ಕೊರೊನಾ ವೈರಸ್ ಕಾರಣಕ್ಕೆ ಮಾರ್ಚ್ 20ನೇ ತಾರೀಕಿನಿಂದ ತಿರುಪತಿ ದೇವಾಲಯವು ಭಕ್ತರಿಗೆ ದರ್ಶನಕ್ಕೆ ಲಭ್ಯವಿಲ್ಲ. ಈ ಮಧ್ಯೆ ವೆಂಕಟೇಶ್ವರ ಸ್ವಾಮಿ ದೇವಾಲಯದ ಅಧಿಕಾರಿಗಳು ತಿರುಪತಿಯಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಾಡುವನ್ನು 50 ಪರ್ಸೆಂಟ್ ರಿಯಾಯಿತಿ ದರಕ್ಕೆ ಮಾರಾಟ ಮಾಡಲು ನಿರ್ಧರಿಸಿದ್ದಾರೆ.
ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್, ಇದರ ಜತೆಗೆ ಆಂಧ್ರಪ್ರದೇಶದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮಾರಾಟ ಮಾಡಲು ನಿರ್ಧರಿಸಲಾಗಿದೆ. 175 ಗ್ರಾಮ್ ತೂಕದ ಲಾಡು ಮಾರಾಟದ ಬೆಲೆ 50 ರುಪಾಯಿ. ಅದನ್ನು ಈಗ 25 ರುಪಾಯಿಗೆ ನೀಡಲಾಗುತ್ತದೆ. ದೇವಸ್ಥಾನದ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ನಿರ್ಧಾರವನ್ನು ಮಾಡಿದೆ.
ಲಾಡು ಪ್ರಸಾದ ರಿಯಾಯಿತಿ ದರಕ್ಕೆ
ವಿಶ್ವದ ಶ್ರೀಮಂತ ಹಿಂದೂ ದೇವಾಲಯ ಎನಿಸಿಕೊಂಡಿರುವ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮತ್ತೆ ಭಕ್ತರಿಗೆ ಯಾವಾಗಿಂದ ದರ್ಶನ ಆರಂಭವಾಗುತ್ತದೆ ಎಂಬ ಬಗ್ಗೆ ಅಂದಾಜಿಲ್ಲ. ಈಗಾಗಲೇ ಎರಡು ತಿಂಗಳಿಂದ ದರ್ಶನ ವ್ಯವಸ್ಥೆ ಇಲ್ಲದಂತಾಗಿದೆ. ಆ ಹಿನ್ನೆಲೆಯಲ್ಲಿ ಲಾಡು ಪ್ರಸಾದವನ್ನು ರಿಯಾಯಿತಿ ದರಕ್ಕೆ ವಿತರಿಸಲು ತೀರ್ಮಾನಿಸಲಾಗಿದೆ.
ಹೈದರಾಬಾದ್, ಚೆನ್ನೈ ಮತ್ತು ಬೆಂಗಳೂರಿನಲ್ಲಿ ಮಾರಾಟ
ಟಿಟಿಟಿ ಟ್ರಸ್ಟ್ ಮಂಡಳಿ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಮಾತನಾಡಿ, ಟಿಟಿಡಿ ಕಲ್ಯಾಣ ಮಂಟಪಗಳಲ್ಲಿ ಹಾಗೂ ಆಂಧ್ರಪ್ರದೇಶದ ಎಲ್ಲ ಹದಿಮೂರು ಜಿಲ್ಲೆಗಳಲ್ಲಿ, ಹೈದರಾಬಾದ್, ಚೆನ್ನೈ ಮತ್ತು ಬೆಂಗಳೂರಿನಲ್ಲಿ ಇರುವ ಮಾಹಿತಿ ಕೇಂದ್ರಗಳಲ್ಲಿ ಪ್ರಸಾದ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ. ದೇವಾಲಯ ಮತ್ತೆ ಯಾವಾಗ ಆರಂಭವಾಗುತ್ತದೆ ಎಂದು ಫೋನ್, ಇಮೇಲ್ ನಲ್ಲಿ ಜನರು ವಿಚಾರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಲಾಕ್ ಡೌನ್ ತೆರವು ನಿರ್ಧಾರದ ಮೇಲೆ ಎಲ್ಲವೂ ಅವಲಂಬಿಸಿದೆ ಎಂದಿದ್ದಾರೆ.
ಇ ಹುಂಡಿ ಮೂಲಕ 1.97 ಕೋಟಿ ಸಂಗ್ರಹ
ಲಾಕ್ ಡೌನ್ ನಿರ್ಬಂಧ ಇರುವ ಮಧ್ಯೆಯೂ ಇ- ಹುಂಡಿ ಮೂಲಕ ಭಕ್ತರು ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. 2020ರ ಏಪ್ರಿಲ್ ನಲ್ಲಿ ಇ ಹುಂಡಿಯಿಂದ ಸಂಗ್ರಹವಾದ ಮೊತ್ತ 1.97 ಕೋಟಿ ರುಪಾಯಿ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ 18 ಲಕ್ಷ ರುಪಾಯಿ ಹೆಚ್ಚು ಸಂಗ್ರಹ ಆಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಲಾಡು ಬೇಕಿದ್ದವರಿಗೆ ಸಂಪರ್ಕ ಸಂಖ್ಯೆ
ಯಾರಿಗಾದರೂ ಹೆಚ್ಚಿನ ಸಂಖ್ಯೆಯಲ್ಲಿ ಲಾಡು ಪ್ರಸಾದ ಬೇಕಿದ್ದಲ್ಲಿ ಮೊಬೈಲ್ ಫೋನ್ ಸಂಖ್ಯೆ 9849575952, 9701092777 ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ. ಅಂದಹಾಗೆ ಲಾಡು ಮಾರಾಟ ಆರಂಭ ಮಾಡುವ ದಿನಾಂಕವನ್ನು ಎರಡ್ಮೂರು ದಿನದಲ್ಲಿ ನಿರ್ಧರಿಸಲಾಗುವುದು ಎಂದು ತಿಳಿಸಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications