ನವದೆಹಲಿ, ಜನವರಿ 17: ರೈತರಿಗೆ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನು ಒದಗಿಸುವ ನಿಟ್ಟಿನಲ್ಲಿ ಕಂಪನಿಗಳು ಮತ್ತು ವ್ಯಾಪಾರಿಗಳ ಅನುಕೂಲಕ್ಕಾಗಿ 2022ರ ಕೇಂದ್ರ ಬಜೆಟ್ನಲ್ಲಿ ವಿಶೇಷ ಮೀಸಲಾತಿ ನೀಡುವ ಸಾಧ್ಯತೆಗಳಿವೆ.
ದೇಶದಲ್ಲಿ ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಯ ಬೆಲೆಗಿಂತ ಕಡಿಮೆ ದರದಲ್ಲಿ ರೈತರಿಗೆ ಮಾರಾಟ ಮಾಡುತ್ತವೆ. ಈ ಹಿನ್ನೆಲೆ ಕೇಂದ್ರ ಸರ್ಕಾರದಿಂದ ಅಂಥ ಕಂಪನಿಗಳು ಮತ್ತು ವ್ಯಾಪಾರಿಗಳಿಗೆ ಪರಿಹಾರವನ್ನು ನೀಡುತ್ತದೆ. ಈ ಬಾರಿ ಅದಕ್ಕಾಗಿ ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಸುಮಾರು 1.3 ಲಕ್ಷ ಕೋಟಿ ರೂಪಾಯಿ ಮೀಸಲಿಡುವ ಸಾಧ್ಯತೆಯಿದೆ.
ದೇಶದಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆ ಆಗಿರುವ ಹಿನ್ನೆಲೆ ಮಾರ್ಚ್ 31ರಂದು ಅಂತ್ಯವಾಗಲಿರುವ ಆರ್ಥಿಕ ವರ್ಷದಲ್ಲಿ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು 1.30 ಲಕ್ಷ ಕೋಟಿಯಿಂದ 1.40 ಲಕ್ಷ ಕೋಟಿಗೆ ಹೆಚ್ಚಿಸುವ ಬಗ್ಗೆ ಗುರುತಿಸಿಕೊಳ್ಳಲಾಗುತ್ತಿದೆ. ಕೇಂದ್ರ ಹಣಕಾಸು ಸಚಿವಾಲಯವು ಫೆಬ್ರವರಿ 1ರ ಬಜೆಟ್ನಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಇದರ ಮಧ್ಯೆ ರಸಗೊಬ್ಬರಕ್ಕೆ ಹೆಚ್ಚುವರಿ ಸಬ್ಸಿಡಿ ನೀಡುವುದಕ್ಕೆ ಸಂಬಂಧಿಸಿದಂತೆ ಇನ್ನೂ ಚರ್ಚೆ ನಡೆಯುತ್ತಿದೆಯೇ ವಿನಃ ಯಾವುದೇ ರೀತಿ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ.

ರೈತರ ಮನಸ್ಸು ಗೆಲ್ಲುವ ಪ್ರಯತ್ನ:
ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವುದರ ಮೂಲಕ ರೈತರ ಕೆಂಗಣ್ಣಿಗೆ ಗುರಿಯಾಗಿದ್ದು, ತದನಂತರದಲ್ಲಿ ಆ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಇದೀಗ ಐದು ರಾಜ್ಯಗಳಲ್ಲಿ ಎದುರಾಗಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ರೈತರ ಮನಸ್ಸನ್ನು ಗೆಲ್ಲುವ ನಿಟ್ಟಿನಲ್ಲಿ ಬಜೆಟ್ ಮಂಡಿಸುವುದಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಏಕೆಂದರೆ ದೇಶದ ಒಟ್ಟು ಜನಸಂಖ್ಯೆಯ ಶೇ.60ರಷ್ಟು ಮಂದಿ ನೇರವಾಗಿ ಅಥವಾ ಪರೋಕ್ಷವಾಗಿ ರೈತರನ್ನು ಅವಲಂಬಿಸಿಕೊಂಡು ಇಂದಿಗೂ ಬದುಕು ನಡೆಸುತ್ತಿದ್ದಾರೆ. ಈ ವರ್ಗವನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಬಾರಿ ಬಜೆಟ್ ಮಂಡಿಸುತ್ತದೆ ಎಂಬ ನಿರೀಕ್ಷೆಗಳು ಹೆಚ್ಚಾಗಿವೆ.
ಫೆಬ್ರವರಿ 2021 ರಲ್ಲಿ ಮಂಡನೆ ಆಗಲಿರುವ ಬಜೆಟ್ನಲ್ಲಿ ಸುಮಾರು 80,000 ಕೋಟಿ ರೂ.ಗಳನ್ನು ಮೀಸಲಿಟ್ಟ ನಂತರ ಪ್ರತಿಭಟನೆಯ ನಡುವೆ ಸರ್ಕಾರವು ಪ್ರಸಕ್ತ ವರ್ಷದಲ್ಲಿ ರಸಗೊಬ್ಬರ ಸಬ್ಸಿಡಿಯನ್ನು ಗಣನೀಯವಾಗಿ ಹೆಚ್ಚಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications