ಫೆಬ್ರವರಿ ಆರಂಭದಿಂದ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಶೇಕಡಾ ನೂರರಷ್ಟು ಪ್ರೇಕ್ಷಕರ ವೀಕ್ಷಣೆಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅವಕಾಶ ಮಾಡಿಕೊಟ್ಟಿದೆ ಎಂದು ಶನಿವಾರ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಮೂಲಕ ಸಿನಿಮಾ ಚಿತ್ರಮಂದಿರಗಳ ಪಾಲಿಗೆ ನಿರಾಳ ಆದಂತಾಗಿದೆ. ಕೊರೊನಾ ಕಾರಣಕ್ಕೆ ಏಳು ತಿಂಗಳಿಂದ ಚಿತ್ರಮಂದಿರಗಳು ಮುಚ್ಚಿದ್ದವು. ಈಚೆಗೆ ಮತ್ತೆ ಕಡಿಮೆ ಸಂಖ್ಯೆಯ ಪ್ರೇಕ್ಷಕರೊಂದಿಗೆ ಆರಂಭವಾಯಿತು. ಹಲವು ಆಫರ್ ಗಳನ್ನು ನೀಡಲಾಗಿತ್ತು.
"ಫೆಬ್ರವರಿ 1ರಿಂದ ಶೇಕಡಾ 100ರಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳೊಂದಿಗೆ ಶುರುವಾಗುತ್ತದೆ. ಇದರಿಂದಾಗಿ ಬಿಡುಗಡೆಗೆ ಬಾಕಿ ಇರುವ ಹಲವು ಸಿನಿಮಾಗಳು ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಆ ಮೂಲಕ ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರಬಹುದು," ಎಂದು ಸಿನಿಮಾ ವಿತರಕ ಮತ್ತು ಪ್ರದರ್ಶಕ ಅಕ್ಷಯ್ ರಾಥಿ ಟ್ವೀಟ್ ಮಾಡಿದ್ದಾರೆ.
ಆದರೆ, ಕಂಟೇನ್ ಮೆಂಟ್ ವಲಯದಲ್ಲಿ ಸಿನಿಮಾ ತೆರೆ ಕಾಣುವುದಿಲ್ಲ. ಉಳಿದೆಡೆಗಳಲ್ಲಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಪಾಲಿಸುವಂತೆ ಸಚಿವಾಲಯದಿಂದ ತಿಳಿಸಲಾಗಿದೆ. ಎಲ್ಲ ಸಿಬ್ಬಂದಿ ಮತ್ತು ಪ್ರೇಕ್ಷಕರು ಸಾಮಾಜಿಕ ಅಂತರ ಪಾಲಿಸಬೇಕು ಹಾಗೂ ಮುಖಕ್ಕೆ ಮಾಸ್ಕ್ ಧರಿಸಿರಬೇಕು ಹಾಗೂ ಆರೋಗ್ಯ ಸೇತು ಅಪ್ಲಿಕೇಷನ್ ಇನ್ ಸ್ಟಾಲ್ ಮಾಡಿಕೊಂಡಿರಬೇಕು ಎನ್ನಲಾಗಿದೆ.

ಹೆಚ್ಚು ದಟ್ಟಣೆ ಆಗದಂತೆ ಏನೆಲ್ಲ ಕ್ರಮ ಕೈಗೊಳ್ಳಬೇಕು ಅವೆಲ್ಲ ಅನುಸರಿಸಲಾಗುತ್ತದೆ. ಚಿತ್ರಮಂದಿರ ಪ್ರತಿ ಸ್ಕ್ರೀನಿಂಗ್ ನಂತರ ಸ್ಯಾನಿಟೈಸ್ ಮಾಡಬೇಕು. ಏರ್ ಕಂಡೀಷನಿಂಗ್ ನಲ್ಲಿ 24ರಿಂದ 30 ಡಿಗ್ರಿಯಷ್ಟಿರಬೇಕು ಎಂದು ತಿಳಿಸಲಾಗಿದೆ.
ಈಚಿನ ಕೆಪಿಎಂಜಿ ವರದಿ ಪ್ರಕಾರ, FY21ರಲ್ಲಿ 67%ಗೂ ಹೆಚ್ಚು ಸಿನಿಮಾ ಸೆಗ್ಮೆಂಟ್ ಕುಗ್ಗಿದೆ. 6100 ಕೋಟಿ ರುಪಾಯಿ ಆದಾಯ ದಾಖಲಿಸಿದೆ. ಈ ಹಿಂದಿನ ವರ್ಷದಲ್ಲಿ 18300 ಕೋಟಿ ರುಪಾಯಿ ಬಂದಿತ್ತು. 1000ಕ್ಕೂ ಹೆಚ್ಚು ಚಿತ್ರಮಂದಿರಗಳು, ಅದರಲ್ಲೂ ಒಂದು ತೆರೆಯ ಚಿತ್ರಮಂದಿರಗಳು ದೇಶದಾದ್ಯಂತ ಮುಚ್ಚಿವೆ. ದೊಡ್ಡ ಬಜೆಟ್ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಬದಲು ನೇರವಾಗಿ ಒಟಿಟಿಯಲ್ಲಿ ಬಂದಿವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications