ಅಂಚೆ ಕಚೇರಿ ಮೂಲಕ ನೀಡುವ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಕೇಂದ್ರ ಸರ್ಕಾರವು ಏರಿಕೆ ಮಾಡಿ ಶುಕ್ರವಾರ ಘೋಷಣೆ ಮಾಡಿದೆ. ಈ ನೂತನ ಬಡ್ಡಿದರವು ಜನವರಿಯಿಂದ ಮಾರ್ಚ್ಗೆ ಕೊನೆಯಾಗುವ ತ್ರೈಮಾಸಿಕಕ್ಕೆ ಅನ್ವಯವಾಗಲಿದೆ. ಆದರೆ ಕೇಂದ್ರ ಸರ್ಕಾರವು ಪಬ್ಲಿಕ್ ಪ್ರಾವಿಂಡೆಂಟ್ ಫಂಡ್ (ಪಿಪಿಎಫ್) ಹಾಗೂ ಸುಕನ್ಯ ಸಮೃದ್ಧಿ ಯೋಜನೆಯ ಬಡ್ಡಿದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ.
ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು 110 ಮೂಲಾಂಕ ಹೆಚ್ಚಳ ಮಾಡಿದೆ. ಆದರೆ ಪಬ್ಲಿಕ್ ಪ್ರಾವಿಂಡೆಂಟ್ ಫಂಡ್ (ಪಿಪಿಎಫ್) ಹಾಗೂ ಸುಕನ್ಯ ಸಮೃದ್ಧಿ ಯೋಜನೆಯ ಬಡ್ಡಿದರವು ಈ ಹಿಂದಿನಂತೆ ಕ್ರಮವಾಗಿ ಶೇಕಡ 7.1 ಮತ್ತು ಶೇಕಡ 7.6ರಷ್ಟಾಗಿದೆ. ಈ ಬಡ್ಡಿದರವು ಜನವರಿ-ಮಾರ್ಚ್ ತ್ರೈಮಾಸಿಕಕ್ಕೆ ಈ ಬಡ್ಡಿದರ ಅನ್ವಯವಾಗುತ್ತದೆ.
ರೆಪೋ ದರ ಹೆಚ್ಚಾದಂತೆ ಬಡ್ಡಿರವು ಕೂಡಾ ಹೆಚ್ಚಾಗುತ್ತಿದೆ. ಈ ನಡುವೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಏರಿಕೆಯನ್ನು ಈ ಹಿಂದೆಯೇ ನಿರೀಕ್ಷೆ ಮಾಡಲಾಗಿತ್ತು. ಆದರೆ ಉಕ್ರೇನ್ ಯುದ್ಧ, ಕೋವಿಡ್ನಿಂದಾಗಿ ಸರ್ಕಾರದ ಹಣಕಾಸು ಸ್ಥಿತಿ ಈಗಲೇ ಒತ್ತಡಕ್ಕೆ ಒಳಗಾಗಿರುವಾಗ ಬಡ್ಡಿದರದಿಂದಾಗಿ ಸರ್ಕಾರವು ಕೊಂಚ ಒತ್ತಡಕ್ಕೆ ಒಳಗಾಗಬಹುದು ಎಂದು ತಜ್ಞರ ಅಭಿಪ್ರಾಯವಾಗಿದೆ.

ಯಾವೆಲ್ಲ ಯೋಜನೆಗಳ ಬಡ್ಡಿದರ ಏರಿಕೆ?
ಎರಡನೇ ಬಾರಿಗೆ ಹೀಗೆ ಬಡ್ಡಿದರವನ್ನು ಹೆಚ್ಚಳ ಮಾಡಲಾಗಿದೆ. ಸುಮಾರು ಒಂಬತ್ತು ತಿಂಗಳುಗಳ ಬಳಿಕ ಸರ್ಕಾರವು ಡಿಸೆಂಬರ್ ತ್ರೈಮಾಸಿಕದಲ್ಲಿ ಬಡ್ಡಿದರವನ್ನು ಹೆಚ್ಚಳ ಮಾಡಿತ್ತು. ರಾಷ್ಟ್ರೀಯ ಉಳಿತಾಯ ಯೋಜನೆ (ಎನ್ಎಸ್ಪಿ), ಹಿರಿಯ ನಾಗರಿಕರ ಉಳಿತಾಯ ಯೋಜನೆ, ಕಿಸಾನ್ ವಿಕಾಸ ಪತ್ರ ಯೋಜನೆಗಳ ಮೇಲಿನ ಬಡ್ಡಿದರವನ್ನು ಏರಿಕೆ ಮಾಡಲಾಗಿದೆ. ಈ ಯೋಜನೆಗಳ ಅಡಿಯಲ್ಲಿ ಲಭ್ಯವಾಗುವ ಬಡ್ಡಿಗೆ ತೆರಿಗೆ ಇದೆ.
ಹೆಣ್ಣು ಮಕ್ಕಳ ಹೆಸರಿನಲ್ಲಿ ಉಳಿತಾಯ ಮಾಡುವುದನ್ನು ಪ್ರೋತ್ಸಾಹಿಸುವ ಸಲುವಾಗಿ ಸುಕನ್ಯಾ ಸಮೃದ್ಧಿ ಯೋಜನೆಯಿದ್ದು ಅದರ ಬಡ್ಡಿದರವು ಶೇಕಡ 7.6ರಷ್ಟಿದೆ. 2022ರ ಮೇ ತಿಂಗಳ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರವನ್ನು ಶೇಕಡ 2.25ರಷ್ಟು ಬಡ್ಡಿದರವನ್ನು ಹೆಚ್ಚಿಸಿದೆ. ಪ್ರಸ್ತುತ ರೆಪೋ ದರ ಶೇಕಡ 6.25ರಷ್ಟಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications