ಶ್ವೇತಭವನದಲ್ಲಿ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿದ್ದ ಜಿ7 ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೆಪ್ಟೆಂಬರ್ಗೆ ಮುಂದೂಡಿದ್ದಾರೆ.ಜೊತೆಗೆ ಜಿ7 ಶೃಂಗ ರಾಷ್ಟ್ರಗಳೊಂದಿಗೆ ಇಂದು ವಿಶ್ವದ ಆರ್ಥಿಕತೆಯಲ್ಲಿ ಗುರುತಿಸಿಕೊಂಡಿರುವ ಭಾರತ ಮತ್ತು ಇತರ ಕೆಲವು ದೇಶಗಳನ್ನು ಸೇರಿಸುವಂತೆ ಅವರು ಕೋರಿದ್ದಾರೆ.
ಈ ಬಗ್ಗೆ ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಟ್ರಂಪ್, ಜಿ7 ಶೃಂಗಸಭೆಯನ್ನು ಸೆಪ್ಟೆಂಬರ್ ವರೆಗೆ ಮುಂದೂಡಲಾಗುವುದು, ನಂತರ ನಡೆಸುವ ಶೃಂಗಸಭೆಗೆ ಭಾರತ ಸೇರಿದಂತೆ ರಷ್ಯಾ, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾಗಳನ್ನು ಸಹ ಆಹ್ವಾನಿಸಲು ಯೋಚಿಸುತ್ತಿರುವುದಾಗಿ ಹೇಳಿದ್ದಾರೆ. ಜಿ7 ಅನ್ನು ಜಿ10 ಅಥವಾ ಜಿ11 ಎಂದು ಕರೆಯಬಹುದು ಎಂದಿದ್ದಾರೆ.

"ನಾನು ಅದನ್ನು ಮುಂದೂಡುತ್ತಿದ್ದೇನೆ ಏಕೆಂದರೆ ಜಿ 7 ಸದ್ಯ ಜಗತ್ತಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರಿಯಾಗಿ ಪ್ರತಿನಿಧಿಸುತ್ತದೆ ಎಂದು ನನಗೆ ಅನಿಸುವುದಿಲ್ಲ" ಎಂದು ಟ್ರಂಪ್ ಏರ್ ಫೋರ್ಸ್ ಒನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಇದು ಬಹಳ ಹಳತಾದ ದೇಶಗಳ ಗುಂಪಾಗಿದೆ'' ಎಂದು ಟ್ರಂಪ್ ತಿಳಿಸಿದ್ದಾರೆ.
ವಿಶ್ವದ ಅತ್ಯಂತ ಸುಧಾರಿತ ಮತ್ತು ಆರ್ಥಿಕವಾಗಿ ಪ್ರಬಲವಾಗಿರುವ ದೇಶಗಳಾದ ಅಮೆರಿಕ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಇಂಗ್ಲೆಂಡ್ ಮತ್ತು ಕೆನಡಾ ದೇಶಗಳನ್ನು ಒಟ್ಟು ಸೇರಿಸಿ ಜಿ7 ಶೃಂಗರಾಷ್ಟ್ರಗಳನ್ನಾಗಿ ರಚಿಸಲಾಗಿತ್ತು. ಈ ದೇಶಗಳ ಮುಖ್ಯಸ್ಥರು ವರ್ಷಕ್ಕೊಂದು ಬಾರಿ ಸಭೆ ಸೇರಿ ಅಂತರಾಷ್ಟ್ರೀಯ ಆರ್ಥಿಕತೆ ಮತ್ತು ವಿತ್ತೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ.
ಈ ವರ್ಷದ ಜಿ7 ಶೃಂಗಸಭೆಯ ಆತಿಥ್ಯ ಅಮೆರಿಕ ವಹಿಸಲಿದೆ. ಸಾಮಾನ್ಯವಾಗಿ ಈ ಶೃಂಗಸಭೆಗೆ ಅಧ್ಯಕ್ಷರು ಪ್ರತಿವರ್ಷ ಒಂದು ಅಥವಾ ಎರಡು ರಾಷ್ಟ್ರಗಳ ಮುಖ್ಯಸ್ಥರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸುತ್ತಾರೆ. ಕಳೆದ ವರ್ಷ ಫ್ರಾನ್ಸ್ ನಲ್ಲಿ ನಡೆದ ಶೃಂಗಸಭೆಗೆ ಪ್ರಧಾನಿ ಮೋದಿಯವರಿಗೆ ವಿಶೇಷ ಆಹ್ವಾನ ನೀಡಲಾಗಿತ್ತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications