ಕೊರೊನಾವೈರಸ್ ವಿಶ್ವದ ಆರ್ಥಿಕತೆಯನ್ನು ಪಾತಾಳಕ್ಕೆ ತಳ್ಳುತ್ತಿರುವ ಬೆನ್ನಲ್ಲೆ ಕೋಟ್ಯಾಂತರ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಇದೇ ಸಾಲಿಗೀಗ ಸುಮಾರು 3,700 ಉಬರ್ ಉದ್ಯೋಗಿಗಳು ಸೇರಿದ್ದಾರೆ. ಆಶ್ಚರ್ಯ ಏನಪ್ಪಾ ಅಂದರೆ ಈ ಉದ್ಯೋಗಿಗಳನ್ನು Zoom ಆ್ಯಪ್ ಮೂಲಕ ಕೆಲಸದಿಂದ ವಜಾಗೊಳಿಸಲಾಗಿದೆ.
ವಿಶ್ವದ ಅನೇಕ ಕಂಪನಿಗಳು ಹಣಕಾಸಿನ ಮುಗ್ಗಟ್ಟಿನಿಂದಾಗಿ ದಿವಾಳಿಯೆಂದು ಘೋಷಿಸುತ್ತಿವೆ. ಇದರ ಜೊತೆಗೆ ಉಬರ್ ಕೂಡ ಹಣಕಾಸಿನ ತೊಂದರೆಯಿಂದ ನೂರಾರು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ. ಇದಕ್ಕಾಗಿ ಈ ಕಂಪನಿಯು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡಿದೆ.

ವಜಾಗೊಳಿಸುವಿಕೆಯ ಬಗ್ಗೆ ನೌಕರರಿಗೆ ತಿಳಿಸಲು ಕಳೆದ ವಾರ ಅನೇಕ ಸಭೆಗಳನ್ನು ನಡೆಸಲು ಉಬರ್ ಜನಪ್ರಿಯ ಟೆಲಿಕಾನ್ ಕಾನ್ಫರೆನ್ಸ್ ಸಾಫ್ಟ್ವೇರ್ ಅನ್ನು ಬಳಸಿದೆ. ಯು.ಕೆ ಪತ್ರಿಕೆ ಡೈಲಿ ಮೇಲ್ ಮೊದಲು ಸುದ್ದಿಯನ್ನು ವರದಿ ಮಾಡಿದ್ದು ಈ ಕುರಿತು ಕರೆಗಳ ವೀಡಿಯೊವನ್ನು ಪಡೆದುಕೊಂಡಿದೆ. ಆ ಮೂಲಕ Zoom ಆ್ಯಪ್ ಮೂಲಕ ಉಬರ್ನ 3,700 ಉದ್ಯೋಗಿಗಳು ಕೆಲಸ ಕಳೆದುಕೊಂಡಿರುವ ಮಾಹಿತಿ ಹೊರಬಿದ್ದಿದೆ.
ಇತ್ತೀಚೆಗಷ್ಟೇ ಉಬರ್ ಯುಎಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಎಸ್ಇಸಿ)ಗೆ ಸಲ್ಲಿಸಿದ ನಿಯಂತ್ರಕ ಫೈಲಿಂಗ್ನಲ್ಲಿ ಆರ್ಥಿಕ ಸವಾಲುಗಳು ಮತ್ತು ಕೊರೊನಾವೈರಸ್ನಿಂದಾಗಿ ಉಂಟಾಗಿರುವ ಅನಿಶ್ಚಿತತೆ ಹಾಗೂ ವ್ಯವಹಾರದ ಮೇಲೆ ಅದರ ಪ್ರಭಾವದಿಂದಾಗಿ ಕಂಪನಿಯು ತನ್ನ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಲು ಯೋಜಿಸಿದೆ ಎಂದು ತಿಳಿಸಿತ್ತು. ಜೊತೆಗೆ ಒಟ್ಟು 3,700 ಪೂರ್ಣ ಸಮಯದ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿಕೆ ನೀಡಿತ್ತು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications