ಬೆಂಗಳೂರಿನ ಟ್ರಾಫಿಕ್ ಸಮಸ್ಯೆ (Bengaluru Traffic Problem) ಬಗ್ಗೆ ಕೇಳೋದೆ ಬೇಡ. ಯಾವುದೇ ರಸ್ತೆ ನೋಡಿದ್ರೂ ವಾಹನಗಳಿಂದಲೇ ತುಂಬಿ ತುಳುಕುತ್ತಿರುತ್ತದೆ. ಇರೋದು ಒಂದು ಕಿ.ಮೀ ಆದ್ರೂ, ಹೋಗೋಕೆ ಕಡಿಮೆ ಅಂದರೂ ಕೆಲವೊಮ್ಮೆ 30 ನಿಮಿಷಗಳು ಬೇಕಾಗುತ್ತೆ. ಇನ್ನು ಈ ಸಮಸ್ಯೆ ಪರಿಹರಿಸಲು ಸರ್ಕಾರ, ಪೊಲೀಸ್ ಇಲಾಖೆ (Police Department) ಏನಾದರೊಂದು ಕ್ರಮ ಕೈಗೊಳುತ್ತಲೇ ಇರುತ್ತದೆ. ಅದೇ ರೀತಿ ಇದೀಗ ಬೆಂಗಳೂರು ಟ್ರಾಫಿಕ್ ಪೊಲೀಸ್ ಮತ್ತೊಂದು ಅಭಿಯಾನವನ್ನು ಶುರು ಮಾಡಿದೆ.

ಹೌದು, ಬೆಂಗಳೂರು ಸಂಚಾರ ಪೊಲೀಸರು ಇದೀಗ ಸಾರ್ವಜನಿಕರನ್ನೂ ಸಂಚಾರ ನಿರ್ವಹಣಾ ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳುವ ಹೊಸ ಅಭಿಯಾನವನ್ನು ಜಾರಿಗೆ ತರಲು ಸಜ್ಜಾಗಿದೆ. ನವೆಂಬರ್ ಅಂತ್ಯದೊಳಗೆ ಈ ಅಭಿಯಾನವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.
ಸಾರ್ವಜನಿಕರಿಗಾಗಿ ಹೊಸ ಅಭಿಯಾನ:
"ಒಂದು ದಿನ ಟ್ರಾಫಿಕ್ ಪೊಲೀಸ್ ಆಗಿರಿ" (Be a Traffic Cop For a Day) ಎಂಬ ಅಭಿಯಾನವನ್ನು ಜಾರಿಗೆ ತರಲು ಬೆಂಗಳೂರು ಸಂಚಾರ ಪೊಲೀಸರು ಸಿದ್ಧರಾಗಿದ್ದಾರೆ. ಈ ಅಭಿಯಾನದಿಂದ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಅದನ್ನು ನಿರ್ವಹಿಸುವ ಅನುಭ ನೇರವಾಗಿ ನಾಗರಿಕರಿಗೆ ಸಿಗಲಿದೆ. ಅಲ್ಲದೇ ನಾಗರಿಕರು ಮತ್ತು ಕಾನೂನು ಜಾರಿ ಅಧಿಕಾರಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಗುರಿ ಈ ಅಭಿಯಾನ ಹೊಂದಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ಇನ್ನು ಈ ಕಾರ್ಯಕ್ರಮದಿಂದ ಜನರಿಗೆ, ಸಂಚಾರ ಪೊಲೀಸರು ಎದುರಿಸುವ ಸವಾಲುಗಳೇನು ಎಂಬ ಅರಿವು ಮತ್ತು ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ನಾಗರಿಕರಿಗೆ ಸಲಹೆ ಪಡೆಯುವುದೇ ಮುಖ್ಯ ಉದ್ದೇಶವಾಗಿದೆ.
ಷರತ್ತು ಅನ್ವಯ!
ಇನ್ನು ಈ ಅಭಿಯಾನದಲ್ಲಿ ಭಾಗವಹಿಸುವವರು 18 ವರ್ಷ ಮೇಲ್ಪಟ್ಟವರಾಗಿರಬೇಕು. ಅಲ್ಲದೇ ಬೆಂಗಳೂರು ಸಂಚಾರ ಪೊಲೀಸರ ಅಸ್ಟ್ರಾಮ್ ಮೊಬೈಲ್ ಅಪ್ಲಿಕೇಶನ್ನಲ್ಲಿ (Astram App) ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ನೋಂದಣಿಯಾದ ಬಳಿಕ ಸ್ವಯಂ ಸೇವಕರು ತಮ್ಮ ಆಯ್ಕೆಯ ಜಂಕ್ಷನ್ ಅನ್ನು ಆಯ್ಕೆ ಮಾಡಬಹುದು. ಆದ್ರೆ ಅದನ್ನು ಆಯ್ಕೆ ಮಾಡುವ ಮುನ್ನ ಕಡ್ಡಾಯವಾಗಿ ಟ್ರಾಫಿಕ್ ಬಗ್ಗೆ ಒಂದು ಗಂಟೆ ತರಬೇತಿ ಅವಧಿಗೆ ಒಳಗಾಗಬೇಕಾಗುತ್ತದೆ. ಆ ನಂತರ ಆಯ್ಕೆಯಾದವರು ಪ್ರತಿ ದಿನ 2 ಗಂಟೆಗಳ ಅಥವಾ 4 ಗಂಟೆಗಳ ಅವಧಿಯವರೆಗೆ ಟ್ರಾಫಿಕ್ ನಿರ್ವಹಣೆ ಮಾಡುವಲ್ಲಿ ಸಹಕಾರ ನೀಡಬಹುದು.
ಈಗಾಗಲೇ ಪೊಲೀಸ್ ಅಧಿಕಾರಿಗಳು ಈ ಅಭಿಯಾನದಡಿಯಲ್ಲಿ ವಿವರವಾದ ನೀಲನಕ್ಷೆಯನ್ನು ಸಿದ್ಧಪಡಿಸಿದ್ದಾರೆ ಎನ್ನಲಾಗಿದೆ. ಎಲ್ಲಾ ಮಾಹಿತಿಗಳು ಲಭ್ಯವಾದ ಬಳಿಕ ಅಧಿಕೃತವಾಗಿ ಈ ಅಭಿಯಾನ ಜಾರಿಗೆ ತರಲಾಗುತ್ತದೆ ಎಂದು ವರದಿಯಾಗಿದೆ.
More From GoodReturns

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ



Click it and Unblock the Notifications