ಈಗಾಗಲೇ ಹಲವಾರು ದೊಡ್ಡ ಸಂಸ್ಥೆಗಳು ಉದ್ಯೋಗ ಕಡಿತವನ್ನು ಮಾಡುತ್ತ ಸಾಗುತ್ತಿದೆ. ಒಂದಲ್ಲ ಎರಡಲ್ಲ ಹಲವಾರು ಹಂತಗಳಲ್ಲಿ ಲೇ ಆಫ್ ಪ್ರಕ್ರಿಯೆಯನ್ನು ನಡೆಸುತ್ತಾ ಬಂದಿದೆ. ವೆಚ್ಚ ಕಡಿತ ಮಾಡುವುದು ಉದ್ದೇಶ ಎಂದು ಬಹುತೇಕ ಸಂಸ್ಥೆಗಳು ಈ ಉದ್ಯೋಗ ಕಡಿತಕ್ಕೆ ನೀಡಿದ ಕಾರಣವಾಗಿದೆ. ಆದರೆ ಇಲ್ಲೊಂದು ಸಂಸ್ಥೆ ನೇಮಕಾತಿಯನ್ನು ಮಾಡಲು ಮುಂದಾಗಿದೆ.
ಹೌದು, ಪ್ರಸ್ತುತ ಉದ್ಯೋಗ ಹುಡುಕಾಟ ಸಾಮಾನ್ಯವಾಗಿದೆ. ಶಿಕ್ಷಣ ಮುಗಿಸಿ ಉದ್ಯೋಗದ ಅಲೆದಾಟದಲ್ಲಿರುವ ಯುವಜನರು ಒಂದೆಡೆಯಾದರೆ ಇನ್ನೊಂದೆಡೆ ನಮ್ಮ ಪದವಿಗೆ ತಕ್ಕ ಉದ್ಯೋಗದ ಹುಡುಕಾಟದಲ್ಲಿರುವವರು ಕೂಡಾ ಇದ್ದಾರೆ. ಈ ಉದ್ಯೋಗವಕಾಶಿಗಳಿಗೆ ಇಲ್ಲಿದೆ ನೋಡಿ ಉತ್ತಮ ಅವಕಾಶ. ಮುಂದೆ ಓದಿ...

ಟೈಟಾನ್ನಲ್ಲಿ ಉದ್ಯೋಗವಕಾಶ
ಎಂಜಿನಿಯರಿಂಗ್, ವಿನ್ಯಾಸ, ಐಷಾರಾಮಿ, ಡಿಜಿಟಲ್, ಡೇಟಾ ಅನಾಲಿಟಿಕ್ಸ್, ಮಾರ್ಕೆಟಿಂಗ್ ಮತ್ತು ಮಾರಾಟ ಸೇರಿದಂತೆ ವಿವಿಧೆಡೆ ಮುಂದಿನ 5 ವರ್ಷಗಳಲ್ಲಿ 3,000 ಉದ್ಯೋಗಿಗಳನ್ನು ಸೇರಿಸಲು ಯೋಜನೆ ಮಾಡಲಾಗುತ್ತಿದೆ ಎಂದು ಟೈಟಾನ್ ಕಂಪನಿ ಮಂಗಳವಾರ ತಿಳಿಸಿದೆ.
ನಮ್ಮ ಸಂಸ್ಥೆಯು ಡೇಟಾ ಅನಾಲಿಟಿಕ್ಸ್, ಸೈಬರ್ ಸೆಕ್ಯೂರಿಟಿ, ಉತ್ಪನ್ನ ನಿರ್ವಹಣೆ, ಡಿಜಿಟಲ್ ಮಾರ್ಕೆಟಿಂಗ್ ಮತ್ತು ಇತರ ಹೊಸ-ಯುಗದ ಕೌಶಲ್ಯಗಳಂತಹ ವಿಶೇಷ ಕೌಶಲ್ಯಗಳನ್ನು ಹೊಂದಿರುವ ವೃತ್ತಿಪರರನ್ನು ಹುಡುಕುತ್ತಿದೆ ಎಂದು ಕಂಪನಿಯ ಹೇಳಿಕೆ ತಿಳಿಸಿದೆ.
ಐದು ವರ್ಷಗಳಲ್ಲಿ ಮೂರು ಸಾವಿರ ಮಂದಿ ನೇಮಕ
"ಮುಂದಿನ 5 ವರ್ಷಗಳಲ್ಲಿ 1,00,000 ಕೋಟಿ ರೂಪಾಯಿಗಳ ವ್ಯವಹಾರವಾಗುವತ್ತ ನಾವು ಪ್ರಯಾಣವನ್ನು ಪ್ರಾರಂಭಿಸುತ್ತಿದ್ದೇವೆ. ಮುಂದಿನ 5 ವರ್ಷಗಳಲ್ಲಿ 3,000 ಜನರನ್ನು ನೇಮಕ ಮಾಡಿಕೊಳ್ಳುವ ನಿರ್ಧಾರ ಮಾಡಿಕೊಂಡಿದ್ದೇವೆ. ಪ್ರತಿಭಾವಂತ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಾಗುತ್ತದೆ," ಎಂದು ಟೈಟಾನ್ ಸಂಸ್ಥೆಯು ಮಾಹಿತಿ ನೀಡಿದೆ.
"ನಮ್ಮ ಸ್ವಂತ ಜನರನ್ನು ಬೆಳೆಸುವುದರ ಜೊತೆಗೆ ಯುವ ಮತ್ತು ಅನುಭವಿಗಳನ್ನು ನಮ್ಮ ಸಂಸ್ಥೆಗೆ ಕರೆ ತರಲು ಈ ನೇಮಕಾತಿ ಸಹಾಯ ಮಾಡುತ್ತದೆ ಎಂದು ನಾವು ನಂಬುತ್ತೇವೆ. ಇದು ನಮ್ಮ ಬೆಳವಣಿಗೆ ಮತ್ತು ಆವಿಷ್ಕಾರವನ್ನು ವೇಗಗೊಳಿಸುತ್ತದೆ. ಉದ್ಯಮದಲ್ಲಿ ನಮ್ಮ ಸ್ಥಾನವನ್ನು ಬಲಪಡಿಸುತ್ತದೆ," ಎಂದು ಟೈಟಾನ್ ಕಂಪನಿಯ ಎಚ್ಆರ್- ಕಾರ್ಪೊರೇಟ್ ಮತ್ತು ರಿಟೇಲ್ ಮುಖ್ಯಸ್ಥರಾದ ಪ್ರಿಯಾ ಮತಿಲಕತ್ ಪಿಳ್ಳೈ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ, ಕಂಪನಿಯ ಶೇಕಡ 60 ರಷ್ಟು ಉದ್ಯೋಗಿಗಳು ಮಹಾನಗರಗಳಲ್ಲಿ ಮತ್ತು ಶೇಕಡ 40 ರಷ್ಟು ಎರಡನೇ ಮತ್ತು ಮೂರನೇ ದರ್ಜೆ ನಗರಗಳಲ್ಲಿ ನೆಲೆಸಿದ್ದಾರೆ. "ನಾನು ಮಾರುಕಟ್ಟೆಯಲ್ಲಿ ಬೆಳೆಯುವುದನ್ನು ಮುಂದುವರಿಸುತ್ತೇವೆ. ಪ್ರಾದೇಶಿಕ ಉದ್ಯೋಗವನ್ನು ಉತ್ತೇಜಿಸಲು ಸ್ಥಳೀಯ ಪ್ರತಿಭೆಗಳ ಮೇಲೆ ಕೇಂದ್ರೀಕರಿಸುತ್ತೇವೆ," ಎಂದು ಪ್ರಿಯಾ ಮತಿಲಕತ್ ಪಿಳ್ಳೈ ಹೇಳಿದರು.
ಟೈಟಾನ್ ಕಂಪನಿಯು ಟಾಟಾ ಗ್ರೂಪ್ ಮತ್ತು ತಮಿಳುನಾಡು ಕೈಗಾರಿಕಾ ಅಭಿವೃದ್ಧಿ ನಿಗಮ (ಟಿಡ್ಕೊ) ನಡುವಿನ ಜಂಟಿ ಉದ್ಯಮವಾಗಿದೆ. ನಾವೀನ್ಯತೆ ಮತ್ತು ತಂತ್ರಜ್ಞಾನದ ಮೇಲೆ ಗಮನಹರಿಸುವುದರೊಂದಿಗೆ ಟೈಟಾನ್ ಮುಂದಿನ 2-3 ವರ್ಷಗಳಲ್ಲಿ ಎಂಜಿನಿಯರಿಂಗ್ಗಳಿಗೆ ಶೇಕಡ 50 ಉದ್ಯೋಗಿವನ್ನು ಹೆಚ್ಚಿಸಲು ಯೋಜಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications