ಹೊಸ ಬೆಳೆಗಳು ಮಾರುಕಟ್ಟೆಯಲ್ಲಿ ಲಭ್ಯವಾಗುವುದರಿಂದ ಮುಂದಿನ ತಿಂಗಳು ತರಕಾರಿ ಬೆಲೆಗಳು ಇಳಿಕೆಯಾಗಲು ಪ್ರಾರಂಭವಾಗುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ. ಆದರೆ ಕಚ್ಚಾ ತೈಲ ಬೆಲೆಗಳು ಏರಿಕೆಯಾಗುತ್ತಿದೆ. ಈ ತೈಲ ದರವು ಪ್ರತಿ ಬ್ಯಾರೆಲ್ಗೆ 90 ಡಾಲರ್ನ ಸನಿಹದಲ್ಲಿ ಅಥವಾ ಅದಕ್ಕಿಂತ ಅಧಿಕವಾಗಿ ಉಳಿದರೆ ಮಾತ್ರ ಸ್ಥಿತಿ ಕಳವಳಕಾರಿಯಾಗುತ್ತದೆ ಎಂದು ವರದಿ ಹೇಳಿದೆ.
ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಚಿಂತನೆಯನ್ನು ಸದ್ಯಕ್ಕೆ ನಡೆಸಿಲ್ಲ, ಇದರ ಬದಲಾಗಿ ಕೇಂದ್ರ ಸರ್ಕಾರವು ಮೂಲಸೌಕರ್ಯ ಹೂಡಿಕೆಗೆ ಅಧಿಕವಾಗಿ ಗಮನಹರಿಸುತ್ತಿದೆ. ಖಾಸಗಿ ವಲಯದ ಬಂಡವಾಳ ಹೂಡಿಕೆ ಇನ್ನಷ್ಟೇ ಹೆಚ್ಚಳವಾಗಬೇಕಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ತಿಳಿಸಿದೆ.

ಅಬಕಾರಿ ಸುಂಕ ಕಡಿಮೆ ಮಾಡುವ ಚಿಂತನೆ ಸರ್ಕಾರಕ್ಕಿಲ್ಲ
ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಚಿಂತನೆಯನ್ನು ನಡೆಸಿಲ್ಲ. ಬದಲಾಗಿ ಮೂಲಸೌಕರ್ಯ ಹೂಡಿಕೆಯನ್ನು ಆರಂಭ ಮಾಡುವತ್ತ ಸರ್ಕಾರವು ಗಮನಹರಿಸುತ್ತಿದೆ. ಖಾಸಗಿ ವಲಯದ ಬಂಡವಾಳ ಹೂಡಿಕೆಯು ಇನ್ನೂ ನಿಧಾನವಾಗಿದೆ. ಆದರೆ ಸರ್ಕಾರವು ಸೆಪ್ಟೆಂಬರ್ ವೇಳೆಗೆ ಅದನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಸೆಪ್ಟೆಂಬರ್ ವೇಳೆಗೆ ಕೇಂದ್ರದ ಬಂಡವಾಳ ವೆಚ್ಚವು ಬಜೆಟ್ ಅಂದಾಜುಗಳ ಶೇಕಡ 50ರಷ್ಟು ತಲುಪುವ ನಿರೀಕ್ಷೆಯಿದೆ.
ಗೋಧಿ ಮತ್ತು ಅಕ್ಕಿ ದಾಸ್ತಾನುಗಳನ್ನು ಮೀಸಲುಗಳಿಂದ ಬಿಡುಗಡೆ ಮಾಡುವುದು, ಅಕ್ಕಿ ಮತ್ತು ಸಕ್ಕರೆ ರಫ್ತಿನ ಮೇಲೆ ನಿರ್ಬಂಧಗಳನ್ನು ಹಾಕುವುದು ಹಾಗೂ ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳ ಆಮದನ್ನು ಅನುಮತಿಸುವುದು ಸೇರಿದಂತೆ ಹಣದುಬ್ಬರವನ್ನು ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ವರದಿ ಹೇಳಿದೆ.
ಸರ್ಕಾರದ ವ್ಯಾಪಾರ ನೀತಿ
"ಸರ್ಕಾರವು ಬೆಲೆಗಳನ್ನು ಕಡಿಮೆ ಮಾಡಲು ಸಹಕಾರಿಯಾಗುವ ವ್ಯಾಪಾರ ನೀತಿಯನ್ನು ಅಳವಡಿಸಿಕೊಂಡಿದೆ. ಉಕ್ರೇನ್ ಯುದ್ಧದಿಂದಾಗಿ ಜಾಗತಿಕ ಆಹಾರದ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಆಹಾರ ಧಾನ್ಯಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಇದೊಂದು ಜಾಗತಿಕ ಸಮಸ್ಯೆಯಾಗಿದೆ ಎಂಬುವುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ನಮ್ಮ ಜನರನ್ನು ಹಣದುಬ್ಬರದಿಂದ ದೂರವಿಡುವ ನಿಟ್ಟಿನಲ್ಲಿ ನಾವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇತರರಿಗೆ ಹೋಲಿಕೆ ಮಾಡಿದಾಗ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ," ಎಂದು ಸರ್ಕಾರಿ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದೆ.
"ಕಚ್ಚಾ ತೈಲ ಬೆಲೆ ಏರಿಕೆಯು ಕಳವಳಕಾರಿಯಾಗಿದೆ. ಆದರೆ ತೈಲ ಮಾರುಕಟ್ಟೆ ಕಂಪನಿಗಳ ಪ್ರಕಾರ ಬೆಲೆಯು ನಿಯಂತ್ರಣದಲ್ಲಿದೆ. ಇದೀಗ ಯಾವುದೇ ನೀತಿ ಹೊಂದಾಣಿಕೆಯ ಅಗತ್ಯವಿರುವುದಿಲ್ಲ. ಬಜೆಟ್ ಲೆಕ್ಕಾಚಾರಗಳು ಜಾರಿಯಲ್ಲಿವೆ. ನಾವು ಸುಮಾರು ಪ್ರತಿ ಬ್ಯಾರೆಲ್ಗೆ 90 ಡಾಲರ್ಗಳು ಆಗುವವರೆಗೂ ಚಿಂತೆ ಮಾಡಬೇಕಾದ ಸ್ಥಿತಿ ಇರುವುದಿಲ್ಲ. 90 ಡಾಲರ್ ಆಚೆಗೆ ತಲುಪಿದರೆ, ಹಣದುಬ್ಬರ ಹಾಗೂ ಇತರೆ ಬೆಲೆ ಏರಿಕೆ ಸಮಸ್ಯೆ, ಇತರೆ ಅಂಶಗಳ ಮೇಲೆ ಪ್ರಭಾವ ಬೀರುತ್ತದೆ," ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಖಲೆ ಮಟ್ಟದಲ್ಲಿ ರಿಟೇಲ್ ಹಣದುಬ್ಬರ
ರಿಟೇಲ್ ಹಣದುಬ್ಬರವು ಜೂನ್ನಲ್ಲಿ ಶೇಕಡ 4.87 ರಿಂದ ಜುಲೈನಲ್ಲಿ ಶೇಕಡ 7.44 ಕ್ಕೆ ಏರಿಕೆಯಾಗಿದೆ. ಇದು 15 ತಿಂಗಳ ಗರಿಷ್ಠ ಮಟ್ಟವಾಗಿದೆ. ಆದರೂ ಸಗಟು ಹಣದುಬ್ಬರವು ಜುಲೈನಲ್ಲಿ ಶೇಕಡ (-)1.36 ರಲ್ಲಿ ಉಳಿದಿದೆ. ಸತತ ನಾಲ್ಕನೇ ತಿಂಗಳು ಇಷ್ಟು ಕಡಿಮೆ ಮಟ್ಟದಲ್ಲಿದೆ. ತರಕಾರಿ ಹಣದುಬ್ಬರು ಶೇಕಡ 37.44, ಮಸಾಲೆ ಪದಾರ್ಥಗಳ ಹಣದುಬ್ಬರ ಶೇಕಡ 21.63, ಬೇಳೆಕಾಳುಗಳ ಹಣದುಬ್ಬರ ಶೇಕಡ 13.27 ಮತ್ತು ಸರಕುಗಳ ಹಣದುಬ್ಬರವು ಶೇಕಡ 13 ಆಗಿದೆ. ಇನ್ನು ಧಾನ್ಯಗಳು ಮತ್ತು ಉತ್ಪನ್ನಗಳ ಹಣದುಬ್ಬರವು ಶೇಕಡ 13 ಆಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications