ನಿರಂತರವಾಗಿ ಅಕಾಲಿಕ ಮಳೆ ಸುರಿಯುತ್ತಲೇ ಇರುವ ಕಾರಣದಿಂದಾಗಿ ಟೊಮೆಟೊ ದರವು ಸದ್ಯಕ್ಕೆ ಇಳಿಕೆ ಕಾಣಲ್ಲ ಎಂದು ಕ್ರಿಸಿಲ್ (Crisil) ಸಂಶೋಧನೆ ಹೇಳಿದೆ. ತರಕಾರಿ ಬೆಲೆಯು ಪ್ರಸ್ತುತ ಅತಿಯಾದ ಅಕಾಲಿಕ ಮಳೆಯ ಕಾರಣದಿಂದಾಗಿ ಏರಿಕೆ ಆಗಿದೆ ಎಂದು ಅಭಿಪ್ರಾಯ ಪಟ್ಟಿರುವ ಈ ಸಂಶೋಧನೆಯು ಟೊಮೆಟೊಗಳ ಬೆಲೆ ಇನ್ನೂ ಎರಡು ತಿಂಗಳವರೆಗೆ ಇಳಿಕೆ ಕಾಣುವುದಿಲ್ಲ, ಹೆಚ್ಚಾಗಿಯೇ ಇರಲಿದೆ ಎಂದಿದೆ.
ಈ ಬಗ್ಗೆ ಸಂಶೋಧನೆ ನಡೆಸಿರುವ ಕ್ರಿಸಿಲ್ (Crisil) ಸಂಸ್ಥೆಯು ಟೊಮೆಟೊ ಬೆಳೆಯುವ ಪ್ರಮುಖ ಪ್ರದೇಶಗಳಲ್ಲಿ ಒಂದಾದ ಕರ್ನಾಟಕದಲ್ಲಿ ಸ್ಥಿತಿಯು ಗಂಭೀರವಾಗಿದೆ. ಮಹಾರಾಷ್ಟ್ರದ ನಾಸಿಕ್ನಿಂದ ಟೊಮೆಟೊವನ್ನು ತರಿಸಿಕೊಳ್ಳಬೇಕಾದ ಸ್ಥಿತಿ ಉಂಟಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ ಕರ್ನಾಟಕದಲ್ಲಿ ನವೆಂಬರ್ ತಿಂಗಳಿನಲ್ಲಿ ಟೊಮೆಟೊ ದರವು ಶೇಕಡ 142 ರಷ್ಟಿ ಏರಿಕೆ ಕಂಡಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಜನವರಿಯಲ್ಲಿ ಕೊಯ್ಲು ಮಾರುಕಟ್ಟೆಗೆ ತಲುಪಲು ಆರಂಭ ಆಗುವವರೆಗೂ ಅಂದರೆ ಇನ್ನೂ ಸುಮಾರು 45-50 ದಿನಗಳವರೆಗೆ ಟೊಮೆಟೊ ದರವು ಇನ್ನಷ್ಟು ಏರಿಕೆ ಕಾಣುವ ಸಾಧ್ಯತೆಗಳು ಇದೆ.
ಅಕ್ಟೋಬರ್ - ನವೆಂಬರ್ ತಿಂಗಳಿನಲ್ಲಿ ಪ್ರಮುಖ ಟೊಮೆಟೊ ಸರಬರಾಜು ಮಾಡುವ ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಬೆಳೆಗೆ ಹಾನಿ ಉಂಟಾಗಿದೆ. ಇದರಿಂದಾಗಿ ಈ ಟೊಮೆಟೊ ಬೆಲೆಯು ಏರಿಕೆ ಆಗಿದೆ ಎಂದು ಸಂಶೋಧನೆಯು ಉಲ್ಲೇಖ ಮಾಡಿದೆ.

ಹೆಚ್ಚಿನ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಬೆಳೆಗಳು ಹಾನಿ ಉಂಟಾಗಿದೆ. ರಾಜ್ಯದಲ್ಲಿ ವಾಡಿಕೆಗಿಂತಲೂ ಶೇಕಡ 105 ರಷ್ಟು ಮಳೆ ಆಗಿದೆ. ಆಂಧ್ರ ಪ್ರದೇಶದಲ್ಲಿ ಶೇಕಡ 40, ಮಹಾರಾಷ್ಟ್ರದಲ್ಲಿ ಶೇಕಡ 22 ಕ್ಕೂ ಅಧಿಕ ಮಳೆಯಾಗಿದೆ. ಈ ಭಾಗಗಳು ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಟೊಮೆಟೊ ಪ್ರಮುಖ ಪೂರೈಕೆದಾರ ರಾಜ್ಯಗಳು ಆಗಿದೆ.
ಕಳೆದ ವರ್ಷಕ್ಕಿಂತ ಕಡಿಮೆ ಟೊಮೆಟೊ ಬೆಳೆ ಕೊಯ್ಲು
ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ದೇಶದಲ್ಲಿ 70.12 ಲಕ್ಷ ಮೆಟ್ರಿಕ್ ಟನ್ ಟೊಮೆಟೊ ಬೆಳೆಯನ್ನು ಉತ್ಪಾದನೆ ಮಾಡಲಾಗಿತ್ತು. ಆದರೆ ಈ ವರ್ಷದಲ್ಲಿ 69.52 ಲಕ್ಷ ಮೆಟ್ರಿಕ್ ಟನ್ ಟೊಮೆಟೊ ಬೆಳೆ ಉತ್ಪಾದನೆಯಾಗಿದೆ. ನವೆಂಬರ್ನಲ್ಲಿ 19.62 ಲಕ್ಷ ಟನ್, ಅಕ್ಟೋಬರ್ನಲ್ಲಿ 14.79 ಲಕ್ಷ ಟನ್, ಡಿಸೆಂಬರ್ನಲ್ಲಿ 17.21 ಲಕ್ಷ ಟನ್ ಟೊಮೆಟೊ ಕೊಯ್ಲು ಆಗಲಿದೆ. ಕಳೆದ ವರ್ಷಕ್ಕಿಂತ ಸುಮಾರು 2 ಲಕ್ಷ ಟನ್ ನಷ್ಟು ಟೊಮೊಟೊ ಕಡಿಮೆ ಆಗಿರುವುದು ಬೆಲೆ ಏರಿಕೆ ಕಾರಣ ಎಂದು ಕೃಷಿ ಇಲಾಖೆ ಹೇಳಿದೆ.
ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಟೊಮೆಟೊ ಬೆಲೆ ರೂ. ಪ್ರತಿ ಕೆಜಿಗೆ 75, ಆದರೆ ಇತರ ಕೆಲವು ದಕ್ಷಿಣದ ನಗರಗಳಲ್ಲಿ ಬೆಲೆಯು ಇದಕ್ಕಿಂತ ಕೊಂಚ ಕಡಿಮೆ ಆಗಿದೆ. ಆದರೆ ಇನ್ನು ಕೆಲವು ಪ್ರದೇಶಗಳಲ್ಲಿ, ರಾಜ್ಯಗಳಲ್ಲಿ ಟೊಮೆಟೊ ಬೆಲೆ ಅತೀ ಅಧಿಕವಾಗಿದೆ. ಒಂದು ಕಡೆ ಕಡೆಮೆ ಇಳುವರಿಯಿಂದ ರೈತರು ನಷ್ಟ ಅನುಭವಿಸಿದರೆ, ಮತ್ತೊಂದು ಕಡೆ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ರಾಜ್ಯಾದ್ಯಂತ ಸುರಿದ ಧಾರಾಕಾರ ಮಳೆಯ ಪರಿಣಾಮ ತರಕಾರಿ ಬೆಲೆ ಗಗನಕ್ಕೇರಿದೆ. ಕಳೆದೊಂದು ತಿಂಗಳಿನಿಂದ ನಿರಂತವಾಗಿ ತರಕಾರಿಗಳ ಬೆಲೆ ಏರಿಕೆಯಾಗುತ್ತಿದೆ.
ನೆರೆಯ ಮಹಾರಾಷ್ಟ್ರದಲ್ಲಿ ಟೊಮೆಟೊ ಬೆಳೆ ಸಿಕ್ಕರೆ ಮಾತ್ರ ದರ ಇಳಿಕೆಯಾಗಲಿದೆ. ಇಲ್ಲದಿದ್ದರೆ ಇನ್ನಷ್ಟು ದಿನ ದರ ಏರುವ ಸಾಧ್ಯತೆಯಿದೆ. ಸದ್ಯ ಹೋಲ್ಸೇಲ್ 60 ರೂ.ನಿಂದ 80 ರೂ. ಟೊಮೆಟೊ ಮಾರಾಟವಾದರೆ, ರೀಟೇಲ್ 100ರಿಂದ 120 ರೂ.ವರೆಗೂ ಮಾರಾಟವಿದೆ. ಹೀಗಾಗಿ ಜನರ ಬಾಯಿ ಕಹಿ ಮಾಡುತ್ತಿರುವ ಟೊಮೆಟೊ ಜೊತೆಗೆ ಇತರೆ ತರಕಾರಿಗಳ ಬೆಲೆವೂ ದುಬಾರಿಯಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications