ಲಾಕ್ ಡೌನ್ ತೆರವುಗೊಂಡ ನಂತರ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ತಿರುಮಲ ವೆಂಕಟೇಶ್ವರ ದೇವಾಲಯದ ಹುಂಡಿ ಆದಾಯ 1.02 ಕೋಟಿ ಮುಟ್ಟಿದೆ. ಶನಿವಾರದಂದು (ಸೆಪ್ಟೆಂಬರ್ 5, 2020) ಇಷ್ಟು ಮೊತ್ತದ ಹಣ ಸಂಗ್ರಹ ಆಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿಳಿಸಿದೆ.
ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ತಿಂಗಳುಗಟ್ಟಲೆ ಭಕ್ತರಿಗೆ ದೇವಾಲಯ ಪ್ರವೇಶಕ್ಕೆ ನಿಷೇಧವಿತ್ತು. ಆ ನಂತರ ಜೂನ್ 11ನೇ ತಾರೀಕಿನಂದು ದೇವಾಲಯವನ್ನು ಪುನರಾರಂಭ ಮಾಡಲಾಗಿತ್ತು. ಹೀಗೆ ದೇವಾಲಯ ಮತ್ತೆ ಆರಂಭವಾದ ಮೇಲೆ ಮೊದಲ ಬಾರಿಗೆ ಒಂದೇ ದಿನದಲ್ಲಿ ಹುಂಡಿಯ ಆದಾಯ 1 ಕೋಟಿ ರುಪಾಯಿ ಮೊತ್ತ ದಾಟಿದೆ.
13,486 ಭಕ್ತರು ದೇಗುಲಕ್ಕೆ ಭೇಟಿ
13,486 ಭಕ್ತರು ಶನಿವಾರದಂದು ದೇವಾಲಯಕ್ಕೆ ದರ್ಶನಕ್ಕೆ ತೆರಳಿದ್ದರು. ಅವರು ನೀಡಿದ ದೇಣಿಗೆಯನ್ನು ಭಾನುವಾರ ಎಣಿಕೆ ಮಾಡಲಾಯಿತು ಎಂದು ತಿಳಿಸಲಾಗಿದೆ. ಇನ್ನು ಆಗಸ್ಟ್ 28ನೇ ತಾರೀಕಿನಂದು ಟಿಟಿಡಿ ನಿರ್ಧಾರವೊಂದನ್ನು ಕೈಗೊಂಡಿದ್ದು, ವೆಂಕಟೇಶ್ವರ ದೇವಾಲಯವನ್ನೇ ಹೋಲುವ ದೇಗುಲವೊಂದನ್ನು ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ ನಿರ್ಮಿಸಲು ತೀರ್ಮಾನಿಸಿದೆ.
ಎರಡು ಬ್ರಹ್ಮೋತ್ಸವ ನಡೆಯಲಿದೆ
ಕೊರೊನಾ ನಿಯಂತ್ರಣಕ್ಕೆ ಬಂದು, ಎಲ್ಲವೂ ಸಹಜ ಸ್ಥಿತಿಗೆ ಮರಳಿದ ಮೇಲೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಗಲಿದೆ. ಇಂಥದ್ದೇ ದೇಗುಲವನ್ನು ಜಮ್ಮು ಮತ್ತು ಕಾಶ್ಮೀರ, ಮುಂಬೈ ಹಾಗೂ ಚೆನ್ನೈನಲ್ಲಿ ಕೂಡ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ.ಈ ವರ್ಷ ಅಧಿಕ ಮಾದ ಬಂದಿರುವುದರಿಂದ ಎರಡು ಬ್ರಹ್ಮೋತ್ಸವ ನಡೆಯಲಿದೆ. ಒಂದು ಸೆಪ್ಟೆಂಬರ್ ನಲ್ಲಿ ಹಾಗೂ ಮತ್ತೊಂದು ಅಕ್ಟೋಬರ್ ನಲ್ಲಿ ನಡೆಯಲಿದೆ.
ಭಕ್ತರಿಗೆ ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಇಲ್ಲ
ಲಾಕ್ ಡೌನ್ ಇರುವುದರಿಂದ ಮೊದಲ ಬ್ರಹ್ಮೋತ್ಸವದಲ್ಲಿ ಭಕ್ತರು ಪಾಲ್ಗೊಳ್ಳುವುದಕ್ಕೆ ಅವಕಾಶ ನೀಡುವುದಿಲ್ಲ. ಆದರೆ ಎರಡನೆಯದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಟಿಟಿಡಿ ತಿಳಿಸಿದೆ. ಎರಡೂ ಬ್ರಹ್ಮೋತ್ಸವವು ತಲಾ ಒಂಬತ್ತು ದಿನಗಳ ಕಾಲ ನಡೆಯಲಿದೆ ಎಂದು ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ಅಧ್ಯಕ್ಷತೆಯ ಆಡಳಿತ ಮಂಡಲಿ ಮಾಹಿತಿ ನೀಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications