ತುಮಕೂರು, ಏಪ್ರಿಲ್ 2: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ ಸೋಮಣ್ಣ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರು ತಮ್ಮ ಆಸ್ತಿ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಅವರು ಪಕ್ಷದ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ಅವರಿಗೆ ಲೋಕಸಭಾ ಚುನಾವಣೆ ಟಿಕೆಟ್ ನೀಡಲಾಗಿದೆ. ತುಮಕೂರಿನಲ್ಲಿ ಸ್ಪರ್ಧೆ ಮಾಡುತ್ತಿರುವ ಅವರಿಗೆ ಪಕ್ಷದ ಕೆಲವು ಕಾರ್ಯಕರ್ತರ ವಿರೋಧ ವ್ಯಕ್ತವಾಗಿದೆ.

ಸೋಮವಾರ ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಯನ್ನು ಘೋಷಿಸಿದ ಮಾಜಿ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ಪತ್ನಿ ಜಿ ಶೈಲಜಾ ಅವರಿಗಿಂತ ಬಡವರು ಎಂದು ತಿಳಿದು ಬಂದಿದೆ. ಅವರ ಒಟ್ಟು ಆಸ್ತಿ ಮೌಲ್ಯ 43,03,81,625 ರೂ. ಎಂದು ಅವರು ಘೋಷಿಸಿಕೊಂಡಿದ್ದಾರೆ. ಸೋಮಣ್ಣ ಅವರಿಗೆ ಚಿಕ್ಕಮಗಳೂರು ತಾಲೂಕಿನ ಬಸಾಪುರ ಮತ್ತು ಕಡವಂತಿ ಗ್ರಾಮದಲ್ಲಿ 4.5 ಕೋಟಿ ಮೌಲ್ಯದ 68.01 ಎಕರೆ ಕೃಷಿ ಭೂಮಿ ಇದೆ.
ಅವರ ಪತ್ನಿ ಶೈಲಜಾ ಅವರು ಬೆಂಗಳೂರಿನ ನಾಗದೇವನಹಳ್ಳಿ ಮತ್ತು ಕೆಂಗೇರಿಯಲ್ಲಿ ವಾಣಿಜ್ಯ ಕಟ್ಟಡಗಳು ಮತ್ತು ಅಪಾರ್ಟ್ಮೆಂಟ್ಗಳು ಸೇರಿದಂತೆ 25.7 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ವಿ ಸೋಮಣ್ಣ ಅವರು ವಿಜಯನಗರ ಮತ್ತು ಎಂಆರ್ ಸಿಆರ್ ಲೇಔಟ್ ನಲ್ಲಿ 8.06 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಅವರು 10.35 ಲಕ್ಷ ಮೌಲ್ಯದ ಚಿನ್ನ (650 ಗ್ರಾಂ) ಮತ್ತು ಬೆಳ್ಳಿ ಆಭರಣಗಳನ್ನು ಹೊಂದಿದ್ದಾರೆ, ಆದರೆ ಅವರ ಪತ್ನಿ 2,524 ಗ್ರಾಂ ವಜ್ರಗಳು ಸೇರಿದಂತೆ 1.05 ಕೋಟಿ ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಸೋಮಣ್ಣ ಅವರ ಚರ ಆಸ್ತಿ ಮೌಲ್ಯ 5,18,23,590 ಆಗಿದ್ದು, ಸ್ಥಿರಾಸ್ತಿ ಮೌಲ್ಯ 12,56,00,000ರಷ್ಟಿದೆ. ಪತ್ನಿ ಶೈಲಜಾ 4,38,81,625 ಮೌಲ್ಯದ ಚರ ಆಸ್ತಿ ಮತ್ತು 38,65,00,000 ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಸೋಮಣ್ಣ ಅವರು ಬ್ಯಾಂಕ್ಗಳಲ್ಲಿ 6,44,52,206 ಸಾಲ ಹೊಂದಿದ್ದರೆ, ಶೈಲಜಾ 16,18,48,255 ರೂ. ಹೊಂದಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ.
ಸೋಮಣ್ಣ ಮೇಲೆ ಮಾಧುಸ್ವಾಮಿ ಅಸಮಾಧಾನ
ವಿ ಸೋಮಣ್ಣ ನಾಮಪತ್ರ ಸಲ್ಲಿಸುವಾಗ ಚಿಕ್ಕನಾಯಕನಹಳ್ಳಿ ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರು ಗೈರಾಗಿದ್ದರು. ಸೋಮಣ್ಣ ಅವರೊಂದಿಗೆ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ, ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸಿ.ಬಿ.ಸುರೇಶ್ ಬಾಬು ಇದ್ದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಿಷ್ಠಾವಂತರಾಗಿರುವ ಮಾಧುಸ್ವಾಮಿ ಸೋಮಣ್ಣ ಅವರ ಉಮೇದುವಾರಿಕೆಯನ್ನು ವಿರೋಧಿಸಿದ್ದಾರೆ. ಸೋಮಣ್ಣ ಅವರನ್ನು ಹೊರಗಿನವರು ಎಂದು ಕರೆದಿದ್ದಾರೆ. ಈ ನಿಟ್ಟಿನಲ್ಲಿ ಮಾಧುಸ್ವಾಮಿ ಒಳೇಟು ನೀಡುವ ಸಾಧ್ಯತೆ ಇರುವುದರಿಂದ ಪಕ್ಷವು ಅವರನ್ನು ಉಡುಪಿ-ಚಿಕ್ಕಮಗಳೂರು ಉಸ್ತುವಾರಿಯನ್ನಾಗಿ ನಿಯೋಜಿಸಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications