ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಬೆಂಗಳೂರಿನ ಕೆಲವು ವೈದ್ಯಕೀಯ ಕಾಲೇಜುಗಳು ಸೇರಿದಂತೆ ದೇಶದಲ್ಲಿ ಸುಮಾರು 100 ವೈದ್ಯಕೀಯ ಕಾಲೇಜುಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಕಾಲೇಜುಗಳಲ್ಲಿ ಶಿಕ್ಷಕರು ತರಗತಿಗೆ ಹಾಜರಾಗದ ಕಾರಣದಿಂದಾಗಿ ನೋಟಿಸ್ ಅನ್ನು ನೀಡಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಉಪನ್ಯಾಸಕರು ವಿದ್ಯಾರ್ಥಿಗಳಿಂದ ಕಲಿಯಬೇಕಾದ ಪಾಠ ಇದು ಎಂದು ಎನ್ಎಂಸಿ ಹೇಳಿದೆ. ಶಿಕ್ಷಕರು ಕಡ್ಡಾಯವಾಗಿ ಶೇಕಡ 75 ರಷ್ಟು ತರಗತಿಗೆ ಹಾಜರಾಗಿಲ್ಲ ಎಂಬ ಕಾರಣದಿಂದಾಗಿ ಈ ನೋಟಿಸ್ ಅನ್ನು ನೀಡಲಾಗಿದೆ. ಅದಕ್ಕಾಗಿ ಈ ಕಾಲೇಜುಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಇನ್ನು ಈ ನೋಟಿಸ್ಗೆ ಪ್ರತಿಕ್ರಿಯೆ ನೀಡಲು ಸಂಸ್ಥೆಗಳು ಸುಮಾರು 15 ದಿನಗಳನ್ನು ತೆಗೆದುಕೊಂಡಿದೆ. ಆದ್ದರಿಂದಾಗಿ ಎನ್ಎಂಸಿ ಈ ಸಂಸ್ಥೆಗಳಿಗೆ ದಂಡವನ್ನು ಕೂಡಾ ವಿಧಿಸಲು ಮುಂದಾಗಿದೆ. ಹಲವಾರು ವೈದ್ಯಕೀಯ ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ಇದೆ ಎಂಬುವುದು ಸಾಮಾನ್ಯವಾದ ಸಮಸ್ಯೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ.
ಈ ತರಗತಿ ಹಾಜರಾತಿಯಲ್ಲಿ ಕೊರತೆ ಎಂದರೆ ವೈದ್ಯಕೀಯ ಕಾಲೇಜುಗಳಲ್ಲಿ ಬಹುತೇಕ ಶಿಕ್ಷಕರು ಅತಿಥಿ ಶಿಕ್ಷಕರು ಆಗಿದ್ದಾರೆ. ಆದರೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ದ ಅಡಿಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅವಕಾಶವಿಲ್ಲ. ಎನ್ಎಂಸಿ ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ, ಅಧ್ಯಾಪಕರು ಮತ್ತು ಹಿರಿಯ ನಿವಾಸಿ ವೈದ್ಯರು ಆಧಾರ್ ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ (AEBAS) ಮೂಲಕ ಕನಿಷ್ಠ ಶೇಕಡ 75 ರಷ್ಟು ಹಾಜರಾತಿಯನ್ನು ಹೊಂದಿರಬೇಕು.
ಎನ್ಎಂಸಿಯ ಮಾಂಡ್ ಮತ್ತು ಕಂಟ್ರೋಲ್ ಸೆಂಟರ್ಗೆ ಲಿಂಕ್ ಮಾಡಲಾದ ಎಇಬಿಎಎಸ್ ಅನ್ನು ಎಲ್ಲಾ ವೈದ್ಯಕೀಯ ಕಾಲೇಜುಗಳು ಹೊಂದಿರಬೇಕು. ಎಲ್ಲಾ ಸಿಬ್ಬಂದಿಯ ಎಇಬಿಎಎಸ್ ಮಾಹಿತಿಯನ್ನು ಎನ್ಎಂಸಿ ಮತ್ತು ಕಾಲೇಜು ವೆಬ್ಸೈಟ್ಗಳಲ್ಲಿ ಲಭ್ಯವಾಗುವಂತೆ ಮಾಡಬೇಕು.
ಮತ್ತೆ ಮತ್ತೆ ಎಚ್ಚರಿಕೆಯನ್ನು ನೀಡಿದ್ದರೂ ಕೂಡಾ "ನಿಮ್ಮ ವೈದ್ಯಕೀಯ ಕಾಲೇಜು ಕನಿಷ್ಠ ಗುಣಮಟ್ಟದ ಅವಶ್ಯಕತೆಗಳು-2023 (ಎಂಎಸ್ಆರ್ 2023) ನಲ್ಲಿ ಒಳಗೊಂಡಿರುವ ನಿಬಂಧನೆಗಳನ್ನು ಅನುಸರಿಸಲು ವಿಫಲವಾಗಿದೆ," ಎಂದು ಸರ್ಕಾರಿ ಕಾಲೇಜಿಗೆ ಕಳುಹಿಸಲಾದ ಶೋಕಾಸ್ ನೋಟಿಸ್ ಹೇಳಿದೆ.
"ನಾವು ಆರ್ಜಿಯುಎಚ್ಎಸ್ ಅಡಿಯಲ್ಲಿ ನೋಟಿಸ್ ಸ್ವೀಕರಿಸಿದ ಕಾಲೇಜುಗಳ ಪಟ್ಟಿಯನ್ನು ಹೊಂದಿಲ್ಲ. ಭಾರತದಾದ್ಯಂತ ಸುಮಾರು 100 ಕಾಲೇಜುಗಳು ಇದನ್ನು ಸ್ವೀಕರಿಸಿವೆ," ಎಂದು ರ್ಜಿಯುಎಚ್ಎಸ್ನ ಉಪಕುಲಪತಿ ಡಾ.ಎಂ.ಕೆ.ರಮೇಶ್ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದರು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications