ಭಾರತದ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಇಂಗ್ಲೆಂಡ್ಗೆ ಪರಾರಿಯಾಗಿರುವ ವಿಜಯ್ ಮಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ವಿಜಯ್ ಮಲ್ಯ ದಿವಾಳಿಯಾಗಿದ್ದಾರೆ ಎಂದು ಬ್ರಿಟನ್ನಿನ ನ್ಯಾಯಾಲಯವೊಂದು ಸೋಮವಾರ ಪ್ರಕಟಿಸಿದೆ.
ಈ ನ್ಯಾಯಾಲಯದ ಆದೇಶದಿಂದಾಗಿ ಕಿಂಗ್ ಫಿಶರ್ ಏರ್ ಲೈನ್ಸ್ ಗೆ ಸಾಲ ನೀಡಿ ಮಲ್ಯ ಅವರಿಂದ ಬರಬೇಕಿರುವ ಬಾಕಿ ಮೊತ್ತವನ್ನು ವಸೂಲು ಮಾಡಲು ವಿಶ್ವದಾದ್ಯಂತ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ವಿಚಾರದಲ್ಲಿ ಎದುರು ನೋಡುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದ ಬ್ಯಾಂಕ್ ಗಳ ಒಕ್ಕೂಟದ ಹಾದಿಯನ್ನು ಸುಗಮಗೊಳಿಸಿದೆ.

ಲಂಡನ್ ಹೈಕೋರ್ಟ್ ಚಾನ್ಸರಿ ವಿಭಾಗದ ವರ್ಚುಯಲ್ ವಿಚಾರಣೆ ವೇಳೆಯಲ್ಲಿ ವಿಜಯ್ ಮಲ್ಯ ದಿವಾಳಿಯೆಂದು ಐಸಿಸಿ ನ್ಯಾಯಾಧೀಶ ಮೈಕೆಲ್ ಬ್ರಿಗ್ಸ್ ತೀರ್ಪಿನಲ್ಲಿ ಹೇಳಿದ್ದಾರೆ. ಕಾನೂನು ಸಂಸ್ಥೆಗಳಾದ ಟಿಎಲ್ಟಿ ಎಲ್ಎಲ್ಪಿ ಮತ್ತು ನ್ಯಾಯವಾದಿ ಮಾರ್ಸಿಯಾ ಶೆಕರ್ಡೆಮಿಯನ್ ಪ್ರತಿನಿಧಿಸುವ ಭಾರತೀಯ ಬ್ಯಾಂಕುಗಳು ದಿವಾಳಿತನದ ಆದೇಶವನ್ನು ಭಾರತೀಯ ಬ್ಯಾಂಕುಗಳ ಪರವಾಗಿ ನೀಡಬೇಕೆಂದು ವಾದಿಸಿದ್ದರು.
ಮಲ್ಯ ಅವರ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಈ ತೀರ್ಪಿನಿಂದಾಗಿ ಅವಕಾಶ ಸಿಕ್ಕಂತಾಗಿದೆ. ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಮಲ್ಯ ಇದೇ ವೇಳೆ ಹೇಳಿದ್ದಾರೆ, ಆದರೆ ಇದಕ್ಕೆ ಅನುಮತಿ ನಿರಾಕರಿಸಲಾಗಿದೆ.
ಮೇನಲ್ಲಿ ಆನ್ಲೈನ್ ಮೂಲಕ ವಿಚಾರಣೆ ನಡೆಸಲಾಗಿತ್ತು, ಬ್ಯಾಂಕುಗಳು ಸಲ್ಲಿಸಿದ್ದ ದಿವಾಳಿತನದ ಅರ್ಜಿಯನ್ನು ತಿದ್ದುಪಡಿ ಮಾಡುವ ಕಾನೂನನ್ನು ಲಂಡನ್ ಹೈಕೋರ್ಟ್ ಎತ್ತಿಹಿಡಿದಿತ್ತು, ಭಾರತದಲ್ಲಿ ಇರುವ ಆಸ್ತಿಗಳ ಮೇಲೆ ತಮ್ಮ ಆಸ್ತಿಗೆ ಭದ್ರತೆಯನ್ನು ನೀಡಬೇಕು ಎಂದು ವಿಜಯ್ ಮಲ್ಯ ಅವರು ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications