ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾವೈರಸ್ ಸೋಂಕು ಪ್ರಕರಣಗಳನ್ನು ಹೊಂದಿರುವ ಅಮೆರಿಕಾವು ತಾತ್ಕಾಲಿಕವಾಗಿ ವಲಸೆಯನ್ನು ನಿಷೇಧಿಸಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಬೆಳಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿದ್ದಾರೆ.
ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ಮಧ್ಯೆ ಅಮೆರಿಕವು ತಾತ್ಕಾಲಿಕವಾಗಿ ವಲಸೆಯನ್ನು ಸ್ಥಗಿತಗೊಳಿಸಲು ಸಜ್ಜಾಗಿರುವುದರ ಜೊತೆಗೆ, ಲಾಕ್ಡೌನ್ ಕೊನೆಗೊಳಿಸಬೇಕು ಎಂದು ಕೋಪಗೊಂಡು ಬೀದಿಗಿಳಿಯುತ್ತಿರುವ ಅಮೆರಿಕನ್ನರು ಹೋರಾಟ ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

"ಅದೃಶ್ಯ ಶತ್ರುಗಳ ದಾಳಿಯ ಬೆಳಕಿನಲ್ಲಿ, ಹಾಗೆಯೇ ನಮ್ಮ ಗ್ರೇಟ್ ಅಮೆರಿಕನ್ ನಾಗರಿಕರ ಉದ್ಯೋಗಗಳನ್ನು ರಕ್ಷಿಸುವ ಅಗತ್ಯತೆಯೊಂದಿಗೆ, ಅಮೆರಿಕಾವು ವಲಸೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕಾರ್ಯಕಾರಿ ಆದೇಶಕ್ಕೆ ನಾನು ಸಹಿ ಹಾಕುತ್ತೇನೆ! (Sic)," ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಜೊತೆಗೆ ದೇಶದಲ್ಲಿ ಲಾಕ್ಡೌನ್ ವಿರೋಧಿ ಪ್ರತಿಭಟನೆಗಳು ದೇಶದ ಕೆಲವು ಭಾಗಗಳಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.
ಕೊರೊನಾವೈರಸ್ ವಿಶ್ವದಲ್ಲಿ ಎರಡನೇ ಮಹಾ ಆರ್ಥಿಕ ಕುಸಿತದ ಭಯವನ್ನು ಹುಟ್ಟುಹಾಕಿದ. ವಿಶ್ವದಾದ್ಯಂತ ಲಕ್ಷಾಂತರ ಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಏಕೆಂದರೆ ಅನೇಕ ರಾಷ್ಟ್ರಗಳ ಆರ್ಥಿಕತೆಗಳು ಸ್ಥಗಿತಗೊಳ್ಳುತ್ತವೆ. ವೈರಸ್ ಹರಡುವುದನ್ನು ನಿಧಾನಗೊಳಿಸಲು ವ್ಯಾಪಕವಾದ ಲಾಕ್ಡೌನ್ಗಳನ್ನು ಜಾರಿಗೆ ತಂದ ನಂತರ ಕನಿಷ್ಠ 22 ಮಿಲಿಯನ್(2.2 ಕೋಟಿ) ಅಮೆರಿಕನ್ನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಮತ್ತು ದೇಶದ ಕೆಲವು ಭಾಗಗಳಲ್ಲಿ ನಿರುದ್ಯೋಗ ಪ್ರಮಾಣ ಬೆಳೆಯುತ್ತಿದೆ.
ಭಾರತದಿಂದ ಅಮೆರಿಕಾಕ್ಕೆ ತೆರಳಿದವರು ಹೆಚ್-1ಬಿ ವೀಸಾ ವಲಸೆ ರಹಿತ ವೀಸಾ ಆಗಿದೆ. ಈ ನಿರ್ಬಂಧದಿಂದಾಗಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಪ್ರಯಾಣದ ನಿರ್ಬಂಧಗಳ ಜೊತೆಗೆ ಈಗಾಗಲೇ ಹೊಸ H-1B ವೀಸಾಗಳನ್ನು ನೀಡಿರುವುದರ ಮೇಲೆ ಪರಿಣಾಮ ಬೀರುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications