ಸಂಸದ ತೇಜಸ್ವಿ ಸೂರ್ಯ(Tejasvi Surya) ಮತ್ತು ತಮಿಳುನಾಡಿನ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್(Sivasri Skandaprasad) ಅವರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಹೌದು,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ಸಮಾರಂಭ ನಡೆದಿದೆ. ಮದುವೆಗೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರಿಗೆ ಮಾತ್ರ ಆಹ್ವಾನವಿದ್ದು ಸರಳವಾಗಿ ಮದುವೆ ನಡೆದಿದೆ.

ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆಯುತ್ತಿವೆ.ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ತೇಜಸ್ವಿ ಸೂರ್ಯರ ಗಿರಿನಗರ ನಿವಾಸದಲ್ಲಿ ವಧುವನ್ನು ಮನೆ ತುಂಬಿಸಿಕೊಳ್ಳುವ ಕಾರ್ಯಕ್ರಮ ಇರಲಿದೆ.
ಇನ್ನೂ ಮಾ.9 ರಂದು ಬೆಳಗ್ಗೆ 10.30ರಿಂದ 1.30ರವರೆಗೆ ಆರತಕ್ಷತೆ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ ಎಂದು ಮೂಲಗಳು ಮಾಹಿತಿ ತಿಳಿಸಿವೆ.
ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆ ಕೂಡ ಆಗಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಚೆನ್ನೈನಲ್ಲಿ ನಡೆದ ಸಂಗೀತ ಕಚೇರಿಯಲ್ಲಿ ಇಬ್ಬರ ಪರಿಚಯವಾಗಿತ್ತು.ಅಲ್ಲಿ ಶಿವಶ್ರೀ ಅವರ ಸಂಗೀತದ ಅನೇಕ ಅಭಿಮಾನಿಗಳಲ್ಲಿ ಸೂರ್ಯ ಕೂಡ ಇದ್ದರು. ಕಾಲಾನಂತರದಲ್ಲಿ ಅವರ ಬಾಂಧವ್ಯ ಪ್ರೀತಿ ಆಗಿದೆ ಎಂದು ಮೂಲವೊಂದು ಮಾಹಿತಿಯನ್ನು ತಿಳಿಸಿದೆ.
ಸಂಸದ ತೇಜಸ್ವಿ ಸೂರ್ಯ ಅವರು 2022 ರಲ್ಲಿ ಅವರ ಪ್ರಚಾರದ ಸಮಯದಲ್ಲಿ, ಅವರು ಸಹ ಒಂದು ಪ್ರದರ್ಶನಕ್ಕೆ ಹಾಜರಿದ್ದರು. ಬೆಂಗಳೂರು ದಕ್ಷಿಣದಿಂದ ಎರಡು ಬಾರಿ ಲೋಕಸಭಾ ಸಂಸದರಾಗಿರುವ ಮತ್ತು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ನ ರಾಷ್ಟ್ರೀಯ ಅಧ್ಯಕ್ಷರಾಗಿ ತೇಜಸ್ವಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಶಿವಶ್ರೀ ಸ್ಕಂದಪ್ರಸಾದ್ ಯಾರು..?
ಶಿವಶ್ರೀ ಸ್ಕಂದಪ್ರಸಾದ್ ತಮಿಳುನಾಡಿನ ಗಾಯಕಿ, ಭರತನಾಟ್ಯ ಕಲಾವಿದೆ ಆಗಿದ್ದಾರೆ. ಇವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್ನಲ್ಲಿ ಪದವಿಯನ್ನೂ ಪಡೆದುಕೊಂಡಿದ್ದಾರೆ. ಹಾಗೂ ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಸಹ ಮಾಡಿದ್ದಾರೆ. ಇದಲ್ಲದೇ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಸಹ ಪಡೆದಿದ್ದಾರೆ. ಇನ್ನೂ ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ. ಆದರೆ ಕಲೆಯಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಆಯ್ಕೆ ಮಾಡಿಕೊಂಡಿದ್ದಾರೆ. ಇವರು 1 ಲಕ್ಷಕ್ಕೂ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ಅನ್ನು ಹೊಂದಿದ್ಧಾರೆ. ಹಾಗೂ 2 ಲಕ್ಷಕ್ಕೂ ಹೆಚ್ಚು ಯೂಟ್ಯೂಬ್ ಚಂದಾದಾರರಉ ಇದ್ದಾರೆ.
ಸಂಗೀತ ಪ್ರತಿಭೆಗೆ ರಾಷ್ಟ್ರೀಯ ಮನ್ನಣೆ
ಭರತನಾಟ್ಯ ಕಲಾವಿದೆ ಶಿವಶ್ರೀ ಅವರ ಸಂಗೀತ ಪ್ರತಿಭೆಗೆ ರಾಷ್ಟ್ರೀಯ ಮನ್ನಣೆ ದೊರೆತಿದೆ, ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೂ ಮುನ್ನ ಅವರ ಭಕ್ತಿಪೂರ್ವಕ ಕನ್ನಡ ಪ್ರತಿಪಾದನೆಯನ್ನು ಶ್ಲಾಘಿಸಿದ್ದರು.
ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರ ಈ ಪ್ರತಿಪಾದನೆಯು ಪ್ರಭು ಶ್ರೀ ರಾಮನ ಮೇಲಿನ ಭಕ್ತಿಯ ಮನೋಭಾವವನ್ನು ಎತ್ತಿ ತೋರಿಸುತ್ತದೆ. ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಇಂತಹ ಪ್ರಯತ್ನಗಳು ಬಹಳ ದೂರ ಸಾಗುತ್ತವೆ ಎಂದು ಮೋದಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದರು.
ಸಾಮಾಜಿಕ ಜಾಲತಾಣಲ್ಲಿ ಮದುವೆಗೆ ಭಾಗಿಯಾದ ಹಲವರು ಫೋಟೋ ಹಂಚಿಕೊಂಡು ತೇಜಸ್ವಿ ಸೂರ್ಯರಿಗೆ ಶುಭ ಕೋರಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ, ಕೇಂದ್ರ ಸಚಿವ ವಿ ಸೋಮಣ್ಣ, ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವು ಮುಖಂಡರು ಗಣ್ಯರು ಶುಭಾ ಆರೈಕೆ ಕೋರಿದ್ದಾರೆ.
More From GoodReturns

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications