ಇನ್ನೇನು ಕೆಲವೇ ತಿಂಗಳಲ್ಲಿ ರೋಚಕ ಐಪಿಎಲ್ (IPL) ಹಣಾಹಣಿ ಆರಂಭವಾಗಲಿದೆ. ಈಗಾಗಲೇ ತಂಡಗಳು ಆಟಗಾರರನ್ನು ಆಯ್ಕೆ ಮಾಡಿದ್ದು, ಬಲಿಷ್ಠ ತಂಡಗಳ ರಚನೆಯೂ ಆಗಿದೆ. ನಿನ್ನೆಯಷ್ಟೇ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆಯೂ ನಡೆದಿದೆ. ಈ ಮಧ್ಯೆ ಐಪಿಎಲ್ 2026ನೇ ಟೂರ್ನಿಯ ಉದ್ಘಾಟನಾ ಪಂದ್ಯ ಎಲ್ಲಿ ನಡೆಯುತ್ತೆ ಎಂಬ ಗೊಂದಲ ಎಲ್ಲರಲ್ಲೂ ಮೂಡಿದೆ. ಇದೀಗ ಕೆಎಸ್ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಈ ಬಗ್ಗೆ ಮಾತನಾಡಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ನಿಯಮದಂತೆ ನಡೆಯುತ್ತಾ ಐಪಿಎಲ್?
ಐಪಿಎಲ್ ನಿಯಮದಂತೆ ಹಿಂದಿನ ಟೂರ್ನಿಯಲ್ಲಿ ಯಾರು ಚಾಂಪಿಯನ್ ಆಗಿರುತ್ತಾರೋ, ಅವರ ತವರು ನೆಲದಲ್ಲೇ ಹೊಸ ಟೂರ್ನಿಯ ಉದ್ಘಾಟನಾ ಪಂದ್ಯ ನಡೆಸಲಾಗುತ್ತದೆ. ಆದರೆ ಆರ್ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತ, ಈ ಬಾರಿಯ ಐಪಿಎಲ್ ಪಂದ್ಯಾಟಗಳಿಗೆ ಪೆಟ್ಟು ಬೀಳುವಂತಾಗಿದೆ. ಅದೇ ಗೊಂದಲಗಳಿಂದಲೇ ಇದೀಗ ಉದ್ಘಾಟನಾ ಪಂದ್ಯ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆ ಹುಟ್ಟಿದೆ.
ಕೆಎಸ್ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹೇಳಿದ್ದೇನು?
ಇನ್ನು ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಗಳ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ವೆಂಕಟೇಶ್ ಪ್ರಸಾದ್, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲೇ ನಡೆಸುವಂತೆ ಬಿಸಿಸಿಐಗೆ ಮನವಿ ಮಾಡಿದ್ದೇವೆ. ಈ ಕುರಿತು ಬಿಸಿಸಿಐ ಜೊತೆ ಚರ್ಚೆ ಕೂಡಾ ನಡೆಸಲಾಗಿದೆ. ಬಿಸಿಸಿಐ ಕೂಡಾ ಈ ಬಗ್ಗೆ ಉತ್ತಮವಾಗಿ ಸ್ಪಂದಿಸಿದೆ ಎಂದು ಹೇಳಿದ್ದಾರೆ.
ಈಗಾಗಲೇ ಐಪಿಎಲ್ ಪಂದ್ಯ ನಡೆಸಲಿ ಸಿಎಂ, ಡಿಸಿಎಂ ಅಸ್ತು ಎಂದಿದ್ದಾರೆ. ಅಲ್ಲದೇ ಗೃಹ ಸಚಿವರೊಂದಿಗೂ ಮಾತನಾಡಿದ್ದೇವೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ದಿನಾಂಕ ಮತ್ತು ಸ್ಥಳ ನಿಗದಿಯಾಗಲಿದೆ. ಈ ಮೂಲಕ ಬೆಂಗಳೂರಿನಲ್ಲಿ ಐಪಿಎಲ್ ಮಾತ್ರವಲ್ಲ, ಅಂತರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯಲ್ಲಿ ಪಂದ್ಯಗಳು ನಡೆಯಲಿದೆ ಎಂದು ಹೇಳಿದ್ದಾರೆ.
18 ವರ್ಷಗಳ ಬಳಿಕೆ ಕಪ್ ಗೆದ್ದ ಆರ್ಸಿಬಿ!
ಹಲವು ವರ್ಷಗಳ ನಿರೀಕ್ಷೆ, ಕನಸನ್ನು ಆರ್ಸಿಬಿ ಕಳೆದ ವರ್ಷ ನನಸು ಮಾಡಿತ್ತು. ಆದ್ರೆ ಚೊಚ್ಚಲ ಕಪ್ ಗೆದ್ದ ಖುಷಿ, ಕ್ಷಣ ಮಾತ್ರದಲ್ಲಿ ಬೆಂಗಳೂರು ಕ್ರೀಡಾಂಗಣದಲ್ಲಿ ದೊಡ್ಡ ದುರಂತವಾಗಿ ಬದಲಾಯ್ತು. ಆದರೆ ಈ ಬಾರಿ ಯಾರೆಲ್ಲಾ ಆರ್ಸಿಬಿಯಲ್ಲಿ ಆಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
IPL 2026ರ ಮಿನಿ ಹರಾಜಿನಲ್ಲಿ ಆರ್ಸಿಬಿ ಖರೀದಿಸಿದ ಆಟಗಾರರು!
- ವೆಂಕಟೇಶ್ ಅಯ್ಯರ್ - 7 ಕೋಟಿ
- ಮಂಗೇಶ್ ಯಾದವ್ - 5.20 ಕೋಟಿ
- ಜೇಕಬ್ ಡಫಿ - 2 ಕೋಟಿ
- ಜೋರ್ಡನ್ ಕಾಕ್ಸ್ - 75 ಲಕ್ಷ
- ಸಾತ್ವಿಕ್ ದೇಸ್ವಾಲ್ - 30 ಲಕ್ಷ
- ವಿಹಾನ್ ಮಲ್ಹೋತ್ರಾ - 30 ಲಕ್ಷ
- ಕನಿಷ್ಕ್ ಚೌಹಾನ್ - 30
- ವಿಕ್ಕಿ ಓಸ್ತ್ವಾಲ್ - 30 ಲಕ್ಷ
ಇದಿಷ್ಟು ಆರ್ಸಿಬಿ ಹರಾಜಿನಲ್ಲಿ ತೆಗೆದುಕೊಂಡ ಆಟಗಾರರಾಗಿದ್ದು, ಪಂದ್ಯಾಟ ಯಾವ ರೀತಿ ಇರಲಿದೆ ಎಂಬುದನ್ನು ಕಾದು ನೋಡಬೇಕಿದೆ.
More From GoodReturns

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Rapido Ownly: ರ್ಯಾಪಿಡೋದಿಂದ ಹೊಸ ಫುಡ್ ಡೆಲಿವರಿ ಆಪ್ ಲಾಂಚ್! ಏನಿದರ ವಿಶೇಷತೆ?



Click it and Unblock the Notifications