ಹಲವಾರು ತಿಂಗಳುಗಳಿಂದ ಡಿಎ ಅಥವಾ ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಸರ್ಕಾರಿ ನೌಕರರುಗಳು ಕಾದುಕೂತಿದ್ದಾರೆ. ಮುಂದಿನ ತಿಂಗಳು ಡಿಎ ಏರಿಕೆಯಾಗಲಿದೆ, ಎಂದು ಪ್ರತಿ ತಿಂಗಳು ಮಾಹಿತಿ ಆಧಾರದಲ್ಲಿ ಸುದ್ದಿಗಳು ಪ್ರಕಟವಾಗುತ್ತಲೇ ಇದೆ. ಈ ನಡುವೆ ಈ ರಾಜ್ಯ ಸರ್ಕಾರವೊಂದು ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ತುಟ್ಟಿಭತ್ಯೆ ಅಥವಾ ಡಿಎಯನ್ನು ಹೆಚ್ಚಳ ಮಾಡಿದೆ.
ಹೌದು ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ತ್ರಿಪುರಾ ಸರ್ಕಾರ ಶೇಕಡ 12ರಷ್ಟು ತುಟ್ಟಿಭತ್ಯೆ (ಡಿಎ) ಹಾಗೂ ಡಿಆರ್ ಅನ್ನು ಹೆಚ್ಚಳ ಮಾಡಿದೆ. ಅಷ್ಟು ಮಾತ್ರವಲ್ಲದೆ ಈ ಪರಿಷ್ಕೃತ ಡಿಎ ಡಿಸೆಂಬರ್ 1, 2022ರಿಂದಲೇ ಜಾರಿಗೆ ಬರಲಿದೆ. ತ್ರಿಪುರಾ ಸರ್ಕಾರವು ಸುಮಾರು ಶೇಕಡ 12ರಷ್ಟು ಡಿಎ ಏರಿಕೆ ಮಾಡಿದ ಕಾರಣದಿಂದಾಗಿ ಡಿಎ ಶೇಕಡ 8ರಿಂದ ಶೇಕಡ 20ಕ್ಕೆ ಏರಿಕೆಯಾಗಿದೆ.
ಮುಖ್ಯಮಂತ್ರಿ ಮಾಣಿಕ್ ಸಹಾ ಈ ಬಗ್ಗೆ ಮಾಹಿತಿ ನೀಡಿದ್ದು, ಒಟ್ಟು 1,04,600 ಸಾಮಾನ್ಯ ಉದ್ಯೋಗಿಗಳು ಹಾಗೂ 80,800 ಪಿಂಚಣಿದಾರರಿಗೆ ಈ ಪ್ರಯೋಜನವು ಲಭ್ಯವಾಗಲಿದೆ. ಇನ್ನು ಗುತ್ತಿಗೆ ಆಧಾರದಲ್ಲಿ ಪಾರ್ಟ್ ಟೈಮ್ ಕೆಲಸ ಮಾಡುವವರಿಗೆ ಸಂಭಾವನೆಯನ್ನು ದುಪ್ಪಟ್ಟು ಮಾಡಲಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ವೇತನ ರಚನೆ ಪರಿಷ್ಕರಣೆ
ಈ ಹಿಂದೆ ಸರ್ಕಾರವು ಡಿಎ ರೂಪದಲ್ಲಿ ನೀಡುತ್ತಿದ್ದ ಮೊತ್ತಕ್ಕಿಂತ ಈಗ ಅಧಿಕ ಮೊತ್ತವನ್ನು ನೀಡಬೇಕಾಗುತ್ತದೆ. ಡಿಎ ಶೇಕಡ 12ರಷ್ಟು ಹೆಚ್ಚಳ ಮಾಡಿದ ಬಳಿಕ ತ್ರಿಪುರಾ ಸರ್ಕಾರ ಮಾಸಿಕವಾಗಿ 120 ಕೋಟಿ ರೂಪಾಯಿ ಹಾಗೂ ವಾರ್ಷಿಕವಾಗಿ 1,440 ಕೋಟಿ ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡಬೇಕಾಗುತ್ತದೆ. "ಇದನ್ನು ಹೊರತುಪಡಿಸಿ ಸರ್ಕಾರವು ವೇತನ ರಚನೆಯನ್ನು ಕೂಡಾ ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಲಕ್ಷಾಂತರ ಉದ್ಯೋಗಿಗಳಿಗೆ ಹಾಗೂ ಅವರ ಕುಟುಂಬಕ್ಕೆ ಸಹಾಯವಾಗಲಿದೆ," ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಮಾತನಾಡಿ, "ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ಡಿಎ ಹೆಚ್ಚಳ ಮಾಡದ ಕಾರಣ ಭಾರೀ ಟೀಕೆ ವ್ಯಕ್ತವಾಗಿದೆ. ಹೆಚ್ಚಿನ ಜನರಿಗೆ ಸರ್ಕಾರದ ಪ್ರಯೋಜನ ಅಧಿಕವಾಗಿ ಲಭ್ಯವಾಗುವಂತೆ ಮಾಡಲು ಸರ್ಕಾರ ಎಲ್ಲ ಪ್ರಯತ್ನವನ್ನು ಮಾಡುತ್ತದೆ," ಎಂದು ಕೂಡಾ ತಿಳಿಸಿದ್ದಾರೆ.
ಇನ್ನು ವಾರ್ಷಿಕವಾಗಿ 1,440 ಕೋಟಿ ರೂಪಾಯಿ ಅಧಿಕ ಹೊರೆ ಹೇಗೆ ಬೀಳಲಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, "ಆರ್ಥಿಕ ಲೆಕ್ಕಾಚಾರವನ್ನು ವ್ಯವಸ್ಥಿತವಾಗಿ, ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವುದು ಒಂದು ಕಲೆಯಾಗಿದೆ. ಜನರಿಗೆ ಕೊಂಚ ಅಧಿಕ ಲಾಭವನ್ನು ನೀಡಲು, ಜನರಿಗೆ ಸಹಾಯ ಮಾಡಲು ಕೊಂಚ ದೈರ್ಯ ಹಾಗೂ ಉತ್ತಮ ಮನಸ್ಸು ಎರಡೂ ಬೇಕು," ಎಂದು ಉತ್ತರಿಸಿದ್ದಾರೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications