ಬೆಂಗಳೂರು, ಆಗಸ್ಟ್ 6: ಐಟಿ ರಫ್ತಿನಲ್ಲಿ ಕರ್ನಾಟಕಕ್ಕೆ ಠಕ್ಕರ್ ಕೊಡಲು ತೆಲಂಗಾಣ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಾಫ್ಟ್ ವೇರ್ ರಫ್ತಿನಲ್ಲಿ ರಫ್ತಿನಲ್ಲಿ ಕರ್ನಾಟಕವನ್ನು ಹಿಂದಿಕ್ಕುವ ಗುರಿ ಹೊಂದಿದ್ದೇವೆ ಎಂದು ತೆಲಂಗಾಣ ಐಟಿ ಸಚಿವ ಶ್ರೀಧರ್ ಬಾಬು ಹೇಳಿದ್ದಾರೆ.
ಐಟಿ ರಫ್ತಿನಲ್ಲಿ ಕರ್ನಾಟಕವನ್ನು ಹಿಂದಿಕ್ಕಿ ನಾವು ನಂಬರ್ 1 ಪಟ್ಟ ಏರಲಿದ್ದೇವೆ ಎಂದು ತೆಲಂಗಾಣ ಸಚಿವರು ಹೇಳಿದ್ದಾರೆ. ಪ್ರಸ್ತುತ ಸಾಫ್ಟ್ ವೇರ್ ರಫ್ತಿನಲ್ಲಿ ಬೆಂಗಳೂರು ನಂತರ ಹೈದರಾಬಾದ್ ಎರಡನೇ ಸ್ಥಾನದಲ್ಲಿದೆ. ಸಾಫ್ಟ್ ವೇರ್ ರಫ್ತಿನಲ್ಲಿ ತೆಲಂಗಾಣವನ್ನು ದೇಶದಲ್ಲೇ ನಂಬರ್ ಒನ್ ರಾಜ್ಯವನ್ನಾಗಿ ಮಾಡಲು ಸರ್ಕಾರ ಶ್ರಮಿಸುತ್ತಿದೆ ಎಂದು ತೆಲಂಗಾಣದ ಐಟಿ ಮತ್ತು ಕೈಗಾರಿಕಾ ಸಚಿವ ಡಿ ಶ್ರೀಧರ್ ಬಾಬು ಹೇಳಿದ್ದಾರೆ. ಸಾಫ್ಟ್ ವೇರ್ ರಫ್ತಿನಲ್ಲಿ ಶೇ.25 ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದ್ದು ಮೂರು ವರ್ಷಗಳಲ್ಲಿ ಬೆಂಗಳೂರನ್ನು ಹಿಂದಿಕ್ಕುವ ಗುರಿ ಹೊಂದಲಾಗಿದೆ ಎಂದಿದ್ದಾರೆ.

ಸೆಪ್ಟೆಂಬರ್ 5 ಮತ್ತು 6 ರಂದು ನಡೆಯಲಿರುವ AI ಸಮಿತ್ ವೆಬ್ಸೈಟ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ ಈ ವಿಚಾರ ತಿಳಿಸಿದರು. 2023-24ರಲ್ಲಿ ಹೈದರಾಬಾದ್ 2.7 ಲಕ್ಷ ಕೋಟಿ ಮೌಲ್ಯದ ಐಟಿ ಸರ್ವೀಸ್ ರಫ್ತು ಮಾಡಿದ್ದು 11 ಪ್ರತಿಶತ ಬೆಳವಣಿಗೆಯನ್ನು ಕಂಡಿದೆ ಎಂದು ಅವರು ತಿಳಿಸಿದರು.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಿಟಿ ಕುರಿತು ಮಾತನಾಡಿದ ಅವರು, ಹೈದರಾಬಾದ್ ಅನ್ನು ದೇಶ ಮತ್ತು ವಿಶ್ವದಲ್ಲಿ AI ಅಂದರೆ ಆರ್ಟಿಫಿಶಿಯಲ್ ಇಂಟಲಿಜನ್ಸ್ ನ ಹಬ್ ಆಗಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು. ಕೋಡಿಂಗ್ ತರಬೇತಿ ನೀಡಲು ಯಂಗ್ ಇಂಡಿಯಾ ಸ್ಕಿಲ್ಸ್ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ರಾಜ್ಯಕ್ಕೆ ಬೃಹತ್ ಹೂಡಿಕೆಗಳನ್ನು ತರಲು ಉದ್ಯಮಿಗಳ ಜತೆ ಮಾತುಕತೆ ನಡೆದಿದೆ. 2022-23 ಹಣಕಾಸು ವರ್ಷದಲ್ಲಿ ತೆಲಂಗಾಣ ಒಟ್ಟು 2,41,275 ಕೋಟಿ ಮೊತ್ತದ ಸಾಫ್ಟ್ ವೇರ್ ರಫ್ತು ಮಾಡಿದೆ. ಆರ್ಟಿಫಿಶಿಯಲ್ ಇಂಟಲಿಜನ್ಸ್ ವಿಭಾಗದಲ್ಲಿ ಹೊಸ ಆವಿಷ್ಕಾರಗಳಿಗೆ ಮುಂದಾಗಿದೆ ಎಂದು ತಿಳಿಸಿದರು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications