ಭಾರತದ ಅತಿದೊಡ್ಡ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಮುಂದಿನ ಐದು ವರ್ಷಗಳಲ್ಲಿ ತನ್ನ ನೌಕರರು ಕಚೇರಿಯಲ್ಲಿ ಕೆಲಸ ಮಾಡುವ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ ಎಂದು ಕಂಪನಿಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾವೈರಸ್ನಿಂದಾಗಿ ಎದುರಿಸಿದ ಸವಾಲುಗಳು ಈ ನಿರ್ಧಾರವನ್ನು ತೆಗೆದುಕೊಳ್ಳಲು ಉತ್ತೇಜಿಸಿದೆ ಎಂದು ಕಂಪನಿ ಹೇಳಿದೆ.
"ಎಲ್ಲಾ 100 ರಷ್ಟು ಕಾರ್ಯ ಸಾಧನೆಗೆ 25 ಪರ್ಸೆಂಟ್ ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ಹೊಂದುವ ಅಗತ್ಯವಿಲ್ಲ" ಎಂದು ಕಂಪನಿಯು ನಂಬಿದೆ ಎಂದು ಟಿಸಿಎಸ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ ಗಣಪತಿ ಸುಬ್ರಮಣ್ಯಂ ಹೇಳಿದರು. 'ಉದ್ಯೋಗಿಗಳು ತಮ್ಮ ಕಚೇರಿಯಲ್ಲಿ 25 ಪರ್ಸೆಂಟ್ ಸಮಯವನ್ನು ಕಳೆಯುವುದು ಸಾಕು ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ ಅವರು, ಎಲ್ಲಾ ಸಮಯದಲ್ಲೂ ಪ್ರತಿಯೊಬ್ಬ ಉದ್ಯೋಗಿಗಳು ಕಚೇರಿಯಲ್ಲಿ ಇರಬೇಕಾಗಿಲ್ಲ ಎಂದಿದ್ದಾರೆ.

ಐಟಿ ಕಂಪನಿಗಳು ಈ ಹಿಂದೆ ಉದ್ಯೋಗಿಗಳಿಗೆ ಮನೆಯಿಂದ ಸೀಮಿತ ದಿನಗಳವರೆಗೆ ಮಾತ್ರ ಕೆಲಸ ಮಾಡುವ ಆಯ್ಕೆಯನ್ನು ನೀಡಿದ್ದವು, ಆದರೆ ಕೊರೊನಾವೈರಸ್ ಸೋಂಕಿನಿಂದಾಗಿ ಶಾಶ್ವತ ವರ್ಕ್ ಫ್ರಮ್ ಹೋಮ್ ಕಡೆಗೆ ಕಂಪನಿಗಳು ಮುಖ ಮಾಡುತ್ತಿವೆ.
ಮಾರ್ಚ್ನಿಂದ, ಭಾರತದ ಸುಮಾರು ನಾಲ್ಕು ಮಿಲಿಯನ್ ಐಟಿ ಉದ್ಯೋಗಿಗಳಲ್ಲಿ 80 ಪರ್ಸೆಂಟ್ನಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವುದಕ್ಕೆ ಸ್ಥಳಾಂತರಗೊಂಡಿದ್ದಾರೆ ಮತ್ತು ಜಾಗತಿಕವಾಗಿ ಗ್ರಾಹಕರಿಗೆ ಸೇವೆಗಳನ್ನು ತಲುಪಿಸುತ್ತಿದ್ದಾರೆ ಎಂದು ಟಿಸಿಎಸ್ ಸಿಇಒ ರಾಜೇಶ್ ಗೋಪಿನಾಥನ್ ಮುಂಬೈ ಪ್ರಧಾನ ಕಚೇರಿಯಲ್ಲಿ ತಿಳಿಸಿದರು. ಇದು "2025 ರ ವೇಳೆಗೆ 25/25 ಮಾದರಿಯನ್ನು ಪಡೆಯಬಹುದು ಮತ್ತು, ಭವಿಷ್ಯದಲ್ಲಿ ಎಂದಿಗೂ ಮತ್ತೆ ನೂರರಷ್ಟು ಉದ್ಯೋಗಿಗಳು ಕಚೇರಿಯಿಂದ ಕೆಲಸ ಮಾಡುವುದಿಲ್ಲ ಎಂದಿದ್ದಾರೆ. ಮಾರ್ಚ್ ಅಂತ್ಯದಲ್ಲಿ ಟಿಸಿಎಸ್ 4,48,464 ಜನರಿಗೆ ಉದ್ಯೋಗ ನೀಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications