪ್ರೀಂ ಕೋರ್ಟ್ 2016ರ ಅಪನಗದೀಕರಣವ ಅನುಮೋದನೆ ಮಾಡಿದೆ. ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಜೀರ್, ಬಿಆರ್ ಗವಾಯ್, ಎಎಸ್ ಬೋಪಣ್ಣ, ವಿ ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠ ಈ ತೀರ್ಪನ್ನು ನೀಡಿದೆ. ಐವರ ಪೈಕಿ ನ್ಯಾಯಮೂರ್ತಿ ಬಿವಿ ನಾಗರತ್ನ ಈ ತೀರ್ಪಿಗೆ ವಿರೋಧವಾಗಿದ್ದಾರೆ.

ಈ ನೋಟು ಅಪನಗದೀಕರಣದ ವಿರುದ್ಧವಾಗಿ ಸುಮಾರು 58 ಅರ್ಜಿಗಳು ಸಲ್ಲಿಸಲಾಗಿದೆ. ಈ ಅರ್ಜಿಗಳಲ್ಲಿ ಹೆಚ್ಚಿನವುಗಳು ಅಪನಗದೀಕರಣದ ಸಿಂಧುತ್ವವನ್ನು ಪ್ರಶ್ನೆ ಮಾಡಿರುವ ಅರ್ಜಿಗಳಾಗಿದೆ. ಇನ್ನು ಕೆಲವು ನೋಟು ಬದಲಾವಣೆ ದಿನವನ್ನು ವಿಸ್ತರಣೆ ಮಾಡುವುದಕ್ಕೆ ಸಂಬಂಧಿಸಿದೆ.
ನೋಟು ಬದಲಾವಣೆ ದಿನ ವಿಸ್ತರಣೆ ಮಾಡಲಾಗದು
1000 ರೂಪಾಯಿ ಹಾಗೂ 500 ರೂಪಾಯಿಯ ನೋಟನ್ನು ಬ್ಯಾನ್ ಮಾಡಿದ ಬಳಿಕ ನೋಟು ಬದಲಾವಣೆ ಮಾಡಿಕೊಳ್ಳಲು ಸುಮಾರು 52 ದಿನಗಳ ಗಡುವನ್ನು ನೀಡಲಾಗಿತ್ತು. ಈ ದಿನವನ್ನು ಮತ್ತೆ ವಿಸ್ತರಣೆ ಮಾಡಲಾಗದು ಎಂದು ಕೂಡಾ ಸುಪ್ರೀಂ ಕೋರ್ಟ್ ತಿಳಿಸಿದೆ. ಹಾಗೆಯೇ 1978ರಲ್ಲಿಯೂ ನೋಟು ಅಪನಗದೀಕರಣ ಮಾಡಲಾಗಿದೆ. ಆ ಸಂದರ್ಭದಲ್ಲಿ ನೋಟು ಬದಲಾವಣೆ ಮಾಡಲು 3 ದಿನಗಳ ಅವಧಿ ನೀಡಲಾಗಿತ್ತು. ಬಳಿಕ ಗಡುವನ್ನು 5 ದಿನಕ್ಕೆ ವಿಸ್ತರಣೆ ಮಾಡಲಾಗಿತ್ತು ಎಂದು ವಿವರಿಸಿದೆ.
ಜನರಲ್ಲಿರುವ ನಗದು ಪ್ರಮಾಣ ಸಾರ್ವಕಾಲಿಕ ಏರಿಕೆ
ಕೇಂದ್ರ ಸರ್ಕಾರವು 500 ರೂಪಾಯಿ ಹಾಗೂ 1 ಸಾವಿರ ರೂಪಾಯಿಯ ನೋಟನ್ನು ಅಪನಗದೀಕರಣ ಮಾಡಿ ಆರು ವರ್ಷಗಳು ಆಗಿದೆ. ಆದರೆ ಜನರಲ್ಲಿರುವ ನಗದು ಪ್ರಮಾಣವು ಈ ವರ್ಷದಲ್ಲಿ ಸಾರ್ವಕಾಲಿಕವಾಗಿ ಏರಿಕೆಯಾಗಿದೆ. ಅಕ್ಟೋಬರ್ 21, 2022ರವರೆಗಿನ ಲೆಕ್ಕಾಚಾರದ ಪ್ರಕಾರ ಜನರ ಕೈಯಲ್ಲಿರುವ ನಗದು ಸಾರ್ವಕಾಲಿಕ ಏರಿಕೆಯಾಗಿದ್ದು, ಪ್ರಸ್ತುತ 30.88 ಲಕ್ಷ ಕೋಟಿ ರೂಪಾಯಿ ನಗದು ಇದೆ. ನವೆಂಬರ್ 4, 2016ರಲ್ಲಿ ಜನರ ಕೈಯಲ್ಲಿರುವ ನಗದು ಪ್ರಮಾಣ 17.97 ಲಕ್ಷ ಕೋಟಿ ರೂಪಾಯಿ ಆಗಿತ್ತು. ಆದರೆ 2022ರಲ್ಲಿ ಈ ನಗದು ಪ್ರಮಾಣ 2016ಕ್ಕೆ ಹೋಲಿಕೆ ಮಾಡಿದಾಗ ಸುಮಾರು ಶೇಕಡ 72ರಷ್ಟು ಅಥವಾ 12.91 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ.
ಕೇಂದ್ರ ಸರ್ಕಾರವು 2016ರ ನವೆಂಬರ್ 8ರಂದು 500 ರೂಪಾಯಿ ಹಾಗೂ 1 ಸಾವಿರ ರೂಪಾಯಿ ನೋಟನ್ನು ಅಪನಗದೀಕರಣ ಮಾಡಿದ ಬಳಿಕ, 2016ರ ನವೆಂಬರ್ 25ರಲ್ಲಿ ಜನರ ಬಳಿ ಸುಮಾರು 9.11 ಲಕ್ಷ ಕೋಟಿ ರೂಪಾಯಿ ಇತ್ತು. ಆ ಮೌಲ್ಯದಿಂದ ಪ್ರಸ್ತುತ ಜನರ ಕೈಯಲ್ಲಿರುವ ಇರುವ ನಗದು ಪ್ರಮಾಣವು ಸುಮಾರು ಶೇಕಡ 239ರಷ್ಟು ಏರಿಕೆಯಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications