ಇದೇ ಮೊದಲ ಬಾರಿ ಇಂಥದ್ದೊಂದು ಪ್ರಯತ್ನ ನಡೆದಿರುವುದು ಸುದ್ದಿಯಾಗಿದೆ. ಶಾರ್ಜಾದಲ್ಲಿರುವ ಭಾರತೀಯ ಉದ್ಯಮಿ ಡಾ. ಸೋಹನ್ ರಾಯ್ ಏರೀಸ್ ಸಮೂಹ ಕಂಪೆನಿಗಳ ಸಿಬ್ಬಂದಿಯ ಪತ್ನಿಗೆ ನಿಯಮಿತವಾಗಿ ವೇತನ ನೀಡುವುದಕ್ಕೆ ಮುಂದಾಗಿದ್ದಾರೆ. ಕೋವಿಡ್ - 19 ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಅವರ ಕುಟುಂಬ ನೀಡಿದ ಬೆಂಬಲವನ್ನು ಗಣನೆಗೆ ತೆಗೆದುಕೊಂಡು, ಅವರಿಗೆ ಈಗ ಪ್ರತಿಫಲ ನೀಡಲು ನಿರ್ಧರಿಸಿದ್ದಾರೆ.
ಸದ್ಯಕ್ಕೆ ಕಂಪೆನಿಯಿಂದ ಉದ್ಯೋಗಿಗಳ ಸಿಬ್ಬಂದಿಯ ಪತ್ನಿ ಬಗ್ಗೆ ಮಾಹಿತಿ ಕಲೆಹಾಕಲು ಆರಂಭಿಸಲಾಗಿದೆ. ಉದ್ಯೋಗಿ ಎಷ್ಟು ವರ್ಷ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಎಂಬುದನ್ನು ಗಣನೆಗೆ ತೆಗೆದುಕೊಂಡು, ಆ ಉದ್ಯೋಗಿಯ ಪತ್ನಿಗೆ ಎಷ್ಟು ವೇತನ ನೀಡುವುದು ಎಂದು ತೀರ್ಮಾನ ಮಾಡಲಾಗುತ್ತದೆ. ಶೀಘ್ರದಲ್ಲಿ ಅಧಿಕೃತವಾಗಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ರಾಯ್ ಮೂಲತಃ ಕೇರಳದವರು. ಏರೀಸ್ ಗ್ರೂಪ್ ಆಫ್ ಕಂಪೆನಿಗಳ ಸಿಇಒ ಮತ್ತು ಅಧ್ಯಕ್ಷ ಅವರು. ಅಂದ ಹಾಗೆ ಕೋವಿಡ್ 19 ಬಿಕ್ಕಟ್ಟಿನ ಸಂದರ್ಭದಲ್ಲೂ ಕಂಪೆನಿಯಿಂದ ತೆಗೆದಿರಲಿಲ್ಲ ಅಥವಾ ವೇತನವನ್ನೂ ಕಡಿತ ಮಾಡಿರಲಿಲ್ಲ.

ಇನ್ನು ರಾಯ್ ಅವರಿಗೆ ಈ ರೀತಿ ನೌಕರರ ಪತ್ನಿಗೆ ವೇತನ ನೀಡುವ ಆಲೋಚನೆ ಬಂದಿದ್ದು ಹೇಗೆ ಅಂದರೆ, 2012ನೇ ಇಸವಿಯಲ್ಲಿ ಭಾರತದಲ್ಲಿ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಖಾತೆಯ ಸಚಿವರಾಗಿದ್ದ ಕೃಷ್ಣ ತಿರಾತ್ ಅವರ ಆಲೋಚನೆಯಿಂದ ಪ್ರಭಾವಿತರಾಗಿದ್ದಾರೆ.
ಅಷ್ಟೇ ಅಲ್ಲ, ಕಳೆದ ತಿಂಗಳು ಸುಪ್ರೀಂ ಕೋರ್ಟ್ ನಿಂದ ಬಂದಿರುವ ತೀರ್ಪಿನಿಂದ ಕೂಡ ರಾಯ್ ತೀರ್ಮಾನ ಪ್ರಭಾವಿತ ಆಗಿದೆ. ಅಂದ ಹಾಗೆ ಸದ್ಯಕ್ಕೆ ಏರೀಸ್ ಗ್ರೂಪ್ ನಿಂದ ಉದ್ಯೋಗಿಗಳ ಪೋಷಕರಿಗೆ ಪಿಂಚಣಿ ನೀಡಲಾಗುತ್ತಿದೆ. ಆದರೆ ಆ ಸಿಬ್ಬಂದಿ ಮೂರು ವರ್ಷ ಕಾರ್ಯ ನಿರ್ವಹಿಸಿರಬೇಕು. ಇನ್ನು ಉದ್ಯೋಗಿಗಳ ಮಕ್ಕಳು ವಿದ್ಯಾರ್ಥಿಗಳಾಗಿದ್ದಲ್ಲಿ ಅವರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications