ಕೊರೊನಾವೈರಸ್ ಸೋಂಕಿನಿಂದ ದೇಶವು ಭಾರೀ ಪರಿಣಾಮ ಎದುರಿಸುತ್ತಿದ್ದು, ದಿನಗೂಲಿ ನೌಕರರಿಗೆ 1,000 ರುಪಾಯಿ ನೀಡುವುದಾಗಿ ಉತ್ತರ ಪ್ರದೇಶ ಸರ್ಕಾರ ಮುಖ್ಯಮಂತ್ರಿ ಯೋಗಿ ಆದಿದ್ಯನಾಥ್ ಘೋಷಿಸಿದ್ದಾರೆ.
ದೇಶದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗುತ್ತಿದ್ದು, ಸೋಂಕು ತಡೆಯಲು ಜನರು ಮನೆಯಲ್ಲಿ ಇರಲು ಸರ್ಕಾರವು ಮನವಿ ಮಾಡುತ್ತಿದೆ. ಇದರಿಂದಾಗಿ ಸಹಜವಾಗಿ ಬೀದಿ ಬದಿ ವ್ಯಾಪಾರಿಗಳು, ದಿನಗೂಲಿ ನೌಕರರ ಮೇಲೆ ಪರಿಣಾಮ ಬೀರುತ್ತಿದ್ದು, ದೈನಂದಿನ ಜೀವನ ನಡೆಸಲು ಬಹಳ ಕಷ್ಟಸಾಧ್ಯವಾಗಿದೆ.

ದಿನಗೂಲಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸರ್ಕಾರ ಈ ಘೋಷಣೆ ಮಾಡಿದ್ದು, 35 ಲಕ್ಷ ಜನರಿಗೆ ಇದರ ಸೌಲಭ್ಯ ಸಿಗಲಿದೆ. ಇದರಲ್ಲಿ 20 ಲಕ್ಷದ 37 ಸಾವಿರ ದಿನಗೂಲಿ ನೌಕರರು ಮತ್ತು ಆಟೋ ಚಾಲಕರಿದ್ದಾರೆ.
''ಪ್ರಸ್ತುತ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಲ್ಪಟ್ಟಿರುವ ದಿನಗೂಲಿ ನೌಕರರು, ರಿಕ್ಷಾ ಚಾಲಕರು ಇತ್ಯಾದಿಗಳಿಗೆ 1,000 ರುಪಾಯಿ ನೀಡಲು ನಿರ್ಧರಿಸಿದ್ದೇವೆ. ತಮ್ಮ ಜೀವನೋಪಾಯಕ್ಕಾಗಿ ದೈನಂದಿನ ಆದಾಯವನ್ನು ಅವಲಂಬಿಸಿರುವ ಸುಮಾರು 15 ಲಕ್ಷ ಜನರಿಗೆ ಅದೇ ವಿತ್ತೀಯ ಪರಿಹಾರವನ್ನು ನೀಡಲಾಗುವುದು. ಕಾರ್ಮಿಕ ಇಲಾಖೆಯ ಸಹಾಯದಿಂದ ಈ ನಿರ್ಧಾರ ಕೈಗೊಳ್ಳಲಾಗುವುದು'' ಎಂದು ಯೋಗಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಶನಿವಾರ ಒಟ್ಟು ಕೊರೊನಾವೈರಸ್ ಸೋಂಕಿನ ಪ್ರಕರಣಗಳು 23 ಕ್ಕೆ ತಲುಪಿದ್ದು, ಲಕ್ನೋದಲ್ಲಿ ಒಂಬತ್ತು, ಆಗ್ರಾದಲ್ಲಿ ಎಂಟು, ನೋಯ್ಡಾದಲ್ಲಿ ನಾಲ್ಕು, ಗಾಜಿಯಾಬಾದ್ನಲ್ಲಿ ಎರಡು ಮತ್ತು ಲಖಿಂಪುರ-ಖೇರಿಯಲ್ಲಿ ಒಂದು ಪ್ರಕರಣಗಳು ದಾಖಲಾಗಿವೆ.
More From GoodReturns

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications