4.5 ಲಕ್ಷದಷ್ಟು ಇರುವ ನಮ್ಮ ಸಿಬ್ಬಂದಿಯನ್ನು ಯಾರನ್ನೂ ಕೆಲಸದಿಂದ ತೆಗೆಯಲ್ಲ. ಆದರೆ ಈ ವರ್ಷ ಯಾವುದೇ ವೇತನ ಹೆಚ್ಚಳ ನೀಡದಿರುವುದಕ್ಕೆ ನಿರ್ಧಾರ ಮಾಡಿದ್ದೇವೆ ಎಂದು ಭಾರತದ ಪ್ರಮುಖ ಸಾಫ್ಟ್ ವೇರ್ ರಫ್ತು ಕಂಪೆನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ತಿಳಿಸಿದೆ. ಕೊರೊನಾದ ಹಿನ್ನೆಲೆಯಲ್ಲಿ ಭಾರತವೂ ಸೇರಿದಂತೆ ವಿಶ್ವದಾದ್ಯಂತ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಈ ಕಾರಣಕ್ಕೆ ಹಲವು ಕಂಪೆನಿಗಳಲ್ಲಿ ಸಿಬ್ಬಂದಿ ಕಡಿತ, ವೇತನ ಕಡಿತ ಸೇರಿ ವಿವಿಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ಇನ್ನು ಹೊಸದಾಗಿ 40 ಸಾವಿರ ಮಂದಿಯನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳಲು ಈಗಾಗಲೇ ಆಫರ್ ನೀಡಿದ್ದು, ಆ ಮಾತಿಗೆ ಬಗ್ಗೆ ಬದ್ಧವಾಗಿದ್ದೇವೆ ಎನ್ನಲಾಗಿದೆ. ಅಂದ ಹಾಗೆ, ಕೆಲವು ಬ್ಲ್ಯೂ ಚಿಪ್ ಕಂಪೆನಿಗಳು ಹೊಸ ನೇಮಕಾತಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಬೇಕು ಎಂದು ಹೇಳಿವೆ.
ಜನವರಿ- ಮಾರ್ಚ್ ತ್ರೈಮಾಸಿಕದ ಫಲಿತಾಂಶವನ್ನು ಕಂಪೆನಿ ಪ್ರಕಟಿಸಿದ್ದು, ಆರೋಗ್ಯಕರವಾದ ಏರಿಕೆ ದಾಖಲಿಸಿದೆ. ಆದರೆ ಹೊಸ ಆರ್ಥಿಕ ವರ್ಷದ ಮೊದಲ ಎರಡು ತ್ರೈ ಮಾಸಿಕವು ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ಬಹಳ ಕಷ್ಟವಿದೆ. ಆದಾಯವು ಇಳಿಕೆ ಆಗಬಹುದು ಎನ್ನಲಾಗಿದೆ.

"ನಮ್ಮ ಕಂಪೆನಿಯಿಂದ ನೀಡಿದ್ದ ಪ್ರತಿ ಜಾಬ್ ಆಫರ್ ನೂ ಮಾನ್ಯ ಮಾಡುತ್ತೇವೆ. ಯಾರನ್ನೂ ಉದ್ಯೋಗದಿಂದ ತೆಗೆಯುವುದಿಲ್ಲ" ಎಂದು ಟಿಸಿಎಸ್ ಸಿಇಒ ಹಾಗೂ ಎಂ.ಡಿ. ರಾಜೇಶ್ ಗೋಪಿನಾಥನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಾನವ ಸಂಪನ್ಮೂಲ ವಿಭಾಗದಿಂದ ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಿ, ಹೊಸಬರಿಗೆ ನಲವತ್ತು ಸಾವಿರ ಜಾಬ್ ಆಫರ್ ನೀಡಿದ್ದೇವೆ. ಈ ವರ್ಷದ ಮುಂಬರುವ ದಿನಗಳಲ್ಲಿ ಅವರು ಕಂಪೆನಿಗೆ ಸೇರ್ಪಡೆಯಾಗುತ್ತಾರೆ ಎಂದು ತಿಳಿಸಿದ್ದಾರೆ.
ಈ ವರ್ಷದ ಜೂನ್ ತನಕ ಕಾಲೇಜುಗಳು, ವಿಶ್ವವಿದ್ಯಾಲಯಗಳು ಇರುತ್ತವೆ. ಆ ನಂತರ ವಿದ್ಯಾರ್ಥಿಗಳು ಸೇರಿಕೊಳ್ಳುತ್ತಾರೆ. ಆದರೆ ಉದ್ಯೋಗಿಗಳಿಗೆ ವೇತನ ಹೆಚ್ಚಳವನ್ನು ಮಾಡದಿರಲು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications