ಅಂತೂ ಇಂತು 2025 ಮುಗೀತು. 2026ಕ್ಕೆ ಕಾಲಿಡುವ ಸಮಯ ಇದು. ಇಡೀ ದೇಶ ಹೊಸ ವರ್ಷವನ್ನ ಹೇಗೆ ಬರಮಾಡಿಕೊಳ್ತಿದೆಯೋ, ಅಷ್ಟೇ ಆಸಕ್ತಿಕರವಾಗಿ ಮುಂಬರುವ ಬಜೆಟ್ನತ್ತ ಚಿತ್ತ ನೆಟ್ಟಿದೆ. ಮುಂದಿನ ಹಣಕಾಸು ವರ್ಷದ ಬಜೆಟ್ ಜನರ ದಿನನಿತ್ಯದ ಜೀವನಕ್ಕೆ ಯಾವ ಬದಲಾವಣೆ ತರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಬೆಲೆ ಏರಿಕೆ, ಉದ್ಯೋಗ ಸೃಷ್ಟಿ ಮತ್ತು ತೆರಿಗೆ ವಿಷಯಗಳಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಜನ ಕಾಯುತ್ತಿದ್ದಾರೆ.

ಬಜೆಟ್ ತಯಾರಿಕೆ ಹಲವು ತಿಂಗಳುಗಳ ಪ್ರಕ್ರಿಯೆ:
ಕೇಂದ್ರ ಬಜೆಟ್ ತಯಾರಿಕೆ ಒಂದು ದಿನದ ಕೆಲಸವಲ್ಲ. ಸಾಮಾನ್ಯವಾಗಿ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಈ ಪ್ರಕ್ರಿಯೆ ಆರಂಭವಾಗುತ್ತದೆ. ಹಣಕಾಸು ಸಚಿವಾಲಯವು ವಿವಿಧ ಕೇಂದ್ರ ಸಚಿವಾಲಯಗಳು, ರಾಜ್ಯ ಸರ್ಕಾರಗಳು ಮತ್ತು ತಜ್ಞರಿಂದ ಮಾಹಿತಿ ಹಾಗೂ ಸಲಹೆಗಳನ್ನು ಸಂಗ್ರಹಿಸುತ್ತದೆ. ದೇಶದ ಆರ್ಥಿಕ ಸ್ಥಿತಿಯನ್ನು ಆಧಾರ ಮಾಡಿಕೊಂಡು ಬಜೆಟ್ ರೂಪುಗೊಳ್ಳುತ್ತದೆ.
ಕೇಂದ್ರ ಬಜೆಟ್ ಎಂದರೇನು?
ಸಂವಿಧಾನದ 112ನೇ ವಿಧಿಯ ಪ್ರಕಾರ, ಕೇಂದ್ರ ಬಜೆಟ್ ಎಂದರೆ ಸರ್ಕಾರದ ಒಂದು ವರ್ಷದ ಆದಾಯ ಮತ್ತು ವೆಚ್ಚಗಳ ಸಂಪೂರ್ಣ ವಿವರ. ಈ ದಾಖಲೆ ದೇಶದ ಆರ್ಥಿಕ ನೀತಿಗಳನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಫೆಬ್ರವರಿ 1ರಂದು ಬಜೆಟ್ ಮಂಡಿಸುವ ಪದ್ಧತಿ ಜಾರಿಯಲ್ಲಿದೆ.
ಇಲಾಖೆಗಳ ಅಂದಾಜುಗಳ ಸಂಗ್ರಹ:
ಬಜೆಟ್ ತಯಾರಿಕೆಯ ಮೊದಲ ಹಂತದಲ್ಲಿ ಎಲ್ಲಾ ಕೇಂದ್ರ ಇಲಾಖೆಗಳಿಂದ ಮುಂದಿನ ವರ್ಷದ ವೆಚ್ಚದ ಅಂದಾಜುಗಳನ್ನು ಕೇಳಲಾಗುತ್ತದೆ. ಪ್ರತಿಯೊಂದು ಇಲಾಖೆ ತಮ್ಮ ಅಗತ್ಯಗಳನ್ನು ಹಣಕಾಸು ಸಚಿವಾಲಯಕ್ಕೆ ಸಲ್ಲಿಸುತ್ತದೆ. ಈ ಅಂಕಿಅಂಶಗಳೇ ಬಜೆಟ್ಗೆ ಮೂಲವಾಗುತ್ತವೆ.
ಅಂದಾಜುಗಳ ಪರಿಶೀಲನೆ ಮತ್ತು ಚರ್ಚೆ:
ಹಣಕಾಸು ಸಚಿವಾಲಯದ ಅಧಿಕಾರಿಗಳು ಬಂದಿರುವ ಅಂದಾಜುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಾರೆ. ಎಲ್ಲಿ ಹೆಚ್ಚು ಖರ್ಚು ಬೇಕು, ಎಲ್ಲಿ ಕಡಿತ ಸಾಧ್ಯ ಎಂಬ ಬಗ್ಗೆ ಚರ್ಚೆ ನಡೆಯುತ್ತದೆ. ಈ ಹಂತದಲ್ಲಿ ಆರ್ಥಿಕ ಸಲಹೆಗಾರರು ಹಣಕಾಸು ಸಚಿವರಿಗೆ ಅಗತ್ಯ ಮಾರ್ಗದರ್ಶನ ನೀಡುತ್ತಾರೆ.
ವಿವಿಧ ವಲಯಗಳೊಂದಿಗೆ ಸಂವಾದ:
ಡಿಸೆಂಬರ್ ತಿಂಗಳಲ್ಲಿ ರಾಜ್ಯ ಸರ್ಕಾರಗಳು, ಉದ್ಯಮಿಗಳು, ಅರ್ಥಶಾಸ್ತ್ರಜ್ಞರು, ಕಾರ್ಮಿಕ ಸಂಘಗಳು ಮತ್ತು ನಾಗರಿಕ ಸಂಘಟನೆಗಳೊಂದಿಗೆ ಸಭೆಗಳು ನಡೆಯುತ್ತವೆ. ಜನರ ಅಭಿಪ್ರಾಯಗಳು ಮತ್ತು ಬೇಡಿಕೆಗಳನ್ನು ಕೇಳಿ ಬಜೆಟ್ಗೆ ಅಂತಿಮ ರೂಪ ನೀಡಲಾಗುತ್ತದೆ. ನಂತರ ಇದಕ್ಕೆ ಕೇಂದ್ರ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುತ್ತದೆ.
ಹಲ್ವಾ ಸಮಾರಂಭ ಮತ್ತು ಗೌಪ್ಯತೆ:
ಬಜೆಟ್ ಮುದ್ರಣ ಆರಂಭಿಸುವ ಮೊದಲು 'ಹಲ್ವಾ ಸಮಾರಂಭ' ನಡೆಯುತ್ತದೆ. ಈ ಹಂತದಿಂದ ಬಜೆಟ್ ಮಂಡನೆಯವರೆಗೆ ಸಂಪೂರ್ಣ ಗೌಪ್ಯತೆ ಕಾಪಾಡಲಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಹೊರ ಜಗತ್ತಿನ ಸಂಪರ್ಕವಿಲ್ಲದೆ ಹಣಕಾಸು ಸಚಿವಾಲಯದಲ್ಲೇ ಕಾರ್ಯನಿರ್ವಹಿಸುತ್ತಾರೆ.
ಬಜೆಟ್ ಮಂಡನೆ ಮತ್ತು ಸಾರ್ವಜನಿಕರಿಗೆ ಲಭ್ಯತೆ:
ಫೆಬ್ರವರಿ 1ರಂದು ಹಣಕಾಸು ಸಚಿವೆ ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಾರೆ. ಭಾಷಣ ಮುಗಿದ ತಕ್ಷಣವೇ ಬಜೆಟ್ ದಾಖಲೆಗಳು ಅಧಿಕೃತ ವೆಬ್ಸೈಟ್ ಮತ್ತು ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುತ್ತವೆ.
ಈ ಬಾರಿ ಬಜೆಟ್ನಿಂದ ಏನು ನಿರೀಕ್ಷೆ?
2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ನಲ್ಲಿ ಉದ್ಯೋಗ ಸೃಷ್ಟಿ, ಬೆಲೆ ಏರಿಕೆ ನಿಯಂತ್ರಣ ಮತ್ತು ಆದಾಯ ತೆರಿಗೆಗೆ ಸಂಬಂಧಿಸಿದ ವಿಷಯಗಳು ಪ್ರಮುಖವಾಗುವ ಸಾಧ್ಯತೆ ಇದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಸತತ ಒಂಬತ್ತನೇ ಬಜೆಟ್ ಮಂಡಿಸಲಿದ್ದು, ದೇಶದ ಜನರು ಹೊಸ ನಿರೀಕ್ಷೆಗಳೊಂದಿಗೆ ಕಾಯುತ್ತಿದ್ದಾರೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications