ನವದೆಹಲಿ, ಏಪ್ರಿಲ್ 21: ಸ್ಪೇಸ್ಎಕ್ಸ್ ಮತ್ತು ಟೆಸ್ಲಾದ ಸಂಸ್ಥಾಪಕ ಹಾಗೂ ವಿಶ್ವದ ಸಿರಿವಂತ ಉದ್ಯಮಿ ಎಲೋನ್ ಮಸ್ಕ್ ಅವರು ತಮ್ಮ ಬಹು ನಿರೀಕ್ಷಿತ ಭಾರತ ಪ್ರವಾಸವನ್ನು ಮುಂದೂಡಿದ್ದಾರೆ. ಕಳೆದ ಕೆಲದಿನಗಳ ಹಿಂದೆಯಷ್ಟೇ ಭಾರತಕ್ಕೆ ಭೇಟಿ ನೀಡುವ ಕುರಿತು ಖಚಿತ ಪಡಿಸಿದ್ದ ಅವರು, ಇದೀಗ ತಮ್ಮ ಪ್ರವಾಸ ರದ್ದುಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ದೃಢಪಡಿಸಿದ್ದಾರೆ.
ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲು ಸಜ್ಜಾಗಿದ್ದ ಟೆಸ್ಲಾ ಸಂಸ್ಥಾಪಕ ಎಲೋನ್ ಮಸ್ಕ್ ತಮ್ಮ ಪ್ರವಾಸ ರದ್ದುಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ದೃಢಪಡಿಸಿದ್ದು, 'ದುರಾದೃಷ್ಟವಶಾತ್ ಟೆಸ್ಲಾದ ಮೇಲಿರುವ ಜವಾಬ್ದಾರಿಗಳ ಹಿನ್ನಲೆ ಭಾರತಕ್ಕೆ ಭೇಟಿ ನೀಡುವುದನ್ನು ಮುಂದೂಡುವ ಅನಿವಾರ್ಯತೆ ಬಂದೊಂದಗಿದೆ" ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ಬಿಲಿಯನೇರ್ ಮಸ್ಕ್ ಟ್ವೀಟ್ ಮಾಡಿರುವ ಪ್ರಕಾರ ಏ. 3ನೇ ವಾರದಲ್ಲಿ ಅಥವಾ ಏ.22 ರಂದು ನವದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಬೇಕಿತ್ತು. ಈ ಕುರಿತು ಕಳೆದ ವಾರ ಟೆಸ್ಲಾ ಸಂಸ್ಥಾಪಕ ಕೂಡ ಎಕ್ಸ್ನಲ್ಲಿ ಖಚಿತಪಡಿಸಿದ್ದರು. ಈ ಭೇಟಿಯ ಮೂಲ ಉದ್ದೇಶ ಭಾರತದಲ್ಲಿ ಟೆಸ್ಲಾ ಇವಿ ಘಟಕ ಸ್ಥಾಪನೆಯಾಗಿತ್ತು. ಇದರ ಜೊತೆ ದೇಶದಲ್ಲಿ ತಮ್ಮ ಸಾಟಲೈಟ್ ಇಂಟರ್ನೆಟ್ ಸೇವೆ ಸ್ಟಾರ್ಲಿಂಕ್ ಪ್ರವೇಶ ಕುರಿತು ಕೂಡ ಚರ್ಚಿಸಲಿದ್ದಾರೆ ಎನ್ನಲಾಗಿತ್ತು.
ಆದರೆ ಇದೀಗ ಮಸ್ಕ್ ಅವರ ಭಾರತ ಪ್ರವಾಸ ಮುಂದೂಡಿಕೆಯಾಗಿದೆ. ಆದರೆ ಅವರು ಈ ವರ್ಷಾಂತ್ಯದಲ್ಲಿ ಭಾರತ ಪ್ರವಾಸ ಕುರಿತು ಯೋಚಿಸಲಾಗುವುದು' ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕಳೆದ ವರ್ಷದ ಜೂನ್ನಲ್ಲಿ ಮೋದಿ ಅವರು ಅಮೇರಿಕಾದ ನ್ಯೂಯಾರ್ಕ್ ಗೆ ಭೇಟಿ ನೀಡಿದ್ದ ವೇಳೆ ಮಸ್ಕ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ 2024 ರಲ್ಲಿ ಭಾರತಕ್ಕೆ ಭೇಟಿ ನೀಡುವುದಾಗಿ ಮಾತುಕತೆ ವೇಳೆ ಮಸ್ಕ್ ಪ್ರಕಟಿಸಿದ್ದರು. ಮಾತ್ರವಲ್ಲದೇ ಟೆಸ್ಲಾ ಸಂಸ್ಥೆಯೂ ಉತ್ಪಾದಿಸುತ್ತಿರುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ತೆರಿಗೆಗಳನ್ನು ಕಡಿಮೆ ಮಾಡಲು ಭಾರತಕ್ಕೆ ವಿನಂತಿಯನ್ನು ಮಾಡಿದ್ದರು.
ಭಾರತವು ಕಳೆದ ತಿಂಗಳು ಹೊಸ ಎಲೆಕ್ರ್ಟಿಕ್ ವಾಹನ ನೀತಿಗೆ ಅನುಮೋದನೆ ನೀಡಿದೆ. ದೇಶದಲ್ಲಿ ತಯಾರಕರು ಕನಿಷ್ಠ $500 ಮಿಲಿಯನ್(4150 ಕೋಟಿ ರೂ) ಬಂಡವಾಳ ಹೂಡಿಕೆ ಮಾಡಿ ಇ.ವಿ ತಯಾರಿಕಾ ಘಟಕ ಸ್ಥಾಪಿಸುವ ಕಂಪನಿಗಳಿಗೆ ಕೆಲವು ಮಾದರಿಗಳ ಮೇಲಿನ ಆಮದು ತೆರಿಗೆಗಳನ್ನು 100% ರಿಂದ 15% ಕ್ಕೆ ಇಳಿಸಲಿದೆ. ಇದು ಭಾರತದ ಮಾರುಕಟ್ಟೆ ಪ್ರವೇಶಿಸಲು ಮುಂದಾಗಿರುವ ಟೆಸ್ಲಾಗೆ ಇದು ವರದಾನವಾಗಲಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications