ಹೊಸೂರು ಏರ್ ಪೋರ್ಟ್ ಯೋಜನೆ ನಿನ್ನೆ ಮೊನ್ನೆಯ ಯೋಜನೆಯಲ್ಲ. ಬಹು ಕಾಲದಿಂದ ಚಿಂತನೆಯಲ್ಲಿದೆ. ತಮಿಳುನಾಡು ರಾಜ್ಯವನ್ನು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸುವ ಗುರಿ ಹೊಂದಿರುವ ಈ ಯೋಜನೆ ಎಷ್ಟೇ ಅಡೆತಡೆ ಬಂದರೂ ಮುನ್ನುಗ್ಗುತ್ತಿದೆ. ಈ ಯೋಜನೆಯ ನಿರೀಕ್ಷೆ ಹೊಂದಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ, ವಿಮಾನಯಾನ ಮೂಲಸೌಕರ್ಯ ಅಭಿವೃದ್ಧಿಗೆ ಭಾರಿ ಪ್ರಾಮುಖ್ಯತೆ ನೀಡಿದೆ.

ಹೌದು, ಈ ಯೋಜನೆಯ ದೃಷ್ಟಿಯಿಂದ ರಾಜ್ಯದ ಹಲವು ಭಾಗಗಳಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಯೋಜನೆಯನ್ನು ಆಕರ್ಷಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಎರಡು ಪ್ರಸ್ತಾವಿತ ಸ್ಥಳಗಳನ್ನು ತಮಿಳುನಾಡು ಸರ್ಕಾರ ಶಾರ್ಟ್ಲಿಸ್ಟ್ ಮಾಡಿದೆ.
ವಿಮಾನ ನಿಲ್ದಾಣದ ಪ್ರಸ್ತಾವಿತ ಸ್ಥಳಗಳು:
ಇನ್ನು ಈ ಹೊಸೂರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಚರ್ಚೆಯಲ್ಲಿರುವ ಎರಡು ಪ್ರಮುಖ ಸ್ಥಳಗಳೆಂದರೆ, ತನೇಜಾ ಏವಿಯೇಷನ್ ಮತ್ತು ಏರೋಸ್ಪೇಸ್ ಲಿಮಿಟೆಡ್ (TAAL) ಬಳಿಯ ಬೆಳಗೊಂಡಪಲ್ಲಿ. ಹಾಗೂ ಶೂಲಗಿರಿ ಬಳಿಯ ಮತ್ತೊಂದು ಸ್ಥಳ ಎಂದು ಪ್ರಸ್ತಾವಿತ ಸ್ಥಳಗಳನ್ನು ಗುರುತಿಸಲಾಗಿದೆ.
ಇದು ಸುಮಾರು 2,000 ಎಕರೆ ಭೂಮಿಯ ಯೋಜನೆಯಾಗಿದ್ದು, ವಾರ್ಷಿಕವಾಗಿ 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವಿರಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 85 ಕಿ.ಮೀ ದೂರದಲ್ಲಿರುವ ಹೊಸೂರು ಕೈಗಾರಿಕಾ ನಗರವಾಗಿರುವುದರಿಂದ, ವಿಮಾನ ನಿಲ್ದಾಣ ನಿರ್ಮಾಣ ಬಯಲಿನಲ್ಲಿ ಈ ಸ್ಥಳವನ್ನು ಹೆಚ್ಚು ಪರಿಗಣಿಸಲಾಗಿದೆ.
ಬಿಎಐಎಲ್ ಒಪ್ಪಂದದ ಪ್ರಭಾವ:
ಹೊಸೂರು ವಿಮಾನ ನಿಲ್ದಾಣ ಸ್ಥಾಪನೆಯ ಮೇಲೆ ಪ್ರಮುಖ ಅಡ್ಡಿಯೊಂದು ಎಡೆಬರುತ್ತಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಕೇಂದ್ರ ಸರ್ಕಾರದೊಂದಿಗೆ 2033ರ ವರೆಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ, ಬೆಂಗಳೂರು ವಿಮಾನ ನಿಲ್ದಾಣದಿಂದ 150 ಕಿ.ಮೀ ವ್ಯಾಪ್ತಿಯ ಒಳಗೆ ಯಾವುದೇ ಹೊಸ ಸಾರ್ವಜನಿಕ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಅವಕಾಶವಿಲ್ಲ. ಈ ನಿಯಮವನ್ನು ಪರಿಗಣಿಸಿ, ತಮಿಳುನಾಡು ಸರ್ಕಾರ ತಾಂತ್ರಿಕ ಸಮೀಕ್ಷೆ, ಮೇಲ್ಮೈ ಅಧ್ಯಯನ, ವಾಯುಪ್ರದೇಶ ವಿಶ್ಲೇಷಣೆ ಹಂತಗಳಲ್ಲಿ ಮುಂದಾಗಿದೆ.
ಪರಂದೂರಿನ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ:
ಪರಂದೂರಿನಲ್ಲಿ ₹20,000 ಕೋಟಿಯ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಯೋಜನೆಯು 13 ಹಳ್ಳಿಗಳನ್ನು, 4,791 ಎಕರೆ ಭೂಮಿಯನ್ನು, ಮತ್ತು ವಿಶೇಷವಾಗಿ 2,605 ಎಕರೆ ಜೌಗು ಪ್ರದೇಶಗಳನ್ನು ಒಳಗೊಂಡಿದೆ. ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂಬ ಕಾರಣದಿಂದ ಸ್ಥಳೀಯರು ಬಹುಪಾಲು ವಿರೋಧ ವ್ಯಕ್ತಪಡಿಸಿದ್ದಾರೆ.
ಸರ್ವೇ ಸಮಿತಿಗಳ ವರದಿಗಳನ್ನು ಸಾರ್ವಜನಿಕಗೊಳಿಸಬೇಕೆಂದು ಪರಿಸರ ವಿಜ್ಞಾನಿ ಪ್ರಭಾಕರನ್ ವೀರಅರಸು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜೊತೆಗೆ, ಈ ಯೋಜನೆಗೆ ಸಂಬಂಧಿಸಿದ ಚೆನ್ನೈ ಮೆಟ್ರೋ ಹಂತ-4 ವಿಸ್ತರಣೆಯನ್ನೂ ಕೆಲವರು ಪ್ರಶ್ನಿಸುತ್ತಿದ್ದಾರೆ. ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (AIIB) ನಿಂದ ಹಣಕಾಸು ಸಹಾಯ ಪಡೆದಿರುವ ಈ ಯೋಜನೆ ಪರಿಸರ ಹಾಗೂ ಸಮುದಾಯದ ಹಿತಾಸಕ್ತಿಗೆ ವಿರುದ್ಧವಿದೆ ಎಂದು ನೆರೆವಾಸಿಗಳು ಅಭಿಪ್ರಾಯಪಟ್ಟಿದ್ದಾರೆ.
2022ರಲ್ಲಿ ಪರಂದೂರಿನಲ್ಲಿ ವಿಮಾನ ನಿಲ್ದಾಣ ಯೋಜನೆ ಘೋಷಣೆ ಮಾಡಿದ ಬಳಿಕ, ಸ್ಥಳೀಯ ಜನತೆ ಶಾಂತಿಯುತ ಪ್ರತಿಭಟನೆ ನಡೆಸುತ್ತಾ ಬಂದಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೆಲವರು ಮತದಾನವನ್ನು ಬಹಿಷ್ಕರಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಜೊತೆಗೆ, ಕೆಲವರು ಆಂಧ್ರಪ್ರದೇಶದ ಚಿತ್ತೂರಿಗೆ ತೆರಳಿ ಅಲ್ಲಿನ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ "ತಮಿಳುನಾಡಿನಿಂದ ನಿರ್ಗತಿಕರಾಗಿದ್ದಂತೆ" ನೆಲದ ಬೇಡಿಕೆ ಸಲ್ಲಿಸುವ ಮಟ್ಟಕ್ಕೆ ಹೋಗಿದ್ದಾರೆ.
ತಮಿಳುನಾಡು ಸರ್ಕಾರ ವಿಮಾನ ನಿಲ್ದಾಣಗಳನ್ನು ರಾಜ್ಯದ ಅಭಿವೃದ್ಧಿಗೆ ಅವಿಭಾಜ್ಯ ಅಂಗವೆಂದು ಪರಿಗಣಿಸುತ್ತಿದೆ. ತಂತ್ರಜ್ಞಾನ, ಕೈಗಾರಿಕೆ ಮತ್ತು ಆರ್ಥಿಕ ಬೆಳವಣಿಗೆಗೆ ಏಷ್ಯಾದಲ್ಲಿ ಪ್ರಮುಖ ತಾಣವಾಗಿ ತಮಿಳುನಾಡನ್ನು ರೂಪಿಸಲು ಹೂಡಿಕೆಗೆ ಅನುಕೂಲಕರ ವಾತಾವರಣ ಕಲ್ಪಿಸುವ ಯೋಜನೆಯ ಭಾಗವೆಂದೇ ಈ ವಿಮಾನ ನಿಲ್ದಾಣ ಯೋಜನೆಗಳು ಕಾರ್ಯನಿರ್ವಹಿಸುತ್ತಿವೆ.
ಚೆನ್ನೈ, ಕೊಯಮತ್ತೂರು, ಮಧುರೈ ಮತ್ತು ತಿರುಚಿರಾಪಳ್ಳಿಯಲ್ಲಿ ಈಗಾಗಲೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಿವೆ. ಆದರೆ ಮುಂದಿನ ದಶಕದಲ್ಲಿ ಪ್ರಯಾಣಿಕರ ಸಂಖ್ಯೆಯು ಗಣನೀಯವಾಗಿ ಹೆಚ್ಚಳವಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ, ಹೊಸ ವಿಮಾನ ನಿಲ್ದಾಣಗಳ ಅಗತ್ಯ ಎದುರಾಗಿದೆ.
ತಮಿಳುನಾಡಿನಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಪ್ರಸ್ತಾಪಗಳು ರಾಜ್ಯದ ಆರ್ಥಿಕ ಗುರಿಗಳನ್ನು ಸಾಧಿಸಲು ದಾರಿ ಮಾಡಿಕೊಡಬಹುದು. ಆದರೆ ಪರಿಸರ, ಸಮುದಾಯ ಹಿತಾಸಕ್ತಿ ಮತ್ತು ನಿರ್ವಹಣಾ ಸಮಸ್ಯೆಗಳ ಬಗ್ಗೆ ಸೂಕ್ತ ಗಮನ ಹರಿಸದಿದ್ದರೆ ಈ ಮಹತ್ವಾಕಾಂಕ್ಷೆಯ ಯೋಜನೆಗಳು ಜನಪ್ರತಿಭಟನೆ ಮತ್ತು ಸವಾಲುಗಳಿಗೆ ಗುರಿಯಾಗಬಹುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications