ಇದೇ ಮೊದಲ ಬಾರಿಗೆ ರೈಲಿನಲ್ಲಿ ದೇವರಿಗೆ ಟಿಕೆಟ್ ಕಾಯ್ದಿರಿಸಲಾಗಿದೆ. ಎರಡು ರಾಜ್ಯಗಳ ಮೂರು ಜ್ಯೋತಿರ್ಲಿಂಗಗಳನ್ನು ತಲುಪುವ ಕಾಶಿ ಮಹಾಕಾಲ್ ಎಕ್ಸ್ ಪ್ರೆಸ್ ಗೆ ಭಾನುವಾರ ವಾರಾಣಸಿಯಿಂದ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿಸಿದ್ದಾರೆ. ಅಂದ ಹಾಗೆ ಈ ರೈಲಿನ ಮುಖ್ಯ ಆಕರ್ಷಣೆಯಾದ ಆ ಶಿವನಿಗೆ ಶಾಶ್ವತವಾದ ಪ್ರಾಮುಖ್ಯವನ್ನು ಒದಗಿಸಲು ರೈಲ್ವೆ ಅಧಿಕಾರಿಗಳು ಒಂದು ಆಲೋಚನೆ ಮಾಡಿದರು.
ಆ ಪ್ರಕಾರವಾಗಿ, ಸೀಟ್ ನಂಬರ್ 64, ಬೋಗಿ B5 ಅನ್ನು ಆ ದೇವರಿಗಾಗಿಯೇ ಖಾಲಿ ಇರಿಸಲಾಯಿತು ಎಂದು ಉತ್ತರ ರೈಲ್ವೆಯ ವಕ್ತಾರ ದೀಪಕ್ ಕುಮಾರ್ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ರೈಲ್ವೆ ಇಲಾಖೆಯಿಂದ ಐಆರ್ ಸಿಟಿಸಿ ಮೂಲಕವಾಗಿ ಆರಂಭಿಸಲಾದ ಮೂರನೇ ಕಾರ್ಪೊರೇಟ್ ರೈಲು ಇದು. ಉತ್ತರಪ್ರದೇಶದ ವಾರಾಣಸಿಯಿಂದ ಮಧ್ಯಪ್ರದೇಶದ ಇಂದೋರ್ ಮಧ್ಯೆ ಈ ರೈಲು ಚಲಿಸುತ್ತದೆ. ಇದಕ್ಕೆ ಕಾಶಿ ಮಹಾಕಾಲ್ ಎಕ್ಸ್ ಪ್ರೆಸ್ ಎಂದು ಹೆಸರನ್ನು ಇಡಲಾಗಿದೆ.

ಇದೇ ಮೊದಲ ಬಾರಿಗೆ ಶಿವನಿಗಾಗಿ ಸೀಟು ಕಾಯ್ದಿರಿಸಿ, ಅದನ್ನು ಖಾಲಿ ಬಿಡಲಾಗಿತ್ತು. ಆ ಸೀಟ್ ನಲ್ಲಿ ದೇವಾಲಯದ ಮಾದರಿಯನ್ನೂ ರೂಪಿಸಲಾಗಿತ್ತು. ಏಕೆಂದರೆ ಆ ಸೀಟು ಮಧ್ಯಪ್ರದೇಶದ ಉಜ್ಜೈನ್ ನ ಮಹಾಕಾಲನಿಗೆ ಮೀಸಲಾಗಿದೆ ಎಂದು ಉಳಿದ ಪ್ರಯಾಣಿಕರಿಗೆ ಗೊತ್ತಾಗಲಿ ಎಂದು ಹೀಗೆ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮುಂದೆ ಈ ರೈಲಿನಲ್ಲಿ ಹೀಗೆ ಶಾಶ್ವತವಾಗಿ ಮಾಡಲಾಗುತ್ತದೆಯಾ ಎಂಬ ನಿರ್ಧಾರ ತೆಗೆದುಕೊಂಡಿಲ್ಲ. ಈ ರೈಲಿನಲ್ಲಿ ಭಕ್ತಿ ಸಂಗೀತ, ಪ್ರತಿ ಬೋಗಿಯಲ್ಲಿ ಇಬ್ಬರು ಖಾಸಗಿ ಗಾರ್ಡ್ ಗಳು, ಸಸ್ಯಾಹಾರವನ್ನು ಮಾತ್ರ ಪೂರೈಕೆ ಮಾಡಲಾಗುತ್ತದೆ. ಇದು ಪೂರ್ತಿಯಾಗಿ 3AC ಸೌಕರ್ಯವನ್ನು ಹೊಂದಿದ್ದು, ವಾರದಲ್ಲಿ ಮೂರು ದಿನ ವಾರಾಣಸಿ ಮತ್ತು ಇಂದೋರ್ ಮಧ್ಯೆ ಸಂಚರಿಸುತ್ತದೆ.

ಈ ರೈಲು ವಾರಾಣಸಿ ಮತ್ತು ಇಂದೋರ್ ಮಧ್ಯೆ ಲಖನೌ ಮೂಲಕ ಸಂಚರಿಸುತ್ತದೆ. 1131 ಕಿ.ಮೀ. ಕವರ್ ಮಾಡುತ್ತದೆ. ವಾರಾಣಸಿ ಮತ್ತು ಇಂದೋರ್ ಮಧ್ಯೆ ಪ್ರಯಾಗ್ ರಾಜ್ ಮೂಲಕ 1102 ಕಿ.ಮೀ. ಸಂಚರಿಸಲು 19 ಗಂಟೆ ಸಮಯ ತೆಗೆದುಕ್ಒಳ್ಳುತ್ತದೆ.
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications