ಸದ್ಯದ ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಭಾರತ ಕೈಗೊಂಡಿರುವ ಸಂಘಟಿತ ಪ್ರಯತ್ನಗಳು ಉತ್ತಮವಾಗಿದೆ. ಆದರೆ, ಸುಸ್ಥಿರ ಮತ್ತು ಹೆಚ್ಚು ಅಂತರ್ಗತ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ದೇಶಕ್ಕೆ ಮತ್ತಷ್ಟು ಆರ್ಥಿಕ ಸುಧಾರಣೆಗಳು ಬೇಕಾಗುತ್ತವೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.
ಅಂತರರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯ ವಕ್ತಾರ ಗೆರ್ರಿ ರೈಸ್ ಗುರುವಾರ ಈ ಹೇಳಿಕೆ ನೀಡಿದ್ದು, ಭಾರತದಲ್ಲಿ ಫೇಸ್ಬುಕ್ ಮತ್ತು ಗೂಗಲ್ನಂತಹ ಜಾಗತಿಕ ದೈತ್ಯ ಕಂಪನಿಗಳು ಇತ್ತೀಚೆಗೆ ಮಾಡಿದ ವಿದೇಶಿ ನೇರ ಹೂಡಿಕೆಯನ್ನು ಶ್ಲಾಘಿಸಿದ್ದಾರೆ. ವ್ಯಾಪಾರ ವಾತಾವರಣವನ್ನು ಬಲಪಡಿಸಲು ಮತ್ತು ವ್ಯಾಪಾರದಲ್ಲಿ ಹೂಡಿಕೆಯನ್ನು ಉತ್ತೇಜಿಸಲು ಭಾರತದ ಸಂಘಟಿತ ಪ್ರಯತ್ನಗಳು ಹೂಡಿಕೆಯನ್ನು ಆಕರ್ಷಿಸಲು ಸಹಾಯ ಮಾಡಿವೆ, ಆದರೆ ಐಎಂಎಫ್ ಪ್ರಕಾರ, ಸುಸ್ಥಿರ ಮತ್ತು ಹೆಚ್ಚು ಅಂತರ್ಗತ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ದೇಶಕ್ಕೆ ಮತ್ತಷ್ಟು ಆರ್ಥಿಕ ಸುಧಾರಣೆಗಳು ಬೇಕಾಗುತ್ತವೆ ಎಂದಿದ್ದಾರೆ.
ಇತ್ತೀಚಿಗೆ, ಹಲವಾರು ಅಂತರರಾಷ್ಟ್ರೀಯ ಕಂಪನಿಗಳು ಭಾರತದಲ್ಲಿ 20 ಬಿಲಿಯನ್ ಯುಎಸ್ ಡಾಲರ್ ವಿದೇಶಿ ನೇರ ಹೂಡಿಕೆ ವಾಗ್ದಾನ ಮಾಡಿವೆ ಮತ್ತು ಇದುವರೆಗೆ 40 ಬಿಲಿಯನ್ ಯುಎಸ್ಡಿ ಡಾಲರ್ಗಳನ್ನು ಹೂಡಿವೆ ಎಂದಿದ್ದಾರೆ.
ಸಮಗ್ರ ಪ್ರಯತ್ನಗಳನ್ನು ಮಾಡಲಾಗಿದೆ
ಇತ್ತೀಚಿನ ವರ್ಷಗಳಲ್ಲಿ, ಭಾರತದಲ್ಲಿ, ವ್ಯಾಪಾರ ವಾತಾವರಣವನ್ನು ಬಲಪಡಿಸಲು ಮತ್ತು ವ್ಯಾಪಾರದಲ್ಲಿ ಹೂಡಿಕೆಯನ್ನು ಉತ್ತೇಜಿಸಲು ಸಮಗ್ರ ಪ್ರಯತ್ನಗಳನ್ನು ಮಾಡಲಾಗಿದೆ. ಇವು ಹೂಡಿಕೆಯನ್ನು ಆಕರ್ಷಿಸಲು ಮತ್ತು ಚಾಲ್ತಿ ಖಾತೆ ಹಣಕಾಸು ಮಿಶ್ರಣವನ್ನು ಸುಧಾರಿಸಲು ಸಹಾಯ ಮಾಡಿದೆ ಎಂದು ರೈಸ್ ಸುದ್ದಿಗೋಷ್ಠಿಯೊಂದರಲ್ಲಿ ತಿಳಿಸಿದ್ದಾರೆ.
ದಿವಾಳಿತನದ ವಿರುದ್ದದ ಕ್ರಮಗಳು
ಸದ್ಯದ ಸಂಬಂಧಿತ ಸುಧಾರಣೆಗಳು ಹೊಸ ದಿವಾಳಿತನದ ವಿರುದ್ದದ ಕ್ರಮಗಳು, ರಾಷ್ಟ್ರೀಯ ಸರಕು ಮತ್ತು ಸೇವಾ ತೆರಿಗೆಯನ್ನು ಒಳಗೊಂಡಿವೆ. ಇವುಗಳು ಭಾರತದ ವ್ಯವಹಾರ ಶ್ರೇಯಾಂಕವನ್ನು ಗಳಿಸಲು ಸಹಾಯ ಮಾಡಿವೆ, ವಿಶ್ವ ಬ್ಯಾಂಕಿನ ಈಸ್ ಆಫ್ ಡೂಯಿಂಗ್ ಬಿಸಿನೆಸ್ ಸೂಚ್ಯಂಕದಲ್ಲಿ ವೇಗವಾಗಿ ಚಲಿಸುತ್ತಿವೆ. ಗಮನಾರ್ಹ ಪ್ರಗತಿಯಾಗಿದೆ ಎಂದು ರೈಸ್ ಹೇಳಿದ್ದಾರೆ.
ಹೆಚ್ಚುವರಿ ಮೂಲಸೌಕರ್ಯ ಹೂಡಿಕೆ ಅಗತ್ಯ
ಅದೇನೇ ಇದ್ದರೂ, ಇನ್ನೂ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಭಾರತದಲ್ಲಿ ಸುಸ್ಥಿರ ಮತ್ತು ಹೆಚ್ಚು ಅಂತರ್ಗತ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಇತರ ಆರ್ಥಿಕ ಸುಧಾರಣೆಗಳು ಮತ್ತು ಹೆಚ್ಚುವರಿ ಮೂಲಸೌಕರ್ಯ ಹೂಡಿಕೆ ಅಗತ್ಯ ಎಂದು ಅವರು ಹೇಳಿದರು.
ಹೆಚ್ಚುವರಿ ಲಾಕ್ಡೌನ್ಗಳು ಬೇಕಾಗಬಹುದು
ಸದ್ಯ ಮತ್ತಷ್ಟು ಹೆಚ್ಚುವರಿ ಲಾಕ್ಡೌನ್ಗಳು ಬೇಕಾಗಬಹುದು, ಮತ್ತು ವೈರಸ್ನ ಬಗೆಗಿನ ಕಳವಳಗಳು ಗ್ರಾಹಕರ ವಿಶ್ವಾಸವನ್ನು ಕುಂದಿಸುತ್ತದೆ ಮತ್ತು ಆರ್ಥಿಕ ಚೇತರಿಕೆಗೆ ವಿಳಂಬವಾಗಬಹುದು. ಮತ್ತೆ, ಭಾರತದಲ್ಲಿ ಮಾತ್ರವಲ್ಲ, ಅನೇಕ ದೇಶಗಳಲ್ಲೂ ಇದೇ ಪರಿಸ್ಥಿತಿ ಇದೆ ಎಂದು ರೈಸ್ ಹೇಳಿದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications