ಅನುಭವಿ ಅಧಿಕಾರಿ ಹಾಗೂ ಭಾರತದ ಹಣಕಾಸು ಕಾರ್ಯದರ್ಶಿ ತುಹಿನ್ ಕಾಂತಾ ಪಾಂಡೆ ಅವರನ್ನು ಬಂಡವಾಳ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ದ 11 ನೇ ಅಧ್ಯಕ್ಷರನ್ನಾಗಿ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ.
ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಫೆಬ್ರುವರಿ 28ಕ್ಕೆ ಮುಗಿದಿದ್ದು, ಸೆಬಿಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ತಮ್ಮ ಮೂರು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಸೆಬಿ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ತುಹಿನ್ ಕಾಂತಾ ಪಾಂಡೆ ಅವರನ್ನು ನೇಮಕ ಮಾಡಿ ಗುರುವಾರ ಅಧಿಸೂಚನೆ ಹೊರಡಿಸಿದೆ.

ಫೆಬ್ರವರಿ 27ರ ಗುರುವಾರ ಸರ್ಕಾರದ ಕ್ಯಾಬಿನೆಟ್ ನೇಮಕಾತಿ ಸಮಿತಿ (ACC) ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಸೆಬಿ ಅಧ್ಯಕ್ಷ ಹುದ್ದೆಗೆ ಹಣಕಾಸು ಕಾರ್ಯದರ್ಶಿ ಮತ್ತು ಕಂದಾಯ ಇಲಾಖೆಯ ಕಾರ್ಯದರ್ಶಿ ಐಎಎಸ್ ಪಾಂಡೆ (OR:1987) ಅವರನ್ನು ನೇಮಕ ಮಾಡಲು ಸಂಪುಟ ಅನುಮೋದನೆ ನೀಡಿದೆ. ಪಾಂಡೆ ಅವರ ನೇಮಕಾತಿ ಆರಂಭದಲ್ಲಿ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಮೂರು ವರ್ಷಗಳ ಅವಧಿಗೆ ಇರುತ್ತದೆ.
ಒಡಿಸ್ಸಾ ಕೇಡರ್ ನ 1987 ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಪಾಂಡೆ ಹಣಕಾಸು ಸಚಿವಾಲಯದಲ್ಲಿ ಕಂದಾಯ ಇಲಾಖೆಯನ್ನು ನಿರ್ವಹಿಸುವ ಹಿರಿಯ ಅಧಿಕಾರಿಯಾಗಿದ್ದಾರೆ.
ತುಹಿನ್ ಕಾಂತಾ ಪಾಂಡೆ ಶೈಕ್ಷಣಿಕ ಅರ್ಹತೆ
ಪಾಂಡೆ ಅವರು ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಎಂಎ ಪದವಿ ಮತ್ತು ಬರ್ಮಿಂಗ್ಹ್ಯಾಮ್ (ಯುಕೆ) ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು ಒಡಿಶಾ ಮತ್ತು ಭಾರತ ಸರ್ಕಾರಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ವೃತ್ತಿಜೀವನದ ಆರಂಭಿಕ ಅವಧಿಯಲ್ಲಿ, ಕಾಂತಾ ಪಾಂಡೆ ಆರೋಗ್ಯ, ಸಾಮಾನ್ಯ ಆಡಳಿತ, ವಾಣಿಜ್ಯ ತೆರಿಗೆಗಳು, ಸಾರಿಗೆ ಮತ್ತು ಹಣಕಾಸು ಇಲಾಖೆಯ ಆಡಳಿತ ಮುಖ್ಯಸ್ಥರಾಗಿದ್ದರು.
ಒಡಿಶಾದಲ್ಲಿ, ಅವರು ಒಡಿಶಾ ರಾಜ್ಯ ಹಣಕಾಸು ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮತ್ತು ಒಡಿಶಾ ಸಣ್ಣ ಕೈಗಾರಿಕೆಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು.
ಕೇಂದ್ರ ಸರ್ಕಾರದ ಮಟ್ಟದಲ್ಲಿ, ಅವರ ಹಿಂದಿನ ಹುದ್ದೆಗಳಲ್ಲಿ ಯೋಜನಾ ಆಯೋಗದ (ಈಗ ನೀತಿ ಆಯೋಗ) ಜಂಟಿ ಕಾರ್ಯದರ್ಶಿ, ಕ್ಯಾಬಿನೆಟ್ ಸಚಿವಾಲಯದ ಜಂಟಿ ಕಾರ್ಯದರ್ಶಿ ಮತ್ತು ವಾಣಿಜ್ಯ ಸಚಿವಾಲಯದ ಉಪ ಕಾರ್ಯದರ್ಶಿ ಹುದ್ದೆಗಳು ಸೇರಿವೆ.
ವಿದೇಶಿ ಹೂಡಿಕೆ ಹಿಂತೆಗೆತ ಸವಾಲಿನ ನಡುವೆ ಸೆಬಿ ಮುಖ್ಯಸ್ಥರಾದ ಪಾಂಡೆ
ಷೇರು ಮಾರುಕಟ್ಟೆ ವಿದೇಶಿ ಹೂಡಿಕೆ ಹಿಂತೆಗೆತ ಸವಾಲಿನ ನಡುವೆ ಸೆಬಿ ಮುಖ್ಯಸ್ಥರಾಗಿರುವುದು ಗಮನಾರ್ಹ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ನಿರಂತರವಾಗಿ ಹಣವನ್ನು ಹಿಂತೆಗೆದುಕೊಳ್ಳುತ್ತಿರುವುದರಿಂದ ಭಾರತೀಯ ಷೇರು ಮಾರುಕಟ್ಟೆಯು ಕುಸಿತದ ಒತ್ತಡವನ್ನು ಅನುಭವಿಸುತ್ತಿದೆ. ಈ ಸಮಯದಲ್ಲಿ ಪಾಂಡೆ ಮಾರುಕಟ್ಟೆ ನಿಯಂತ್ರಕ ಸೆಬಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್ಪಿಐಗಳು) ಜನವರಿ 2025 ರಿಂದ ₹ 1 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಹಿಂತೆಗೆದುಕೊಂಡಿದ್ದಾರೆ.
ಪಾಂಡೆ ಅವರ ಪೂರ್ವವರ್ತಿ ಸಂಜಯ್ ಮಲ್ಹೋತ್ರಾ ಅವರು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಆಗಿ ಆಯ್ಕೆಯಾದ ನಂತರ, ಜನವರಿ 9 ರಂದು ಅವರು ಭಾರತದ ಕಂದಾಯ ಇಲಾಖೆಯ ಉಸ್ತುವಾರಿ ವಹಿಸಿಕೊಂಡರು. ಮಧ್ಯಮ ವರ್ಗದವರಿಗೆ ಒಟ್ಟು ₹ 1 ಲಕ್ಷ ಕೋಟಿ ತೆರಿಗೆ ವಿನಾಯಿತಿಗಳನ್ನು ನೀಡುವ ಮೂಲಕ ಪಾಂಡೆ 2025 ರ ಬಜೆಟ್ ಅನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದಲ್ಲದೇ 1961 ರ 64 ವರ್ಷಗಳ ಹಳೆಯ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸಲಾದ ಹೊಸ ಆದಾಯ ತೆರಿಗೆ ಮಸೂದೆಯನ್ನು ರಚಿಸುವಲ್ಲಿ ಅವರು ತೊಡಗಿಸಿಕೊಂಡಿದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications