ಬೆಂಗಳೂರಿನ ಟ್ರಾಫಿಕ್ ಸಮಸ್ಯೆ (Bengaluru Traffic Problem) ಬಗ್ಗೆ ಕೇಳೋದೆ ಬೇಡ. ಯಾವುದೇ ರಸ್ತೆ ನೋಡಿದ್ರೂ ವಾಹನಗಳಿಂದಲೇ ತುಂಬಿ ತುಳುಕುತ್ತಿರುತ್ತದೆ. ಇರೋದು ಒಂದು ಕಿ.ಮೀ ಆದ್ರೂ, ಹೋಗೋಕೆ ಕಡಿಮೆ ಅಂದರೂ ಕೆಲವೊಮ್ಮೆ 30 ನಿಮಿಷಗಳು ಬೇಕಾಗುತ್ತೆ. ಇನ್ನು ಈ ಸಮಸ್ಯೆ ಪರಿಹರಿಸಲು ಸರ್ಕಾರ, ಪೊಲೀಸ್ ಇಲಾಖೆ (Police Department) ಏನಾದರೊಂದು ಕ್ರಮ ಕೈಗೊಳುತ್ತಲೇ ಇರುತ್ತದೆ. ಅದೇ ರೀತಿ ಇದೀಗ ಬೆಂಗಳೂರು ಟ್ರಾಫಿಕ್ ಪೊಲೀಸ್ ಮತ್ತೊಂದು ಅಭಿಯಾನವನ್ನು ಶುರು ಮಾಡಿದೆ.

ಹೌದು, ಬೆಂಗಳೂರು ಸಂಚಾರ ಪೊಲೀಸರು ಇದೀಗ ಸಾರ್ವಜನಿಕರನ್ನೂ ಸಂಚಾರ ನಿರ್ವಹಣಾ ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳುವ ಹೊಸ ಅಭಿಯಾನವನ್ನು ಜಾರಿಗೆ ತರಲು ಸಜ್ಜಾಗಿದೆ. ನವೆಂಬರ್ ಅಂತ್ಯದೊಳಗೆ ಈ ಅಭಿಯಾನವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.
ಸಾರ್ವಜನಿಕರಿಗಾಗಿ ಹೊಸ ಅಭಿಯಾನ:
"ಒಂದು ದಿನ ಟ್ರಾಫಿಕ್ ಪೊಲೀಸ್ ಆಗಿರಿ" (Be a Traffic Cop For a Day) ಎಂಬ ಅಭಿಯಾನವನ್ನು ಜಾರಿಗೆ ತರಲು ಬೆಂಗಳೂರು ಸಂಚಾರ ಪೊಲೀಸರು ಸಿದ್ಧರಾಗಿದ್ದಾರೆ. ಈ ಅಭಿಯಾನದಿಂದ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಅದನ್ನು ನಿರ್ವಹಿಸುವ ಅನುಭ ನೇರವಾಗಿ ನಾಗರಿಕರಿಗೆ ಸಿಗಲಿದೆ. ಅಲ್ಲದೇ ನಾಗರಿಕರು ಮತ್ತು ಕಾನೂನು ಜಾರಿ ಅಧಿಕಾರಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಗುರಿ ಈ ಅಭಿಯಾನ ಹೊಂದಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ಇನ್ನು ಈ ಕಾರ್ಯಕ್ರಮದಿಂದ ಜನರಿಗೆ, ಸಂಚಾರ ಪೊಲೀಸರು ಎದುರಿಸುವ ಸವಾಲುಗಳೇನು ಎಂಬ ಅರಿವು ಮತ್ತು ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ನಾಗರಿಕರಿಗೆ ಸಲಹೆ ಪಡೆಯುವುದೇ ಮುಖ್ಯ ಉದ್ದೇಶವಾಗಿದೆ.
ಷರತ್ತು ಅನ್ವಯ!
ಇನ್ನು ಈ ಅಭಿಯಾನದಲ್ಲಿ ಭಾಗವಹಿಸುವವರು 18 ವರ್ಷ ಮೇಲ್ಪಟ್ಟವರಾಗಿರಬೇಕು. ಅಲ್ಲದೇ ಬೆಂಗಳೂರು ಸಂಚಾರ ಪೊಲೀಸರ ಅಸ್ಟ್ರಾಮ್ ಮೊಬೈಲ್ ಅಪ್ಲಿಕೇಶನ್ನಲ್ಲಿ (Astram App) ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ನೋಂದಣಿಯಾದ ಬಳಿಕ ಸ್ವಯಂ ಸೇವಕರು ತಮ್ಮ ಆಯ್ಕೆಯ ಜಂಕ್ಷನ್ ಅನ್ನು ಆಯ್ಕೆ ಮಾಡಬಹುದು. ಆದ್ರೆ ಅದನ್ನು ಆಯ್ಕೆ ಮಾಡುವ ಮುನ್ನ ಕಡ್ಡಾಯವಾಗಿ ಟ್ರಾಫಿಕ್ ಬಗ್ಗೆ ಒಂದು ಗಂಟೆ ತರಬೇತಿ ಅವಧಿಗೆ ಒಳಗಾಗಬೇಕಾಗುತ್ತದೆ. ಆ ನಂತರ ಆಯ್ಕೆಯಾದವರು ಪ್ರತಿ ದಿನ 2 ಗಂಟೆಗಳ ಅಥವಾ 4 ಗಂಟೆಗಳ ಅವಧಿಯವರೆಗೆ ಟ್ರಾಫಿಕ್ ನಿರ್ವಹಣೆ ಮಾಡುವಲ್ಲಿ ಸಹಕಾರ ನೀಡಬಹುದು.
ಈಗಾಗಲೇ ಪೊಲೀಸ್ ಅಧಿಕಾರಿಗಳು ಈ ಅಭಿಯಾನದಡಿಯಲ್ಲಿ ವಿವರವಾದ ನೀಲನಕ್ಷೆಯನ್ನು ಸಿದ್ಧಪಡಿಸಿದ್ದಾರೆ ಎನ್ನಲಾಗಿದೆ. ಎಲ್ಲಾ ಮಾಹಿತಿಗಳು ಲಭ್ಯವಾದ ಬಳಿಕ ಅಧಿಕೃತವಾಗಿ ಈ ಅಭಿಯಾನ ಜಾರಿಗೆ ತರಲಾಗುತ್ತದೆ ಎಂದು ವರದಿಯಾಗಿದೆ.
More From GoodReturns

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications