ನವದೆಹಲಿ, ಜೂನ್ 18: ಕೊರೊನಾವೈರಸ್ ಪರಿಣಾಮವಾಗಿ ಅಭಿವೃದ್ಧಿ ಹೊಂದುತ್ತಿರುವ ಏಷ್ಯಾದ ದೇಶಗಳು 2020 ರಲ್ಲಿ ಆರ್ಥಿಕವಾಗಿ ಬೆಳೆಯುವುದಿಲ್ಲ ಎಂದು ಏಷಿಯನ್ ಡೆವೆಲೆಪ್ಮೆಂಟ್ ಬ್ಯಾಂಕ್ (ಎಡಿಬಿ) ಹೇಳಿದೆ.
ಎಡಿಬಿ ತನ್ನ ಏಷ್ಯನ್ ಡೆವಲಪ್ಮೆಂಟ್ ಔಟ್ಲುಕ್ ವರದಿಯಲ್ಲಿ ಈ ಮುನ್ನೋಟ ಕೊಟ್ಟಿದೆ. ಎಡಿಬಿಯ ಸದಸ್ಯರಾಗಿರುವ ನಲವತ್ತು ರಾಷ್ಟ್ರಗಳಲ್ಲಿ ಹಾಂಗ್ ಕಾಂಗ್, ಉತ್ತರ ಕೊರಿಯಾ ಹಾಗೂ ಸಿಂಗಪುರ್ ಹೊರತುಪಡಿಸಿ ಯಾವುದೇ ದೇಶಗಳು ಕೊರೊನಾವೈರಸ್ ಹೊಡೆತದಿಂದ ಚೇತರಿಸಿಕೊಳ್ಳುವ ಹಾದಿಯಲ್ಲಿ ಇಲ್ಲ ಎಂದು ಎಡಿಬಿ ಹೇಳಿದೆ.
ದಕ್ಷಿಣ ಏಷ್ಯಾದ ಆರ್ಥಿಕತೆ ಶೇ 3 ರಷ್ಟು ಕುಗ್ಗುತ್ತದೆ
ಏಷ್ಯಾದ ಅಭಿವೃದ್ದಿಶೀಲ ದೇಶಗಳಿಗೆ ಕೊರೊನಾವೈರಸ್ ಪರಿಣಾಮವಾಗಿ ಬಹುದೊಡ್ಡ ಸವಾಲು ಎದುರಾಗಿದೆ. ದಕ್ಷಿಣ ಏಷ್ಯಾದ ಆರ್ಥಿಕತೆಯು 2020 ರಲ್ಲಿ ಶೇಕಡಾ 3 ರಷ್ಟು ಕುಗ್ಗುವ ಮುನ್ಸೂಚನೆ ಇದೆ. ಕೋವಿಡ್ ದುಷ್ಪರಿಣಾಮದಿಂದಾಗಿ ಭಾರತದ ಆರ್ಥಿಕತೆಯು ಈ ಹಣಕಾಸು ವರ್ಷದಲ್ಲಿ ಶೇ 4 ರಷ್ಟು ಸಂಕುಚಿತಗೊಳ್ಳುವ ಮುನ್ಸೂಚನೆ ಇದೆ ಎಂದು ಹೇಳಿದೆ.
ಹೊಡೆತವನ್ನು ಅನುಭವಿಸುತ್ತಲೇ ಇರುತ್ತವೆ
ಏಷ್ಯಾ ಮತ್ತು ಪೆಸಿಫಿಕ್ ಭಾಗದ ಆರ್ಥಿಕತೆಗಳು ಈ ವರ್ಷ ಕೋವಿಡ್ 19 ಮಹಾಮಾರಿಯ ಹೊಡೆತವನ್ನು ಅನುಭವಿಸುತ್ತಲೇ ಇರುತ್ತವೆ. ಲಾಕ್ಡೌನ್ಗಳು ನಿಧಾನವಾಗಿ ಸಡಿಲಗೊಳ್ಳುತ್ತವೆಯಾದರೂ ಆಯ್ದ ಆರ್ಥಿಕ ಚಟುವಟಿಕೆಗಳು ಹೊಸ ಸನ್ನಿವೇಶದಲ್ಲಿ ಪುನರಾರಂಭಗೊಳ್ಳುತ್ತವೆ ಎಂದು ಎಡಿಬಿ ಮುಖ್ಯ ಅರ್ಥಶಾಸ್ತ್ರಜ್ಞ ಯಸುಯುಕಿ ಸಾವಡಾ ಹೇಳಿದ್ದಾರೆ.
ಋಣಾತ್ಮಕ ಪರಿಣಾಮವನ್ನು ಕಡಿಮೆ ಮಾಡಬೇಕು
ಕೋವಿಡ್ -19 ರ ಋಣಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು ಸರ್ಕಾರಗಳು ವ್ಯಾಪಕ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವುದೇ ರೀತಿಯ ಏಕಾಏಕಿ ಮುಗ್ಗಟ್ಟು ಸಂಭವಿಸದಂತೆ ನೋಡಿಕೊಳ್ಳಬೇಕು. ಎಡಿಬಿ ಮುನ್ಸೂಚನೆಯ ಪ್ರಕಾರ ಹಲವು ರಾಷ್ಟ್ರಗಳು ಅಪಾಯದಲ್ಲಿ ಸಿಲುಕುವುದು ಖಚಿತ ಎಂದು ಎಡಿಬಿ ಮುಖ್ಯ ಅರ್ಥಶಾಸ್ತ್ರಜ್ಞ ಯಸುಯುಕಿ ಸಾವಡಾ ಹೇಳಿದ್ದಾರೆ.
ಅಮೆರಿಕ ಚೀನಾ ನಡುವಿನ ವ್ಯಾಪಾರ ಉದ್ವಿಗ್ನತೆ ಹೆಚ್ಚಾಗುತ್ತೆ
ಮುಂಬರುವ ಅವಧಿಯಲ್ಲಿ ಅನೇಕ ಆರ್ಥಿಕ ಅಪಾಯಗಳಲ್ಲದೇ ಸಾಮಾಜಿಕ ಸಮಸ್ಯೆಗಳು ಏಕಾಏಕಿ ಕಾಣಿಸಬಹುದು ದೊಡ್ಡ ಹಾಗೂ ದೀರ್ಘಾವಧಿಯ ಆರ್ಥಿಕ ಬಿಕ್ಕಟ್ಟುಗಳನ್ನು ತಳ್ಳಿಹಾಕಲಾಗುವುದಿಲ್ಲ. ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಉದ್ವಿಗ್ನತೆ ಹೆಚ್ಚಾಗುವ ಅಪಾಯವೂ ಇದೆ ಎಂದು ಎಡಿಬಿ ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications