ಕೇಂದ್ರ ಬಜೆಟ್ ಗೂ ಮುನ್ನ ಇದೊಂದು ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಸೋಮವಾರದಂದು ಸಹ ನಡೆಯಿತು. ಅದು 'ಹಲ್ವಾ ಕಾರ್ಯಕ್ರಮ'. ಯಾವುದೇ ಕೇಂದ್ರ ಬಜೆಟ್ ದಾಖಲೆಯ ಅಧಿಕೃತ ಮುದ್ರಣದ ಆರಂಭದಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಗುತ್ತದೆ. 2020-21ನೇ ಸಾಲಿನ ಕೇಂದ್ರ ಬಜೆಟ್ ಪೂರ್ವಭಾವಿಯಾಗಿಯೂ ಇದು ಮಾಡಲಾಗಿದೆ.
ಮೋದಿ 2.0 ಸರ್ಕಾರದ ಎರಡನೇ ಬಜೆಟ್ ಇದಾಗಿದೆ. ಫೆಬ್ರವರಿ 1ನೇ ತಾರೀಕು ಮಂಡನೆ ಆಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್, ಕಂದಾಯ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಮತ್ತಿತರರು ಬಜೆಟ್ ಪೂರ್ವ ಈ ಸಂಪ್ರದಾಯದಲ್ಲಿ ಪಾಲ್ಗೊಂಡರು.
ಬಜೆಟ್ ಬಗ್ಗೆ ಗೋಪ್ಯತೆ ಕಾಪಾಡಿಕೊಳ್ಳಬೇಕು ಎಂಬ ಕಾರಣಕ್ಕೆ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಯಾರನ್ನೂ ಹೊರಗೆ ಬಿಡುವುದಿಲ್ಲ. ಬಜೆಟ್ ದಾಖಲೆ ಮುದ್ರಣವಾಗುವ ಪ್ರೆಸ್ ನಾರ್ತ್ ಬ್ಲಾಕ್ ನಲ್ಲೇ ಇದೆ. ಕೇಂದ್ರ ಬಜೆಟ್ ಮಂಡನೆ ಆಗುವ ತನಕ ಈ ಎಲ್ಲ ಅಧಿಕಾರಿಗಳಿಗೆ ಮುದ್ರಣಾಲಯವೇ ಮನೆಯಾಗಿರುತ್ತದೆ ಎಂದು ಆರ್ಥಿಕ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಸತ್ ನಲ್ಲಿ ಬಜೆಟ್ ಮಂಡನೆ ಆಗುವ ತನಕ ಈ ಅಧಿಕಾರಿಗಳು, ಸಿಬ್ಬಂದಿ ಯಾರೂ ತಮ್ಮ ಮನೆಯವರನ್ನು, ಆಪ್ತರನ್ನು ಯಾರನ್ನೂ ಸಂಪರ್ಕಿಸಲು ಸಾಧ್ಯವಿಲ್ಲ. ಆದ್ದರಿಂದ ಈವರೆಗೆ ನಡೆದುಬಂದಿರುವ ಸಂಪ್ರದಾಯದಂತೆ ದೊಡ್ಡ ಬಾಣಲೆಯಲ್ಲಿ 'ಹಲ್ವಾ' ತಯಾರಿಸಲಾಯಿತು. ಆ ನಂತರ ಸಚಿವಾಲಯದ ಎಲ್ಲರಿಗೂ ಅದನ್ನು ಹಂಚಲಾಯಿತು.
ಕೇಂದ್ರ ಬಜೆಟ್ ಮಂಡನೆ ಆಗುವ ತನಕ ಸಿದ್ಧತೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಸಿಬ್ಬಂದಿಯು ತಮ್ಮ ಕುಟುಂಬದ ಸದಸ್ಯರನ್ನು, ಸಂಬಂಧಿಗಳನ್ನು, ಸ್ನೇಹಿತರನ್ನು ಯಾವ ರೀತಿಯಿಂದಲೂ ಸಂಪರ್ಕಿಸಲು ಆಗುವುದಿಲ್ಲ. ಹಿರಿಯ ಅಧಿಕಾರಿಗಳಿಗೆ ಮತ್ತು ಸಚಿವಾಲಯದ ಕೆಲವರಿಗೆ ಮಾತ್ರ ಮನೆಗೆ ತೆರಳಲು ಅನುಮತಿ ಇರುತ್ತದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications