ಚೀನಿ ಮೂಲದ ಬ್ಯಾಂಕುಗಳಿಗೆ ಸಾಲ ಮರುಪಾವತಿಸಲು ವಿಫಲಾಗಿರುವ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಆರು ವಾರದೊಳಗೆ 100 ಮಿಲಿಯನ್ ಡಾಲರ್ (ಭಾರತದ ರುಪಾಯಿಗಳಲ್ಲಿ 715 ಕೋಟಿ, 16 ಲಕ್ಷ ) ಅನ್ನು ಪಾವತಿಸಬೇಕು ಎಂದು ಇಂಗ್ಲೆಂಡ್ ನ್ಯಾಯಾಲಯವು ಷರತ್ತುಬದ್ಧ ಆದೇಶ ನೀಡಿದೆ.
ಪ್ರಕರಣದ ಕುರಿತು ಪೂರ್ಣ ವಿಚಾರಣೆಯು ನ್ಯಾಯಾಲಯದಲ್ಲಿ ಬಾಕಿ ಇದ್ದು, ನ್ಯಾಯಾಧೀಶ ಡೇವಿಡ್ ವಕ್ಸ್ಮನ್ ಆರು ವಾರದೊಳಿಗೆ 100 ಮಿಲಿಯನ್ ಡಾಲರ್ ಪಾವತಿಸಲು ನಿರ್ದೇಶನ ನೀಡಿದ್ದಾರೆ. ಇದಕ್ಕೂ ಮೊದಲು ವಿಚಾರಣೆ ವೇಳೆ 'ನನ್ನ ಹೂಡಿಕೆಗಳ ಮೌಲ್ಯವು ಕುಸಿದಿದೆ "ಎಂದು ಅನಿಲ್ ಅಂಬಾನಿ ಲಂಡನ್ ಮೊಕದ್ದಮೆಯಲ್ಲಿ ಬ್ಯಾಂಕುಗಳು ಸಲ್ಲಿಸಿದ ನ್ಯಾಯಾಲಯದ ವರದಿಯಲ್ಲಿ ತಿಳಿಸಿದ್ದಾರೆ.

"ನನ್ನ ಒಟ್ಟಾರೆ ತೀರ್ಮಾನದಲ್ಲಿ, ಶ್ರೀ ಅಂಬಾನಿ ಅವರು ಯಾವುದೇ ಪಾವತಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿರುವುದು ನನಗೆ ತೃಪ್ತಿ ನೀಡಿಲ್ಲ" ಎಂದು ನ್ಯಾಯಾಧೀಶ ವಕ್ಸ್ಮನ್ ಅವರು ಅಂಬಾನಿಯ ರಕ್ಷಣೆಯ ಭಾಗವಾಗಿ "ಬುದ್ಧಿವಂತಿಕೆಯ ಕೊರತೆ" ಮತ್ತು "ಪಾರದರ್ಶಕತೆ" ಯ ಬಗ್ಗೆ ನಿರ್ದಿಷ್ಟ ಟೀಕೆಗಳನ್ನು ವ್ಯಕ್ತಪಡಿಸಿದರು. ಈ ವಿಚಾರವಾಗಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಿಲಯನ್ಸ್ ಗ್ರೂಪ್ ಯೋಜಿಸಿದೆ.
ಏನಿದು ಅನಿಲ್ ಅಂಬಾನಿ ಪ್ರಕರಣ
ರಿಲಯನ್ಸ್ ಕಮ್ಯುನಿಕೇಷನ್ಸ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ವಿರುದ್ಧ ಚೀನಾದ 3 ಬ್ಯಾಂಕುಗಳು ಮೊಕದ್ದಮೆ ಹೂಡಿದ್ದವು. 680 ಮಿಲಿಯನ್ ಅಮೆರಿಕನ್ ಡಾಲರ್(ಭಾರತದ ರುಪಾಯಿಗಳಲ್ಲಿ 4,863 ಕೋಟಿ, 08 ಲಕ್ಷದ 80 ಸಾವಿರ) ಸಾಲವನ್ನು ಮರುಪಾವತಿ ಮಾಡಲು ವಿಫಲವಾಗಿದ್ದರಿಂದ ಚೀನಾದ ಬ್ಯಾಂಕುಗಳು ಲಂಡನ್ ಕೋರ್ಟ್ನಲ್ಲಿ ಮೊಕದ್ದಮೆ ಹೂಡಿವೆ.
ಚೀನಾದ ಕೈಗಾರಿಕಾ ಮತ್ತು ವಾಣಿಜ್ಯ ಬ್ಯಾಂಕ್ ಲಿಮಿಟೆಡ್, ಚೀನಾ ಅಭಿವೃದ್ಧಿ ಬ್ಯಾಂಕ್, ಚೀನಾ ರಫ್ತು-ಆಮದು ಬ್ಯಾಂಕ್ 2012ರಲ್ಲಿ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಶನ್ ಲಿಮಿಟೆಡ್ಗೆ 925.2 ಮಿಲಿಯನ್ ಅಮೆರಿಕನ್ ಡಾಲರ್ (ಭಾರತದ ರುಪಾಯಿಗಳಲ್ಲಿ 6,603 ಕೋಟಿ 80 ಲಕ್ಷದ 400) ಸಾಲವನ್ನು ನೀಡಲು ಒಪ್ಪಿಕೊಂಡಿದ್ದವು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications